ಆ್ಯಪ್ನಗರ

ಸಿಎಂ ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಬಂದಿದ್ದ ಯುವಕ ನೀರುಪಾಲು

ಪಟ್ಟಣದ ಕ್ರೀಡಾಂಗಣದ ಮುಂಭಾಗ ಶನಿವಾರ ನಡೆದ ಸಿಎಂ ಕುಮಾರಸ್ವಾಮಿ ಕಾರ‍್ಯಕ್ರಮಕ್ಕೆ ಆಗಮಿಸಿದ ಕಾರ‍್ಯಕರ್ತನೊಬ್ಬ ಕಾಲುಜಾರಿ ವಿಸಿ ನಾಲೆಗೆ ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.

Vijaya Karnataka 28 Oct 2018, 7:41 am
ಪಾಂಡವಪುರ: ಪಟ್ಟಣದ ಕ್ರೀಡಾಂಗಣದ ಮುಂಭಾಗ ಶನಿವಾರ ನಡೆದ ಸಿಎಂ ಕುಮಾರಸ್ವಾಮಿ ಕಾರ‍್ಯಕ್ರಮಕ್ಕೆ ಆಗಮಿಸಿದ ಕಾರ‍್ಯಕರ್ತನೊಬ್ಬ ಕಾಲುಜಾರಿ ವಿಸಿ ನಾಲೆಗೆ ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
Vijaya Karnataka Web hdk


ತಾಲೂಕಿನ ಜಕ್ಕನಹಳ್ಳಿ ಗ್ರಾಮದ ವೆಂಕಟಶೆಟ್ಟಿ ಪುತ್ರ ಕುಮಾರ್‌(38) ಮೃತ ವ್ಯಕ್ತಿ.

ಪಟ್ಟಣದಲ್ಲಿ ನಡೆಯುತ್ತಿದ್ದ ಜೆಡಿಎಸ್‌ ಚುನಾವಣಾ ಪ್ರಚಾರದ ಬಹಿರಂಗ ಸಭೆ ನಡೆಯುತ್ತಿದ್ದ ಕಾರ‍್ಯಕ್ರಮಕ್ಕೆ ಆಗಮಿಸಿದ್ದ ಕುಮಾರ್‌, ಪಕ್ಕದಲ್ಲಿಯೇ ಇದ್ದ ವಿಶ್ವೇಶ್ವರಯ್ಯ ನಾಲೆಯಲ್ಲಿ ನೀರು ಕುಡಿಯಲು ಹೋಗಿ ಕಾಲುಜಾರಿ ಬಿದ್ದಿದ್ದಾನೆ. ತಕ್ಷ ಣ ಸ್ಥಳದಲ್ಲಿದ್ದ ಕೆಲವರು ಕುಮಾರ್‌ ಅವರನ್ನು ನಾಲೆಯಿಂದ ಮೇಲೆತ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾನೆ. ನಂತರ ಪೊಲೀಸರು ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದರು.

ಸಿಎಂ ಭೇಟಿ, ಸಾಂತ್ವ್ವನ: ಕಾರ‍್ಯಕರ್ತನೋರ್ವ ನಾಲೆಗೆ ಬಿದ್ದು ಮೃತಪಟ್ಟಿರುವ ವಿಷಯ ತಿಳಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕಾರ‍್ಯಕ್ರಮ ಮುಗಿದ ಬಳಿಕ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಭೇಟಿಕೊಟ್ಟು ಮೃತ ಕುಮಾರ್‌ ಅಂತಿಮ ದರ್ಶನ ಪಡೆದರು. ಬಳಿಕ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಮೃತರ ಕುಟುಂಬಕ್ಕೆ ಯಾವುದೇ ಭರವಸೆ ನೀಡಲಿಲ್ಲ. ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಮೃತರ ಕುಟುಂಬಕ್ಕೆ ಸರಕಾರದಿಂದ ಆರ್ಥಿಕ ನೆರವು ಕೊಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರಿಗೆ ಸೂಚಿಸಿ ಅಲ್ಲಿಂದ ತೆರಳಿದರು. ಘಟನೆ ಸಂಬಂಧ ಪಾಂಡವಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ