ಆ್ಯಪ್ನಗರ

ಭಾರತೀನಗರದಲ್ಲಿ ಅಂತರವಲಯ ಮಹಿಳಾ ಕ್ರೀಡಾಕೂಟಕ್ಕೆ ಚಾಲನೆ

ಕ್ರೀಡೆ ಪ್ರತಿಯೊಬ್ಬ ವ್ಯಕ್ತಿಗೂ ಉತ್ಸಾಹವನ್ನು ನೀಡಿ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ತಿಳಿಸಿದರು.

Vijaya Karnataka 5 Feb 2020, 5:00 am
ಭಾರತೀನಗರ: ಕ್ರೀಡೆ ಪ್ರತಿಯೊಬ್ಬ ವ್ಯಕ್ತಿಗೂ ಉತ್ಸಾಹವನ್ನು ನೀಡಿ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ತಿಳಿಸಿದರು.
Vijaya Karnataka Web KMD4RAVI-1_17


ಇಲ್ಲಿನ ಭಾರತೀ ಕಾಲೇಜು ಮತ್ತು ಮೈಸೂರು ವಿಶ್ವವಿದ್ಯಾನಿಲಯ, ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆಯೋಜಿಸಿದ್ದ ಮೈಸೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮತ್ತು ಅಂತರವಲಯ ಮಹಿಳೆಯರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯಿಂದ ಆರೋಗ್ಯ, ಆಯಸ್ಸು ವೃದ್ಧಿಯಾಗುತ್ತದೆ ಎಂದರು.

ಮಾನಸಿಕ ಖಿನ್ನತೆಯಿಂದ ಹೊರಬರಬೇಕಾದರೆ, ಕ್ರೀಡೆಯಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳಲ್ಲಿಸಾಂಸ್ಕೃತಿಕ, ಬೌದ್ಧಿಕ ವಿಕಾಸದಂತೆ ದೈಹಿಕ ವಿಕಾಸವೂ ಕೂಡ ಆಗಬೇಕಿದೆ ಎಂದು ತಿಳಿಸಿದರು. ಭಾರತೀ ವಿದ್ಯಾಸಂಸ್ಥೆ ಕ್ರೀಡೆಗೆ ಪೋತ್ಸಾಹ ನೀಡುತ್ತಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ. ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಸಂಸ್ಥೆ ತೆರೆದು ಲಕ್ಷಾಂತರ ಮಕ್ಕಳ ಬದುಕನ್ನು ಹಸನುಗೊಳಿಸುತ್ತಿರುವ ಸಂಸ್ಥೆಯ ಸಂಸ್ಥಾಪಕ ಜಿ.ಮಾದೇಗೌಡರ ಕಾಳಜಿ ನಿಜಕ್ಕೂ ಶ್ಲಾಘನೀಯ ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಮಧು ಜಿ. ಮಾದೇಗೌಡರು ಮಾತನಾಡಿ, ಆರೋಗ್ಯವಂತ ಜೀವನ ನಡೆಸಬೇಕಾದರೆ ಕ್ರೀಡೆ ಬೇಕು. ಕ್ರೀಡೆಯಲ್ಲಿಸೋಲು, ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ. ಪ್ರತಿಯೊಬ್ಬರೂ ಸೋಲು, ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ನಮ್ಮ ಸಂಸ್ಥೆಯಲ್ಲಿ ಈಗ ಎಲ್‌ಕೆಜಿಯಿಂದ ಪಿಎಚ್‌.ಡಿ ವರೆಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಗ್ರಾಮೀಣ, ನಗರದ ಮಕ್ಕಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ವೈದ್ಯಕೀಯ ಕಾಲೇಜನ್ನು ತೆರೆಯುವ ಆಸೆ ನನ್ನದಾಗಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿಅಂತರ ರಾಷ್ಟ್ರೀಯ ಬ್ಯಾಸ್ಕೆಟ್‌ ಬಾಲ್‌ ಆಟಗಾರ್ತಿ ಸಿ.ಆರ್‌. ಸಂಧ್ಯಾ, ಮೈಸೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ, ಖೋ-ಖೊ ಕ್ರೀಡೆಯಲ್ಲಿ ಭಾರತೀ ಕಾಲೇಜಿಗೆ ಕೀರ್ತಿಯನ್ನು ತಂದ ವಿದ್ಯಾರ್ಥಿಗಳಾದ ಕುಸುಮ, ಸ್ವರೂಪ , ರಾಧಿಕ , ಲಾವಣ್ಯ ಅವರನ್ನು ಸನ್ಮಾನಿಸಲಾಯಿತು.

ಮೈಸೂರು ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಬರುವ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಈ ನಾಲ್ಕು ಜಿಲ್ಲೆಗಳ 50 ಕಾಲೇಜುಗಳಿಂದ ಒಟ್ಟು 700 ಕ್ರೀಡಾಪಟುಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಸಂಸದ ಡಾ.ಜಿ.ಮಾದೇಗೌಡ, ಮೈಸೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣಯ್ಯ, ಕಾಲೇಜಿನ ಪ್ರಾಂಶುಪಾಲ ಪೊ›.ಮಾಯೀಗೌಡ, ಭಾರತೀ ಸ್ನಾತಕೋತ್ತರ ವಿಭಾಗದ ನಿರ್ದೇಶಕ ಪೊ›.ಎಸ್‌.ನಾಗರಾಜು, ಟ್ರಸ್ಟಿಗಳಾದ ಜೋಗೀಗೌಡ, ಚಂದೂಪುರ ಪಾಪಣ್ಣ, ಮುದ್ದಯ್ಯ, ಜಯರಾಮು, ದೈಹಿಕ ಶಿಕ್ಷಣ ನಿರ್ದೇಶಕ ಸುನೀಲ್‌ಕುಮಾರ್‌, ಕ್ರೀಡಾಕೂಟದ ಸಂಯೋಜಕರಾದ ಡಾ.ಮ.ರಾಮಕೃಷ್ಣ, ಪ್ರೊ.ಪುಟ್ಟಸ್ವಾಮಿಗೌಡ, ಪೊ.ಜಯರಾಮೇಗೌಡ, ಎ.ಎಸ್‌.ಸಂಜೀವ್‌, ಗೋಪನಹಳ್ಳಿ ಜಗದೀಶ್‌, ಪ್ರಸನ್ನಕುಮಾರ್‌, ಬಿದರಹೊಸಹಳ್ಳಿ ಪ್ರಮೋದ್‌ ಸೇರಿದಂತೆ ಹಲವರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ