ಆ್ಯಪ್ನಗರ

ರೈತರ ಸಮಸ್ಯೆಗೆ ಸ್ಪಂದಿಸದ ಉಪವಿಭಾಗಾಧಿಕಾರಿ: ಆರೋಪ

ಉಪವಿಭಾಗಾಧಿಕಾರಿ ಅವರು ರೈತರ ಬಗ್ಗೆ ಸ್ವಲ್ಪ ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದು, ಸಮಸ್ಯೆ ಹೇಳಿಕೊಂಡು ಕಚೇರಿಗೆ ಬರುವ ರೈತರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ರೈತ ಸಂಘದ ಕಾರ‌್ಯಾಧ್ಯಕ್ಷ ಬಿ.ಟಿ.ಮಂಜುನಾಥ್ ಆರೋಪಿಸಿದರು.

ವಿಕ ಸುದ್ದಿಲೋಕ 12 Apr 2017, 5:16 am
ಪಾಂಡವಪುರ: ಉಪವಿಭಾಗಾಧಿಕಾರಿ ಅವರು ರೈತರ ಬಗ್ಗೆ ಸ್ವಲ್ಪ ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದು, ಸಮಸ್ಯೆ ಹೇಳಿಕೊಂಡು ಕಚೇರಿಗೆ ಬರುವ ರೈತರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ರೈತ ಸಂಘದ ಕಾರ‌್ಯಾಧ್ಯಕ್ಷ ಬಿ.ಟಿ.ಮಂಜುನಾಥ್ ಆರೋಪಿಸಿದರು.
Vijaya Karnataka Web upavibhagadhikari respond to the problem of farmers the charges
ರೈತರ ಸಮಸ್ಯೆಗೆ ಸ್ಪಂದಿಸದ ಉಪವಿಭಾಗಾಧಿಕಾರಿ: ಆರೋಪ


‘‘ತಾಲೂಕಿನಲ್ಲಿ ಬರಗಾಲದಿಂದ ಜನ- ಜಾನುವಾರುಗಳಿಗೆ ಕುಡಿಯುವ ನೀರು, ಮೇವಿಗೆ ಸಾಕಷ್ಟು ತೊಂದರೆ ಎದುರಾಗಿದೆ. ಸ್ಥಳೀಯ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರು ಕುಡಿಯುವ ನೀರಿನ ಸಂಬಂಧ ಹತ್ತಾರು ಸಭೆಗಳನ್ನು ನಡೆಸಿ ನೀರು ಪೂರೈಕೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಆದರೆ, ಉಪವಿಭಾಗಾಧಿಕಾರಿ ಆರ್.ಯಶೋಧ ಅವರು ಕುಡಿಯುವ ನೀರು ಪೂರೈಕೆ ಮಾಡುವ ನೆಪ್ಪಕ್ಕೆ ಒಂದೆರಡು ಸಭೆಗಳನ್ನು ನಡೆಸಿ ಸುಮ್ಮುನಾಗಿದ್ದಾರೆ,’’ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.

‘‘ಇವರು ಒಂದೇ ಒಂದು ಗ್ರಾಮಕ್ಕೆ ತೆರಳಿ ಜನರ ಸಮಸ್ಯೆಯನ್ನು ಆಲಿಸುವ ಕೆಲಸ ಮಾಡುತ್ತಿಲ್ಲ, ಕಚೇರಿಯನ್ನು ಬಿಟ್ಟು ಎಲ್ಲಿಗೂ ಹೋಗುವುದಿಲ್ಲ ಹೀಗಾದರೆ ಜನರ ಸಮಸ್ಯೆಯನ್ನು ಬಗೆಹರಿಸೋದು ಹೇಗೆ. ಇನ್ನೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗಿದೆ. ತಹಸೀಲ್ದಾರ್ ಡಿ.ಹನುಮಂತರಾಯಪ್ಪ ಅವರು ಸ್ವಲ್ಪ ಪ್ರಮಾಣದ ಮೇವನ್ನು ಖರೀದಿಸಿ ಪಟ್ಟಣದ ಪ್ರವಾಸಿ ಮಂದಿರಲ್ಲಿ ಸಂಗ್ರಹಿಸಿದ್ದಾರೆ. ಆದರೆ ದಿನೇ ದಿನೇ ಮೇವಿನ ಸಮಸ್ಯೆ ಎದುರಾಗಿದ್ದರು ಮೇವು ವಿತರಣೆ ಮಾಡದೇ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ,’’ ಎಂದು ಆರೋಪಿಸಿದರು.

‘‘ಒಬ್ಬ ಸರಕಾರಿ ಅಧಿಕಾರಿಗಳಾಗಿ ಸಾರ್ವಜನಿಕ ಕೆಲಸ ಕಾರ‌್ಯಗಳನ್ನು ಮಾಡುವ ಬದಲು ಸುಮ್ಮನೆ ಕಾಲಹರಣ ಮಾಡುತ್ತಿದ್ದಾರೆ. ಮುಂದಿನ ದಿನಗಳಾದರು ರೈತರ ಹಾಗೂ ಸಮಸ್ಯೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಮುಂದಾಗಬೇಕು. ಕಚೇರಿಯಲ್ಲಿ ತಾವು ಸಿಗುವ ಸಮಯವನ್ನು ನೋಟಿಸ್ ಬೋರ್ಡ್‌ನಲ್ಲಿ ಹಾಕಬೇಕು ಮತ್ತು ರೈತರು ಹಾಗೂ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಇಲ್ಲವಾದರೆ ತಮ್ಮ ವಿರುದ್ಧ ಪ್ರತಿಭಟನೆ ಮಾಡುವುದಾಗಿ,’’ ಎಚ್ಚರಿಸಿದರು.
ಗೋಷ್ಠಿಯಲ್ಲಿ ರೈತ ಮುಖಂಡರಾದ ದಿನೇಶ್, ಗಿರೀಶ್ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ