ಆ್ಯಪ್ನಗರ

ನೆಲ್ಯಾಡಿ ಬಳಿ ಭೀಕರ ಅಫಘಾತ; ಲಾರಿ ಬೊಲೆರೋ ಡಿಕ್ಕಿಯಾಗಿ 2 ಸಾವು

ಮಧ್ಯರಾತ್ರಿ ನಡೆದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

Vijaya Karnataka Web 2 Jul 2019, 7:28 am
ಮಂಗಳೂರು: ಜಿಲ್ಲೆಯ ನೆಲ್ಯಾಡಿ ಬಳಿ ನಡೆದ ಸೋಮವಾರ ಮಧ್ಯರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ದುರ್ಮರಣವನ್ನಪ್ಪಿದ್ದಾರೆ.
Vijaya Karnataka Web Death


ಉಪ್ಪಿನಂಗಡಿ ಗೆ ತೆರಳುತ್ತಿದ್ದ ಬೊಲೆರೋ ಜೀಪಿಗೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ನೆಲ್ಯಾಡಿಯ ಬೆಥನಿ ವಿದ್ಯಾಸಂಸ್ಥೆಯ ಬಳಿ ಮುಖಾಮುಖಿ ಡಿಕ್ಕಿ ಹೊಡೆದು ಬೊಲೆರೋದಲ್ಲಿದ್ದವರ ಪೈಕಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಇನ್ನೊಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಈ ಘಟನೆ ಸೋಮವಾರ ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ನಡೆದಿದೆ. ಬೊಲೆರೋ ವಾಹನ ಡಿಕ್ಕಿಯ ರಭಸಕ್ಕೆ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಸ್ಥಳೀಯ ವಾಹನ ಎಂದು ಅಂದಾಜಿಸಲಾಗಿದೆ.
ಅಫಘಾತ ನಡೆದ ಸಮಯದಲ್ಲಿ ಮಳೆಯೂ ಬರುತ್ತಿದ್ದು ಘಟನಾ ಸ್ಥಳಕ್ಕೆ ನೆಲ್ಯಾಡಿ ಮತ್ತು ಉಪ್ಪಿನಂಗಡಿ ಪೋಲೀಸರು ಮತ್ತು ಸ್ಥಳೀಯರು ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ