ಆ್ಯಪ್ನಗರ

ಬೌದ್ಧ ಧರ್ಮಕ್ಕೆ ಮತಾಂತರಗೊಂಡ 11 ದಲಿತರು

ದಲಿತ ಸಂಘರ್ಷ ಸಮಿತಿಯ ಪುತ್ತೂರು ತಾಲೂಕು ಸಂಘಟನಾ ಸಂಚಾಲಕ ಆನಂದ ಮಿತ್ತಬೈಲ್ ನೇತೃತ್ವದಲ್ಲಿ ದಲಿತ ಸಮುದಾಯಕ್ಕೆ ಸೇರಿದ 11 ಮಂದಿ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಘಟನೆ ಆಲಂಕಾರಿನಲ್ಲಿ ನಡೆದಿದೆ.

Vijaya Karnataka Web 15 Mar 2018, 2:34 pm
ಕಡಬ (ದಕ್ಷಿಣ ಕನ್ನಡ): ದಲಿತ ಸಂಘರ್ಷ ಸಮಿತಿಯ ಪುತ್ತೂರು ತಾಲೂಕು ಸಂಘಟನಾ ಸಂಚಾಲಕ ಆನಂದ ಮಿತ್ತಬೈಲ್ ನೇತೃತ್ವದಲ್ಲಿ ದಲಿತ ಸಮುದಾಯಕ್ಕೆ ಸೇರಿದ 11 ಮಂದಿ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಘಟನೆ ಆಲಂಕಾರಿನಲ್ಲಿ ನಡೆದಿದೆ.
Vijaya Karnataka Web 11 dalit wiil converet in to buddha religion
ಬೌದ್ಧ ಧರ್ಮಕ್ಕೆ ಮತಾಂತರಗೊಂಡ 11 ದಲಿತರು


ಕಡಬ ತಾಲೂಕಿನ ಆಲಂಕಾರು ತೋಟಂತಿಲ ಎಂಬಲ್ಲಿ ಪುಟ್ಟಣ್ಣ ಎಂಬವರು ನೂತನವಾಗಿ ನಿರ್ಮಿಸಿದ 'ಮೈತ್ರಿ ವಿಹಾರ' ಗೃಹ ಪ್ರವೇಶವನ್ನು ದಕ್ಷಿಣ ಕನ್ನಡ ಜಿಲ್ಲಾ ಬೌದ್ಧ ಮಹಾಸಭಾ(ರಿ.)ದ ಭಂತೇಜಿ ಮೈಸೂರು ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಪೂಜ್ಯ ಸುಗತಪಾಲ ಭಂತೇಜಿ ನೆರವೇರಿಸಿದರು. ಇದೇ ಸಂದರ್ಭ ಸುಗತಪಾಲ ಭಂತೇಜಿ ಅವರು ಬುದ್ಧ ಶಾಸನದ ಪ್ರಕಾರ ಬುದ್ಧ ಪೂಜೆ ನೆರವೇರಿಸಿ ಧಮ್ಮೋಪದೇಶ ನೀಡಿದರು.

ಈ ವೇಳೆ ಮಾತನಾಡಿದ ದಲಿತ ಮುಖಂಡ ಆನಂದ ಮಿತ್ತಬೈಲ್, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಯಂತೆ ನೈಜ ಧಾರ್ಮಿಕ ವಿಧಿವಿಧಾನಗಳನ್ನು ಹಾಗೂ ಆಶಯಗಳನ್ನು ಜೀವನದಲ್ಲಿ ಅಳವಡಿಕೊಳ್ಳುವುದರ ವುದರ ಮೂಲಕ ಪ್ರೊ.ಬಿ.ಕೃಷ್ಣಪ್ಪರ ಕನಸನ್ನು ಈಡೇರಿಸುವಂತೆ ಕರೆ ನೀಡಿದರು.

ದಲಿತ ಸಮುದಾಯದ ಪುಟ್ಟಣ್ಣ, ಸುಶೀಲಾ, ನಯನ್ ಕುಮಾರ್, ನಮಿತಾ, ಸತೀಶ್ ಕುಮಾರ್, ಪ್ರೇಮಾ, ಹರ್ಷ, ಸುಶೀಲಾ, ಮನೋಜ್ ಕುಮಾರ್, ವಿಶ್ವನಾಥ್ ಹಾಗೂ ಗಣೇಶ್ ಎಂಬವರು ಆನಂದ ಮಿತ್ತಬೈಲ್ ನೇತೃತ್ವದಲ್ಲಿ ಬೌದ್ಧ ಧರ್ಮದ ದೀಕ್ಷೆ ಪಡೆದು ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ