ಆ್ಯಪ್ನಗರ

ಮುಕ್ಕ ಬಳಿ ಅಪಘಾತ: ಇಬ್ಬರು ವಿದ್ಯಾರ್ಥಿನಿಯರ ಸಾವು

ಮುಕ್ಕ ಚೆಕ್‌ ಪೋಸ್ಟ್‌ ಬಳಿ ಶನಿವಾರ ವಿದ್ಯಾರ್ಥಿಗಳಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕ ಹಾರಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.

Vijaya Karnataka 8 Sep 2019, 10:01 pm
ಸುರತ್ಕಲ್‌: ಮುಕ್ಕ ಚೆಕ್‌ ಪೋಸ್ಟ್‌ ಬಳಿ ಶನಿವಾರ ವಿದ್ಯಾರ್ಥಿಗಳಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕ ಹಾರಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
Vijaya Karnataka Web accident near mukka two students dead
ಮುಕ್ಕ ಬಳಿ ಅಪಘಾತ: ಇಬ್ಬರು ವಿದ್ಯಾರ್ಥಿನಿಯರ ಸಾವು


ಮಣಿಪಾಲದ ಅಕಾಡೆಮಿಯ ಇಂಟೀರಿಯರ್‌ ಡೆಕೊರೇಟರ್‌ ವಿಭಾಗದ ಹತ್ತು ಮಂದಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಾದ ಗ್ಲೋರಿಯ(24) ಹಾಗೂ ಒರಿಸ್ಸಾ ಮೂಲದ ಅಪರ್ಣಾ ( 22) ಮೃತಪಟ್ಟವರು. ಅನ್ವಿತ್‌ (ಚಾಲಕ), ಅಂಕಿತಾ, ಗಾಯತ್ರಿ, ಸುಚಲಿತಾ, ರೇಖಾ, ಅನಿತಾ, ಮೆಲ್ವಿನ್‌, ನೂತನ್‌ ಗಾಯಗೊಂಡ ವಿದ್ಯಾರ್ಥಿಗಳು. ಸುರತ್ಕಲ್‌ ಬಳಿಯ ತೋಕೂರುಗುತ್ತುವಿನ ಹಳೇ ಮನೆಯನ್ನು ಶೈಕ್ಷಣಿಕ ಉದ್ದೇಶದಿಂದ ವೀಕ್ಷಣೆ ನಡೆಸಿ, ಸುರತ್ಕಲ್‌ ಹೋಟೆಲಲ್ಲಿಊಟ ಮುಗಿಸಿಕೊಂಡು ಮಣಿಪಾಲಕ್ಕೆ ಹಿಂದಿರುಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ ಹಾರಿ ಮಗುಚಿ ಮಂಗಳೂರಿನತ್ತ ಸಂಚರಿಸುತ್ತಿದ್ದ ಸರಕು ತುಂಬಿದ ಲಾರಿಗೆ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಮೊದಲು ಮುಕ್ಕದ ಖಾಸಗಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ಸಹಿತ ಮೂವರು ಗಂಭಿರ ಸ್ಥಿತಿಯಲ್ಲಿತುರ್ತು ಚಿಕಿತ್ಸಾ ಘಟಕದಲ್ಲಿಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಆನ್‌ಲೈನ್‌ ಮೂಲದ ಖಾಸಗಿ ಬಾಡಿಗೆ ಕಾರಿನಲ್ಲಿಸಂಚರಿಸುತ್ತಿದ್ದರು. ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್‌ ಆಯುಕ್ತ ಡಾ.ಹರ್ಷ ಭೇಟಿ ನೀಡಿದ್ದಾರೆ. ಮಂಗಳೂರು ಉತ್ತರ ವಲಯದ ಸಂಚಾರಿ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ