ಆ್ಯಪ್ನಗರ

ಪಂಪ್‌ವೆಲ್‌ನ ಲಾಡ್ಜ್‌ನಲ್ಲಿ ಯುವಕರ ಮಿಡ್‌ನೈಟ್‌ ಎಣ್ಣೆಪಾರ್ಟಿ; ಮತ್ತೇರಿದಾಗ ಉಂಟಾದ ಜಗಳದಲ್ಲಿ ಬಿತ್ತೊಂದು ಹೆಣ!

ಕೊಲೆಯಾದ ಯುವಕ ಧನುಷ್‌ ಮೇಲೆ ದಾಳಿ ಮಾಡುವ ಸನ್ನಿವೇಶ ಮತ್ತು ಆಸ್ಪತ್ರೆಗೆ ಕೊಂಡೊಯ್ಯುವ ದೃಶ್ಯ ಅಲ್ಲೇ ಇದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಕಂಕನಾಡಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಟ್ಟಡದಲ್ಲಿದ್ದ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಸದ್ಯ ಕೊಲೆಯ ಬಳಿಕ ಪರಾರಿಯಾದ ಆರೋಪಿಯ ಪತ್ತೆಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.

Vijaya Karnataka Web 16 Oct 2021, 11:56 am
ಮಂಗಳೂರು: ಲಾಡ್ಜ್‌ನಲ್ಲಿ ಯುವಕರು ಸೇರಿ ಪಾರ್ಟಿ ಮಾಡುತ್ತಿದ್ದಾಗ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
Vijaya Karnataka Web crime


ಮಂಗಳೂರು ನಗರದ ಪಂಪ್‌ವೆಲ್ ಬಳಿ ಇರುವ ಸಾಯಿ ಪ್ಯಾಲೇಸ್ ಎಂಬ ಲಾಡ್ಜ್‌ನಲ್ಲಿ ಆರೇಳು ಮಂದಿ ಯುವಕರು ಪಾರ್ಟಿ ಮಾಡುತ್ತಿದ್ದರು. ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ ಮತ್ತು ಪ್ರಜ್ವಲ್ ಹೆಸರಿನ ಇವರೆಲ್ಲ ಸ್ನೇಹಿತರಾಗಿದ್ದು, ದಸರಾ ಹಬ್ಬ ಹಿನ್ನೆಲೆ ಶುಕ್ರವಾರ ರಾತ್ರಿ ಪಾರ್ಟಿ ಆಯೋಜಿಸಲು ನಿರ್ಧರಿಸಿ ಸೇರಿದ್ದರು. ಅದರಂತೆ ಪಾರ್ಟಿ ಮಾಡುತ್ತಿದ್ದಾಗ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಜೇಸನ್ ಸುರತ್ಕಲ್ ಮತ್ತು ಧನುಷ್ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ.
ಶಾಕಿಂಗ್ ನ್ಯೂಸ್‌; ಬಂಟ್ವಾಳದಲ್ಲಿ ಅಪ್ರಾಪ್ತ ಬಾಲಕಿಯನ್ನು ಕಿಡ್ನ್ಯಾಪ್‌ ಮಾಡಿ ಗ್ಯಾಂಗ್‌ರೇಪ್‌! ದೂರು ದಾಖಲು
ಈ ಜಗಳ ವಿಕೋಪಕ್ಕೆ ತಿರುಗಿದಾಗ ಕುಡಿದ ಮತ್ತಿನಲ್ಲಿದ್ದ ಜೇಸನ್ ಸುರತ್ಕಲ್ ಎಂಬಾತ ಕೋಪದಿಂದ ತನ್ನಲ್ಲಿದ್ದ ಹರಿತವಾದ ಚಾಕುವಿನಿಂದ ಧನುಷ್‌ಗೆ ಚುಚ್ಚಿದ್ದಾನೆ. ಇದರಿಂದ ಧನುಷ್‌ಗೆ ಗಂಭೀರ ಗಾಯವಾಗಿದ್ದು, ಅಲ್ಲೇ ಕುಸಿದು ಬಿದ್ದ ಗಾಯಾಳುವನ್ನು ಜತೆಗಿದ್ದ ಇತರರು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಾಗ ಧನುಷ್‌ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಧನುಷ್‌ಗೆ ಗಂಭೀರವಾಗಿ ಹಲ್ಲೆ ಮಾಡಿದ ಬಳಿಕ ಆರೋಪಿ ಜೇಸನ್ ಸುರತ್ಕಲ್‌ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
‘ಓದಲು ಇಷ್ಟವಿಲ್ಲ’ ಎಂದು ಮನೆ ತೊರೆದಿದ್ದ ವಿದ್ಯಾರ್ಥಿಗಳು ಮೈಸೂರಿಗೆ ಹೋಗಿ ಜೇಬು ಖಾಲಿಯಾದಾಗ ವಾಪಸ್ ಬಂದ್ರು!
ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯ:ಕೊಲೆಯಾದ ಯುವಕ ಧನುಷ್‌ ಮೇಲೆ ದಾಳಿ ಮಾಡುವ ಸನ್ನಿವೇಶ ಮತ್ತು ಆಸ್ಪತ್ರೆಗೆ ಕೊಂಡೊಯ್ಯುವ ದೃಶ್ಯ ಅಲ್ಲೇ ಇದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಕಂಕನಾಡಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಟ್ಟಡದಲ್ಲಿದ್ದ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಸದ್ಯ ಕೊಲೆಯ ಬಳಿಕ ಪರಾರಿಯಾದ ಆರೋಪಿಯ ಪತ್ತೆಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ