ಆ್ಯಪ್ನಗರ

ಪಲ್ಸ್‌ ಪೋಲಿಯೋ ಮಾದರಿಯಲ್ಲಿ ರಾಸುಗಳಿಗೆ ಕಾಲುಬಾಯಿ ರೋಗಕ್ಕೆ ಲಸಿಕೆ

5 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ವಿಕ ಸುದ್ದಿಲೋಕ ಮಂಡ್ಯ ಜಿಲ್ಲೆಯಲ್ಲಿ ಜೂ...

Vijaya Karnataka 2 Jun 2018, 5:00 am
ಮಂಡ್ಯ: ಜಿಲ್ಲೆಯಲ್ಲಿ ಜೂ.1ರಿಂದ 25ರವರೆಗೆ ಪಲ್ಸ್‌ ಪೋಲಿಯೋ ಮಾದರಿಯಲ್ಲಿ ಕಾಲುಬಾಯಿ ಜ್ವರದ ವಿರುದ್ಧ ಲಸಿಕೆ ಹಾಕಲಾಗುತ್ತಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಪ್ರಕಾಶ್‌ ತಿಳಿಸಿದರು.
Vijaya Karnataka Web vaccine for lesions to rashes like pulse polio in mandya district
ಪಲ್ಸ್‌ ಪೋಲಿಯೋ ಮಾದರಿಯಲ್ಲಿ ರಾಸುಗಳಿಗೆ ಕಾಲುಬಾಯಿ ರೋಗಕ್ಕೆ ಲಸಿಕೆ


ತಾಲೂಕಿನ ಗೋಪಾಲಪುರ ಗ್ರಾಮದ ಹಾಲಿನ ಡೇರಿ ಆವರಣದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ, ಮನ್‌ಮುಲ್‌ ಸಹಯೋಗದಲ್ಲಿ ಆಯೋಜಿಸಿದ್ದ 14ನೇ ಸುತ್ತಿನ ರಾಷ್ಟ್ರೀಯ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈ ಬಾರಿ ಸುಮಾರು 5 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಹಂದಿ, ಹಸು, ಎಮ್ಮೆ ದನಗಳಿಗೆ ಲಸಿಕೆ ಹಾಕಲಾಗುವುದು. ಇದಕ್ಕಾಗಿ ಪಶುಪಾಲನಾ ಇಲಾಖೆ, ಪಶು ವೈದ್ಯರ ಸೇವಾ ಇಲಾಖೆ ಹಾಗೂ ಮನ್‌ಮುಲ್‌ನ 301 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಸಿಬ್ಬಂದಿಗಳು ಪ್ರತಿದಿನ ಮನೆ-ಮನೆಗಳಿಗೆ ತೆರಳಿ ಲಸಿಕೆ ಹಾಕಲಿದ್ದಾರೆ. ಇದಕ್ಕಾಗಿ 47 ವಾಹನಗಳನ್ನು ಬಳಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ತಿಳಿಸಿದರು.

ಕಾಲುಬಾಯಿ ರೋಗವು ದನ, ಎಮ್ಮೆ, ಹಂದಿ ಮುಂತಾದ ಸೀಳು ಗೊರಸುಳ್ಳ ಮಾರಕವಾದ ವೈರಾಣು ರೋಗವಾಗಿದೆ. ರೋಗದಿಂದ ಜಾನುವಾರು ಗುಣಮುಖವಾದರು ಸಹ ಮುಂದೆ ಗರ್ಭಕಟ್ಟುವಿಕೆಯಲ್ಲಿ ವಿಳಂಬ, ಸಾಮರ್ಥ್ಯ‌ ಮತ್ತು ಇಳುವರಿಯಲ್ಲಿ ಇಳಿಮುಖವಾಗುತ್ತದೆ. ಹೀಗಾಗಿ ರೈತರು ತಮ್ಮ ರಾಸುಗಳಿಗೆ ಕನಿಷ್ಟ ಮೂರು ಬಾರಿ ಲಿಸಕೆ ಹಾಕಿಸುವ ಮೂಲಕ ಕಾಲುಬಾಯಿ ರೋಗದಿಂದ ರಾಸುಗಳನ್ನು ವಿಮುಕ್ತಿಗೊಳಿಸಬಹುದು.

ಈ ಹಿಂದೆ ರೈತರು ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ, ಪ್ರತಿ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ‍್ಯಕ್ರಮದಲ್ಲಿ ರೈತರು ತಮ್ಮ ರಾಸುಗಳಿಗೆ ಲಸಿಕೆ ಹಾಕಿಸಬೇಕೆಂದು ಸಲಹೆ ನೀಡಿದರು.

ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಪ್ರವೀಣ್‌ಕುಮಾರ್‌, ಮನ್‌ಮುಲ್‌ ಉಪ ವ್ಯವಸ್ಥಾಪಕ ಡಾ.ಎಂ.

ಶ್ರೀನಿವಾಸ ರೆಡ್ಡಿ, ಪಶು ವೈದ್ಯ ಡಾ.ಎಚ್‌.ಆರ್‌.ಸುರೇಶ್‌, ವೈದ್ಯ ಡಾ.ಯೋಗೇಶ್‌, ಹಾಲಿನ ಡೈರಿ ಅಧ್ಯಕ್ಷೆ ಜಯ ವೆಂಕಟೇಶ್‌, ಕಾರ‍್ಯದರ್ಶಿ ಜಿ.ವಿ.ಶ್ರೀನಿವಾಸ್‌, ನಿರ್ದೇಶಕರಾದ ಸುಧಾ, ಜಯಮ್ಮ, ಸತೀಶ್‌, ಸಿದ್ದರಾಮು, ಗೋವಿಂದರಾಜು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ