ಆ್ಯಪ್ನಗರ

ಸರ್ಕಾರದ ಕಠಿಣ ಕ್ರಮಕ್ಕೆ ಮೆತ್ತಗಾದ ಕೆಎಸ್‌ಆರ್‌ಟಿಸಿ ನೌಕರ: ಮಂಗಳೂರಿನಲ್ಲಿ 400ಕ್ಕೂ ಅಧಿಕ ಬಸ್‌ಗಳ ಸಂಚಾರ

ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಲ್ಲಿ ಸುಮಾರು 310 ಅನುಸೂಚಿಗಳಲ್ಲಿ ಬಸ್‌ ಕಾರ್ಯಾಚರಣೆ ನಡೆಸಿದೆ. ಕರ್ನಾಟಕ ಸಾರಿಗೆ, ರಾಜಹಂಸ, ನಾನ್‌ ಎಸಿ ಸ್ಲೀಪರ್‌, ವೋಲ್ವೋ, ವೋಲ್ವೋ ಮಲ್ಟಿ ಆಕ್ಸೆಲ್‌, ಡ್ರೀಮ್‌ ಕ್ಲಾಸ್‌ ಬಸ್‌ಗಳು ಸಂಚರಿಸಿದವು.

Vijaya Karnataka Web 16 Apr 2021, 6:45 pm
ಮಂಗಳೂರು: ಆರನೇ ವೇತನ ಆಯೋಗದ ಶಿಫಾರಸು ಅನುಷ್ಠಾನಕ್ಕೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಬಸ್‌ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರದ ಬಿಸಿ ದ.ಕದಲ್ಲಿಇಳಿಕೆಯಾಗುತ್ತಿದೆ. ಶುಕ್ರವಾರ 400ಕ್ಕೂ ಅಧಿಕ ಬಸ್‌ಗಳು ಮಂಗಳೂರು ಎರಡು ಡಿಪೋಗಳಿಂದ ನಾನಾ ರೂಟ್‌ಗಳಿಗೆ ಹೊರಟಿದೆ. ಇದರ ಜತೆಗೆ 900ಕ್ಕೂ ಅಧಿಕ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
Vijaya Karnataka Web ಕೆಎಸ್‌ಆರ್‌ಟಿಸಿ
ಕೆಎಸ್‌ಆರ್‌ಟಿಸಿ


ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಲ್ಲಿ ಸುಮಾರು 310 ಅನುಸೂಚಿಗಳಲ್ಲಿ ಬಸ್‌ ಕಾರ್ಯಾಚರಣೆ ನಡೆಸಿದೆ. ಕರ್ನಾಟಕ ಸಾರಿಗೆ, ರಾಜಹಂಸ, ನಾನ್‌ ಎಸಿ ಸ್ಲೀಪರ್‌, ವೋಲ್ವೋ, ವೋಲ್ವೋ ಮಲ್ಟಿ ಆಕ್ಸೆಲ್‌, ಡ್ರೀಮ್‌ ಕ್ಲಾಸ್‌ ಒಳಗೊಂಡಂತೆ ವಿವಿಧ ಮಾದರಿಯ ಬಸ್‌ ಕಾರ್ಯಾಚರಿಸಿದೆ.

ನರ್ಮ್ ಬಸ್‌ ಸಂಚಾರ ಕೂಡ ಸೀಮಿತ ಸಂಖ್ಯೆಯಲ್ಲಿತ್ತು. ನಾನಾ ರೂಟ್‌ಗಳಲ್ಲಿ ಖಾಸಗಿ ಬಸ್‌ಗಳೂ ಎಂದಿನಂತೆ ಸಂಚಾರ ನಡೆಸಿತ್ತು.

ಸಾರಿಗೆ ನೌಕರರ ಮುಷ್ಕರ: ಬರೋಬ್ಬರಿ 240 ಸಿಬ್ಬಂದಿಗಳನ್ನು ವಜಾಗೊಳಿಸಿದ ಬಿಎಂಟಿಸಿ
12 ವಜಾ, 20 ವರ್ಗಾವಣೆ: ರಾಜ್ಯ ಸರಕಾರದ ಆದೇಶ ಉಲ್ಲಂಘಿಸಿ ಮುಷ್ಕರ ನಿರತ ಮಂಗಳೂರು ವಿಭಾಗದ 12 ಕೆಎಸ್‌ಆರ್‌ಟಿಸಿ ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು, 20ಕ್ಕೂ ಅಧಿಕ ಮಂದಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ.

ಸಿಎಂ ಯಡಿಯೂರಪ್ಪ ಹೇಳಿಕೆ ದೌರ್ಜನ್ಯದ ಪರಮಾವಧಿ: ಕೋಡಿಹಳ್ಳಿ ಚಂದ್ರಶೇಖರ್‌ ಆಕ್ರೋಶ
ಮುಷ್ಕರ ನಿರತ ನೌಕರರ ಮೇಲೆ ಸರಕಾರ ಕಠಿಣ ಕ್ರಮ ಜರುಗಿಸುತ್ತಲೇ ಎಚ್ಚೆತ್ತುಕೊಂಡ ಇತರ ನೌಕರರು ಮುಷ್ಕರ ಕೈ ಬಿಟ್ಟು ಕೆಲಸಕ್ಕೆ ಹಾಜರಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ