ಆ್ಯಪ್ನಗರ

ಟಿಪ್ಪು ಸುಲ್ತಾನ್ ಜಯಂತಿಗೆ ತಡೆ: ಹೈಕೋರ್ಟ್‌ನಲ್ಲಿ ಪಿಐಎಲ್ ವಿಚಾರಣೆ ಇಂದು

ಟಿಪ್ಪು ಜಯಂತಿ ಆಚರಣೆ ಆದೇಶಕ್ಕೆ ತಡೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದ್ದು , ನ. 3ರಂದು ಹಂಗಾಮಿ ಮುಖ್ಯ ನ್ಯಾಯಾಧೀಶ ಎಚ್.ಜಿ.ರಮೇಶ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠದ ಮುಂದೆ ವಿಚಾರಣೆಗೆ ಬರಲಿದೆ.

Vijaya Karnataka 3 Nov 2017, 12:05 am
ಶ್ರೀಮಂಗಲ/ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ಆದೇಶಕ್ಕೆ ತಡೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದ್ದು , ನ. 3ರಂದು ಹಂಗಾಮಿ ಮುಖ್ಯ ನ್ಯಾಯಾಧೀಶ ಎಚ್.ಜಿ.ರಮೇಶ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠದ ಮುಂದೆ ವಿಚಾರಣೆಗೆ ಬರಲಿದೆ.
Vijaya Karnataka Web tipu jayanti pil hearing today in high court
ಟಿಪ್ಪು ಸುಲ್ತಾನ್ ಜಯಂತಿಗೆ ತಡೆ: ಹೈಕೋರ್ಟ್‌ನಲ್ಲಿ ಪಿಐಎಲ್ ವಿಚಾರಣೆ ಇಂದು


ಕರ್ನಾಟಕ ಸರಕಾರದ ಆದೇಶ ಸಂಖ್ಯೆ ಕ.ಸಂ.ವಾ. 139-2016/ 2092016 ಅನ್ನು ಉಲ್ಲೇಖಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹೊರಡಿಸಿರುವ ಸುತ್ತೋಲೆ ಸಂಖ್ಯೆ ಡಿಕೆಸಿ. 40025/59/2017 ಯಲ್ಲಿ ರಾಜ್ಯದ 30 ಜಿಲ್ಲೆಗಳ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ನ. 10ರಂದು ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಯನ್ನು ಸರಕಾರಿ ಕಾರ್ಯಕ್ರಮವಾಗಿ ಆಚರಿಸಲು ನಿರ್ದೇಶಿಸಲಾಗಿದ್ದು, ಈ ಆದೇಶಕ್ಕೆ ತಡೆ ಕೋರಿ ಯುನೈಟೆಡ್ ಕೊಡವ ಆರ್ಗನೈಸೇಷನ್ (ಯುಕೊ) ಸಂಚಾಲಕ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅವರು ನ್ಯಾಯವಾದಿ ಪವನಚಂದ್ರ ಶೆಟ್ಟಿ ಅವರ ಮೂಲಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಕೊಡಗು ಜಿಲ್ಲಾಧಿಕಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯ ದರ್ಶಿ ಹಾಗೂ ಇಲಾಖೆಯ ನಿರ್ದೇಶಕ ರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದ್ದು, ಅರ್ಜಿದಾರರ ಪರವಾಗಿ ಮತ್ತೊಬ್ಬ ನ್ಯಾಯ ವಾದಿ ಟಿ.ಎನ್.ರಘುಪತಿ ಅವರೂ ವಾದ ಮಂಡಿಸಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಯುಕೊ ಸಂಚಾಲಕ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ‘‘ಸರಕಾರ ಟಿಪ್ಪು ಜಯಂತಿ ಆಚರಣೆ ಮಾಡುವಂತೆ ಹೊರಡಿಸಿ ರುವ ಆದೇಶ ದಿಂದ ಟಿಪ್ಪುವಿನಿಂದ ದೌರ್ಜನ್ಯ ಕ್ಕೊಳಗಾಗಿ ಒಟ್ಟಾರೆ ಜನಸಂಖ್ಯೆಯ ಶೇ. 50ರಷ್ಟು ಜರನ್ನು ಕಳೆದುಕೊಂಡಿರುವ ಕೊಡವ ಜನಾಂಗದ ಭಾವನೆಗೆ ಧಕ್ಕೆಯಾಗಿದೆ. ಟಿಪ್ಪುವಿನ ಮಾರಣ ಹೋಮದ ಕರಾಳ ನೆನಪುಗಳು ಕೊಡವರ ಮನಸ್ಸಿನಲ್ಲಿ ಇನ್ನೂ ಹಸಿರಾಗಿ ಉಳಿದಿರುವಂತೆಯೇ ಕರ್ನಾಟಕ ಸರಕಾರ ಕೊಡಗು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಒತ್ತಾಯ ಪೂರ್ವಕವಾಗಿ ಟಿಪ್ಪು ಜಯಂತಿಯನ್ನು ಸರಕಾರಿ ಕಾರ್ಯಕ್ರಮವಾಗಿ ವಿಜಂಭಣೆ ಯಿಂದ ಆಚರಿಸಲು ಹೊರಟಿರು ವುದು ಈ ರಾಜ್ಯದ ಅಲ್ಪಸಂಖ್ಯಾತ ಕೊಡವ ಜನಾಂಗಕ್ಕೆ ಮಾಡುತ್ತಿರುವ ಅವಮಾನ ಹಾಗೂ ಜನಾಂಗಿಯ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಪ್ರಯತ್ನ. ಆದ್ದರಿಂದ ಜನ ಬಲ ಹಾಗೂ ಅಧಿಕಾರ ಬಲವನ್ನು ಹೊಂದಿರುವ ನಮಗೆ ನ್ಯಾಯಾಲಯದ ಮೊರೆ ಹೋಗು ವುದೊಂದೇ ದಾರಿ ಎಂಬುದನ್ನು ಮನಗಂಡು ನ್ಯಾಯಾಂಗ ಹೋರಾಟಕ್ಕೆ ಇಳಿದಿದ್ದೇವೆ,’’ ಎಂದು ತಿಳಿಸಿದ್ದಾರೆ.

‘‘ಈ ಕಾನೂನು ಹೋರಾಟದಲ್ಲಿ ಜಯ ನಮ್ಮ ಪರವಾಗಿರ ಲಿದೆ,’’ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮಂಜು ಚಿಣ್ಣಪ್ಪ, ‘‘ಜಯ ಸಿಗುವವರೆಗೂ ಹೋರಾಟವನ್ನು ಮುಂದುವರಿಸ ಲಾಗುವುದು,’’ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ