ಆ್ಯಪ್ನಗರ

ಮಂಡ್ಯದಿಂದಲೇ ಸ್ಪರ್ಧೆ, ಇಂದಿನಿಂದ ಸಕ್ಕರೆ ನಾಡಲ್ಲಿ ನನ್ನ ಸೇವೆ ಶುರು: ನಿಖಿಲ್‌ ಕುಮಾರಸ್ವಾಮಿ

ಸುಮಲತಾ ಅಕ್ಕ ಸ್ಪರ್ಧೆ ಬಗ್ಗೆ ನಾನು ಏನೂ ಹೇಳಲ್ಲ. ಚುನಾವಣೆಗೆ ಸ್ಪರ್ಧಿಸೊ ಬಗ್ಗೆ ಅವರು ಸ್ವತಂತ್ರರು. ಅಂಬರೀಶಣ್ಣನ ಬಗ್ಗೆ ನನಗೆ ಗೌರವವಿದೆ. ಅಭಿ ನನ್ನ ತಮ್ಮ ಇದ್ದ ಹಾಗೆ. ಅಂಬಿ ಅಂಕಲ್ ತಂದೆ ಇದ್ದಾಗೆ. ಅವರ ಜತೆಯೂ ಮಾತಾಡ್ತೀನಿ.

Vijaya Karnataka Web 3 Mar 2019, 7:31 pm
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಇಲ್ಲೇ ಮನೆ ಮಾಡುತ್ತೇನೆ. ಕಚೇರಿಯನ್ನೂ ಆರಂಭಿಸುತ್ತೇನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಎಲ್ಲ ಊಹಾಪೋಹಗಳನ್ನು ತಳ್ಳಿ ಹಾಕಿದರು.
Vijaya Karnataka Web ನಿಖಿಲ್‌ ಕುಮಾರಸ್ವಾಮಿ
ನಿಖಿಲ್‌ ಕುಮಾರಸ್ವಾಮಿ


ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್‌, ಮಂಡ್ಯದಿಂದಲೇ ಸ್ಪರ್ಧೆ ಮಾಡುವುದು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.

ಸದ್ಯದಲ್ಲೇ ಕ್ಷೇತ್ರ ಪ್ರವಾಸ ಮಾಡ್ತೀನಿ. ಮಂಡ್ಯದಲ್ಲೇ ಮನೆಯನ್ನೂ ಮಾಡ್ತೀನಿ. ಕಚೇರಿಯನ್ನೂ ತೆರೆಯುತ್ತೇನೆ. ಕಾದು ನೋಡಿ. ಮಂಡ್ಯದಲ್ಲಿ ಇಂದಿನಿಂದ ನನ್ನ ಸೇವೆ ಆರಂಭವಾಗಲಿದೆ‌‌. ನಮ್ಮ ಪಕ್ಷದ ವರಿಷ್ಠರು ನನ್ನ ಹೆಸರು ಘೋಷಣೆ ಮಾಡಿದ್ದಕ್ಕೆ ಆಭಾರಿಯಾಗಿದ್ದೀನಿ ಎಂದರು.

ಮಂಡ್ಯ ಜಿಲ್ಲೆಯ ಜನರ ಭಾವನೆಗಳಿಗೆ ಅನುಗುಣವಾಗಿ ನನ್ನ ಹೆಸರನ್ನು ವರಿಷ್ಠ ನಾಯಕರು ಘೋಷಣೆ ಮಾಡಿದ್ದಾರೆ. ಹೀಗಾಗಿ ಇಂದಿನಿಂದ ಮುಂದೆ ಮಂಡ್ಯದಲ್ಲಿ ನನ್ನ ಸೇವೆ ಶುರು ಆಗುತ್ತದೆ ಎಂದು ನಿಖಿಲ್‌ ಹೇಳಿದರು.

ಸುಮಲತಾ ಅಕ್ಕ ಸ್ಪರ್ಧೆ ಬಗ್ಗೆ ನಾನು ಏನೂ ಹೇಳಲ್ಲ. ಚುನಾವಣೆಗೆ ಸ್ಪರ್ಧಿಸೊ ಬಗ್ಗೆ ಅವರು ಸ್ವತಂತ್ರರು. ಅಂಬರೀಶಣ್ಣನ ಬಗ್ಗೆ ನನಗೆ ಗೌರವವಿದೆ. ಅಭಿ ನನ್ನ ತಮ್ಮ ಇದ್ದ ಹಾಗೆ. ಅಂಬಿ ಅಂಕಲ್ ತಂದೆ ಇದ್ದಾಗೆ. ಅವರ ಜತೆಯೂ ಮಾತಾಡ್ತೀನಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಿಲ್ಲೆಯ ಎಲ್ಲಾ ಕಾಂಗ್ರೆಸ್ ನಾಯಕರನ್ನ ಭೇಟಿ ಮಾಡಿ ಮಾತಾಡ್ತೀನಿ. ಮುಂದಿನ ದಿನಗಳಲ್ಲಿ ಮಂಡ್ಯದಲ್ಲೇ ಮನೆ ಮಾಡ್ತಿನಿ. ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ. ನಾನು ಎಂದಿಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದು ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ