ಆ್ಯಪ್ನಗರ

ಪತಿಯನ್ನು ಚಿಕಿತ್ಸೆಗೆ ಕರೆದೊಯ್ಯುತ್ತಿದ್ದಾಗ ಅಪಘಾತ; ಪತ್ನಿ ಸಾವು

ಅನಾರೋಗ್ಯಕ್ಕೀಡಾದ ಪತಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

Vijaya Karnataka Web 17 Jul 2019, 7:15 am
ಪುತ್ತೂರು: ನಗರದ ಹೊರವಲಯದ ಮಾಣಿ ಮೈಸೂರು ಹೆದ್ದಾರಿಯಲ್ಲಿ ಮಿತ್ತೂರು ಎಂಬಲ್ಲಿ ಮಧ್ಯರಾತ್ರಿ ಆಂಬ್ಯುಲೆನ್ಸ್ ಗೆ ಲಾರಿ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
Vijaya Karnataka Web Death


ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆಂಬ್ಯಲೆನ್ಸ್ ಗೆ ಮಿತ್ತೂರಿನ ಪರ್ಲೊಟ್ಟು ಬಳಿ ಲಾರಿ ಡಿಕ್ಕಿಯಾಗಿದೆ.

ಆಂಬ್ಯುಲೆನ್ಸ್ ನಲ್ಲಿ ಮಿತ್ತೂರು ನಿವಾಸಿ ವಾಮನ ನಾಯ್ಕ ಎಂಬವರನ್ನು ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲಾಗುತ್ತಿತ್ತು. ಅವರ ಪತ್ನಿ ಪಾರ್ವತಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವಾಮನ ಮತ್ತು ಅವರ ಕುಟುಂಬ ಸದಸ್ಯರಿಗೆ ಗಾಯಗಳಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ