ಆ್ಯಪ್ನಗರ

ಮಂಡ್ಯ: ಹಸು ತೊಳೆಯಲು ಹೋಗಿ ಒಂದೇ ಕುಟುಂಬದ ಮೂವರು ಜಲಸಮಾಧಿ

ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನಾಗಮಂಗಲ ತಾಲೂಕಿನ ಬೋಗಾದಿ ಸಮೀಪದ ಬೀರನಹಳ್ಳಿ ಗ್ರಾಮದಲ್ಲಿ ಹಸು ತೊಳೆಯಲು ಹೋದ ಮಹಿಳೆ ಸೇರಿ ಮೂರು ಜನ ಜಲಸಮಾಧಿಯಾಗಿದ್ದಾರೆ.

Vijaya Karnataka Web 14 Jun 2020, 4:10 pm
ಮಂಡ್ಯ: ನಾಗಮಂಗಲ ತಾಲೂಕಿನ ಬೋಗಾದಿ ಸಮೀಪದ ಬೀರನಹಳ್ಳಿ ಗ್ರಾಮದಲ್ಲಿ ಹಸು ತೊಳೆಯಲು ಹೋದ ಮಹಿಳೆ ಸೇರಿ ಮೂರು ಮಂದಿ ಜಲಸಮಾಧಿಯಾಗಿರುವ ದುರ್ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
Vijaya Karnataka Web ಮಂಡ್ಯ
ಮಂಡ್ಯದಲ್ಲಿ ಮೂರು ಜನ ಜಲಸಮಾಧಿ


ಗ್ರಾಮದ ನರಸಿಂಹಯ್ಯ ಅವರ ಪತ್ನಿ ಗೀತಾ (45), ಮಕ್ಕಳಾದ ಸವಿತಾ (20), ಸೌಮ್ಯ (16) ನೀರಿನಲ್ಲಿ ಮುಳುಗಿ ಮೃತರಾದ ದುರ್ದೈವಿಗಳಾಗಿದ್ದಾರೆ. ಗ್ರಾಮದ ಬಳಿಯ ಇರುವ ಮಲ್ಲಯ್ಯನಕಟ್ಟೆ ಯಲ್ಲಿ ಗೀತಾ ಹಸು ಮೈ ತೊಳೆಯುತ್ತಿರುವಾಗ ಹಸು ನೀರಿಗೆ ಎಳೆದಿದೆ. ಈ ಸಮಯದಲ್ಲಿ ನಿಯಂತ್ರಣ ಕಳೆದುಕೊಂಡ ತಾಯಿ ಗೀತಾ ನೀರಿಗೆ ಬಿದ್ದಿದ್ದಾರೆ.

ಇದೇ ವೇಳೆ ಇದೇ ಕಟ್ಟೆಯಲ್ಲಿ ಪಾತ್ರೆ ಹಾಗೂ ಬಟ್ಟೆ ತೊಳೆಯುತ್ತಿದ್ದ ಮಕ್ಕಳಾದ ಸವಿತಾ ಮತ್ತು ಸೌಮ್ಯ ತಾಯಿಯ ರಕ್ಷಣೆಗಾಗಿ ನೀರಿಗೆ ಇಳಿದಿದ್ದಾರೆ. ಈ ವೇಳೆ ಎಲ್ಲರೂ ನೀರಿನಲ್ಲಿ ಮುಳುಗಿ ಮೃತರಾಗಿದ್ದಾರೆ. ಅಕ್ಕ ಪಕ್ಕದಲ್ಲಿ ಯಾರು ಇಲ್ಲದಿದ್ದರಿಂದ ಇವರ ರಕ್ಷಣೆ ಸಾಧ್ಯವಾಗಿಲ್ಲ ಮೂವರು ಜಲಸಮಾಧಿಯಾಗಿದ್ದಾರೆ.

ಸವಿತಾ ಪದವಿ, ಸೌಮ್ಯ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕಟ್ಟೆಯಲ್ಲಿ ಪಾತ್ರೆ, ಬಟ್ಟೆ ಇರುವುದನ್ನು ಗಮನಿಸಿದ ಗ್ರಾಮಸ್ಥರು ಕಟ್ಟೆಯಲ್ಲಿ ಪರಿಶೀಲನೆ ನಡೆಸಿ ಮೂರು ಶವಗಳನ್ನು ಮೇಲೆತ್ತಿ ಆದಿಚುಂಚನಗಿರಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮಂಡ್ಯ: ಲಾಕ್‌ಡೌನ್‌ ಉಲ್ಲಂಘಿಸಿ ಕೆಆರ್‌ಎಸ್‌ ಡ್ಯಾಂ ಬಳಿ ಬರ್ತ್‌ಡೇ ಪಾರ್ಟಿ

ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸಿಪಿಐ ಕೆ.ರಾಜೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ