ಆ್ಯಪ್ನಗರ

ತಲಪಾಡಿ: ಶಾಲೆಗೆ ತೆರಳುತ್ತಿದ್ದ ಬಾಲಕಿಯ ಅತ್ಯಾಚಾರಕ್ಕೆ ಯತ್ನ; ಪ್ರತಿರೋಧಕ್ಕೆ ಬೆದರಿ ಪರಾರಿಯಾದ ಕಾಮುಕ

14 ವರ್ಷದ ಬಾಲಕಿ ತನ್ನ ತಂಗಿಯೊಂದಿಗೆ ಬುಧವಾರ ಬೆಳಗ್ಗೆ ತಲಪಾಡಿ ಚೆಕ್ ಪೋಸ್ಟ್ ದಾರಿಯಾಗಿ ಕಾಲ್ನಡಿಗೆಯಲ್ಲಿ ಶಾಲೆಗೆ ತೆರಳುತ್ತಿದ್ದಾಗ ಸ್ಕೂಟರ್‌ನಲ್ಲಿ ಬಂದಿದ್ದ ಬರ್ಮುಡಾ ಧರಿಸಿದ ಯುವಕನೊಬ್ಬ ಬಾಲಕಿಯ ಕೈಯನ್ನು ಹಿಡಿದು ಎಳೆದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಅಕ್ಕ, ತಂಗಿ ಜೊತೆಯಾಗಿ ಜಿರುಚಾಡಿ ಆರೋಪಿಯನ್ನು ದೂಡಿದಾಗ ಆರೋಪಿ ಅಲ್ಲಿಂದ ಸ್ಕೂಟರ್ ಸಮೇತ ಪರಾರಿಯಾಗಿದ್ದಾನೆ.

Vijaya Karnataka Web 1 Dec 2021, 12:35 pm
ಮಂಗಳೂರು: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಸ್ಕೂಟರ್ ಸವಾರ ಕೈ ಹಿಡಿದೆಳೆದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತಲಪಾಡಿ ಅಲಂಕಾರಗುಡ್ಡೆ ಬಳಿ ಬುಧವಾರ ಬೆಳಗ್ಗೆ ನಡೆದಿದೆ.
Vijaya Karnataka Web women harrasement


ತಲಪಾಡಿ ಅಲಂಕಾರ ಗುಡ್ಡೆಯಿಂದ ಸಂತ್ರಸ್ತೆ 14 ವರ್ಷದ ಬಾಲಕಿ ತನ್ನ ತಂಗಿಯೊಂದಿಗೆ ಬುಧವಾರ ಬೆಳಗ್ಗೆ ತಲಪಾಡಿ ಚೆಕ್ ಪೋಸ್ಟ್ ದಾರಿಯಾಗಿ ಕಾಲ್ನಡಿಗೆಯಲ್ಲಿ ಶಾಲೆಗೆ ತೆರಳುತ್ತಿದ್ದಾಗ ಸ್ಕೂಟರ್‌ನಲ್ಲಿ ಬಂದಿದ್ದ ಬರ್ಮುಡಾ ಧರಿಸಿದ ಯುವಕನೊಬ್ಬ ಬಾಲಕಿಯ ಕೈಯನ್ನು ಹಿಡಿದು ಎಳೆದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಅಕ್ಕ, ತಂಗಿ ಜೊತೆಯಾಗಿ ಜಿರುಚಾಡಿ ಆರೋಪಿಯನ್ನು ದೂಡಿದಾಗ ಆರೋಪಿ ಅಲ್ಲಿಂದ ಸ್ಕೂಟರ್ ಸಮೇತ ಪರಾರಿಯಾಗಿದ್ದಾನೆ.
ಸ್ಲೀಪರ್‌ ಬಸ್‌ನಲ್ಲಿಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಮಂಗಳೂರಿನ ಅಪರಾಧಿಗೆ 7 ವರ್ಷ ಕಠಿಣ ಸಜೆ
ಘಟನೆಯಿಂದ ಹೆದರಿದ ಬಾಲಕಿ ಸ್ಥಳೀಯರಲ್ಲಿ ವಿಚಾರ ತಿಳಿಸಿದ್ದಾಳೆ. ಸ್ಥಳೀಯರಿಂದ ಮಾಹಿತಿ ಪಡೆದ ತಕ್ಷಣ ಆಗಮಿಸಿದ ಉಳ್ಳಾಲ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸಂದೀಪ್ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದು ಸಮೀಪದ ಸಿಸಿಟಿವಿಯೊಂದರ ಫೂಟೇಜ್ ಆಧಾರದಲ್ಲಿ ಆರೋಪಿಯ ಶೋಧ ಕಾರ್ಯ ನಡೆಸಿದ್ದಾರೆ. ಅದರಂತೆ ಆರೋಪಿ ಯುವಕ ಸ್ಕೂಟರ್ ನಲ್ಲಿ ಸಂಚರಿಸುತ್ತಿರುವ ದೃಶ್ಯ ಪತ್ತೆಯಾಗಿದ್ದು, ಇದರ ಆಧಾರದಲ್ಲಿ ತನಿಖೆ ಮುಂದುವರಿದಿದೆ.

ಅಕ್ರಮ ವಲಸೆ ಕಾರ್ಮಿಕರ ಕೃತ್ಯ?

ಗಡಿ ಪ್ರದೇಶ ತಲಪಾಡಿಯಲ್ಲಿ ಅಕ್ರಮ ಮರಳುಗಾರಿಕೆ ಸೇರಿದಂತೆ ಅನೇಕ ಅಕ್ರಮ, ಸಕ್ರಮ ಕೈಗಾರಿಕಾ ಕಾರ್ಖಾನೆಗಳಿದ್ದು ಇಲ್ಲಿ ಕೆಲಸ ಮಾಡುವ ವಲಸೆ ಕಾರ್ಮಿಕರು ಎಲ್ಲೆಂದರಲ್ಲಿ ಬಾಡಿಗೆ ಮನೆಗಳನ್ನ ಪಡೆದು ನೆಲೆಸಿದ್ದಾರೆ. ದೂರದ ಈಶಾನ್ಯ ಹಾಗೂ ಉತ್ತರ ಭಾರತ ರಾಜ್ಯಗಳ ಕಾರ್ಮಿಕರು ಈ ಪ್ರದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಹೆಚ್ಚು ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಯಶು ಪಕ್ಕಳ ಆರೋಪಿಸಿದ್ದಾರೆ.
ಮಂಗಳೂರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ: ನಾಲ್ವರು ಆರೋಪಿಗಳ ಬಂಧನ
ಈ ಹಿಂದೆಯೂ ಕೊಂಡಾಣದ ನಡು ಕುಮೇರಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ವಲಸೆ ಕಾರ್ಮಿಕ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಹೊರ ರಾಜ್ಯದ ವಲಸೆ ಕಾರ್ಮಿಕರಿಗೆ ಸರಿಯಾದ ವಿಳಾಸವಿಲ್ಲದೆ ಕಾನೂನು ಬಾಹಿರವಾಗಿ ಬಾಡಿಗೆಗೆ ಮನೆ ನೀಡುತ್ತಿರುವುದರಿಂದಲೂ ಸಮಾಜ ದ್ರೋಹಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದಂತಾಗುತ್ತದೆ ಎಂದು ಯಶು ಪಕ್ಕಳ ಆರೋಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ