ಆ್ಯಪ್ನಗರ

ಉಳ್ಳಾಲ ಭಗವತೀ ಕ್ಷೇತ್ರದಲ್ಲಿ ಅಣ್ಣಪ್ಪ ದೈವದ ಪಂಚ ಲೋಹದ ವಿಗ್ರಹ ಕಳವು!

ಈ ಹಿಂದೊಮ್ಮೆ ಕ್ಷೇತ್ರದ ಪರಿವಾರ ದೈವ ನಾಗನ ಗುಡಿಯ ನಾಗನ ಕಲ್ಲನ್ನು ವರ್ಷಗಳ ಹಿಂದೆ ನಾಲ್ವರು ಅನ್ಯಮತೀಯರು ಸಮೀಪದ ಬಾವಿಗೆ ಎಸೆದಿದ್ದರಂತೆ. ಅದರ ಪ್ರತಿಫಲವಾಗಿ ನಾಲ್ವರಲ್ಲಿ ಒಬ್ಬ ದುರಂತ ಸಾವನ್ನು ಕಂಡಿದ್ದು, ಇನ್ನುಳಿದವರು ಕಷ್ಟಕ್ಕೆ ತುತ್ತಾಗಿ ಕ್ಷೇತ್ರಕ್ಕೆ ತಪ್ಪು ಕಾಣಿಕೆ ಸಲ್ಲಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ‌ ಬಂದಿದೆ.

Vijaya Karnataka Web 20 Sep 2021, 12:32 pm
ತೊಕ್ಕೊಟ್ಟು: ಉಳ್ಳಾಲ ಮಾಸ್ತಿಕಟ್ಟೆ ಕುಮೇರು ಪಾಡಾಂಗರ ಪೂಮಾಲೆ ಶ್ರೀ ಭಗವತೀ ಕ್ಷೇತ್ರದ ಅಣ್ಣಪ್ಪ ದೈವದ ಪಂಚಲೋಹದ ಮೊಗ ಭಾನುವಾರ ತಡರಾತ್ರಿ ಕಳ್ಳತನವಾಗಿದ್ದು ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
Vijaya Karnataka Web ullala bhagavati


ಮಾಸ್ತಿಕಟ್ಟೆ ಜಂಕ್ಷನ್‌ನಲ್ಲಿರುವ ತೀಯಾ ಸಮಾಜ ಕುಟುಂಬಸ್ಥರ ಆರಾಧ್ಯ ಕುಮೇರು ಪಾಡಾಂಗರ ಪೂಮಾಲೆ ಶ್ರೀ ಭಗವತೀ ಕ್ಷೇತ್ರದ ಅಣ್ಣಪ್ಪ ದೈವದ ಗುಡಿಯ ಬಾಗಿಲಿನ ಬೀಗ ಒಡೆದು ಒಳನುಗ್ಗಿದ ಕಳ್ಳರು ಪಂಚಲೋಹದ ಮೊಗವನ್ನು ಕೊಂಡೊಯ್ದಿದ್ದಾರೆ. ಮೊಗವನ್ನು ಕ್ಷೇತ್ರಕ್ಕೆ ದಾನ ಮಾಡಿದ್ದ ಗುಡಿಯ ಸನಿಹದ ಮನೆಯ ನಿವಾಸಿ ನವೀನ್ ಡಿ. ಕುಟ್ಟಪ್ಪ ಬೆಳಗ್ಗೆ ವಾಕಿಂಗ್ ಹೋಗಿದ್ದಾಗ ಅಣ್ಣಪ್ಪನ ಗುಡಿಯ ಬಾಗಿಲು ತೆರೆದಿರುವುದನ್ನ ಕಂಡಿದ್ದಾರೆ. ಕೂಡಲೇ ಅವರು ದೈವಸ್ಥಾನದ ಮುಖ್ಯ ಅರ್ಚಕ ಭುಜಂಗರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಅರ್ಚಕರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ದೈವಸ್ಥಾನದ ಹತ್ತಿರದ ಜಾಗೃತ ವಿವಿಧೋದ್ದೇಶ ಸಂಘ ಸೇರಿದಂತೆ ಸ್ಥಳೀಯ ಅಂಗಡಿ ಮಳಿಗೆಗಳ ಸಿಸಿ ಟಿವಿ ಫೂಟೇಜ್ ತಪಾಸಣೆ ನಡೆಸುತ್ತಿದ್ದಾರೆ.‌ ಅಷ್ಟಕ್ಕೂ ಅಣ್ಣಪ್ಪ ದೈವದ ಗುಡಿಯ ಬೀಗ ಒಡೆದ ಕಳ್ಳರು ಒಳಗಿದ್ದ ಸುಮಾರು ಒಂದು ಲಕ್ಷ ರೂ. ಬೆಲೆ ಬಾಳುವ ಪಂಚ ಲೋಹದ ಮೊಗವನ್ನು ಮಾತ್ರ ಎಗರಿಸಿ ಅಲ್ಲಿದ್ದ ಪ್ರಭಾವಳಿ, ಬೆಳ್ಳಿ ಮತ್ತು ಲೋಹದ ಕಡ್ಸಲೆ ಇತರ ದೈವೀ ಪರಿಕರಗಳನ್ನು ಬಿಟ್ಟು ಹೋಗಿದ್ದಾರೆ. ಕಳ್ಳರು ದೈವಸ್ಥಾನದ ಪ್ರಾಂಗಣದಲ್ಲಿರುವ ಪಾಡಂಗರ ಶ್ರೀ ಭಗವತಿ ಗುಡಿಯ ಬಾಗಿಲ ಬೀಗವನ್ನು ಮುರಿಯಲು ಪ್ರಯತ್ನಿಸಿ ವಿಫಲವಾಗಿದ್ದು ಕಂಡುಬಂದಿದೆ. ಉಳ್ಳಾಲದಂತಹ ಸೂಕ್ಷ್ಮ ಪ್ರದೇಶದಲ್ಲಿ ಹಿಂದೂಗಳ ನಂಬಿಕೆಗೆ ಘಾಸಿ ಉಂಟಾಗುವ ಕುಕೃತ್ಯಗಳು ನಡೆಯುತ್ತಿದ್ದು ಪೊಲೀಸರು ಆದಷ್ಟು ಶೀಘ್ರನೆ ಕಳ್ಳತನ ನಡೆಸಿದ ಆರೋಪಿಗಳನ್ನ ಬಂಧಿಸಬೇಕೆಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.
ಮತ್ಸ್ಯಗಂಧ ರೈಲಿನಲ್ಲಿ ₹75 ಸಾವಿರ ಮೌಲ್ಯದ ಮೊಬೈಲ್‌ ಸಹಿತ ಪ್ರಯಾಣಿಕರ ನಗದು ಕಳ್ಳತನ!
ಕಾರಣೀಕ ಕ್ಷೇತ್ರ ಪೂಮಾಲೆ ಭಗವತಿ : ಈ ಹಿಂದೊಮ್ಮೆ ಕ್ಷೇತ್ರದ ಪರಿವಾರ ದೈವ ನಾಗನ ಗುಡಿಯ ನಾಗನ ಕಲ್ಲನ್ನು ವರ್ಷಗಳ ಹಿಂದೆ ನಾಲ್ವರು ಅನ್ಯಮತೀಯರು ಸಮೀಪದ ಬಾವಿಗೆ ಎಸೆದಿದ್ದರಂತೆ. ಅದರ ಪ್ರತಿಫಲವಾಗಿ ನಾಲ್ವರಲ್ಲಿ ಒಬ್ಬ ದುರಂತ ಸಾವನ್ನು ಕಂಡಿದ್ದು, ಇನ್ನುಳಿದವರು ಕಷ್ಟಕ್ಕೆ ತುತ್ತಾಗಿ ಕ್ಷೇತ್ರಕ್ಕೆ ತಪ್ಪು ಕಾಣಿಕೆ ಸಲ್ಲಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ‌ ಬಂದಿದೆ. ಹಾಗೆಯೇ ಅಣ್ಣಪ್ಪ ದೈವ ಕಾರಣಿಕ ಶಕ್ತಿಯಾಗಿದ್ದು ಪಂಚಲೋಹದ ಮೊಗ ಕಳ್ಳರ ಮುಂದಿನ‌ ಬದುಕು ಒಂದು ದುರಂತಕ್ಕೆ ತಲುಪಿದಾಗ ಕ್ಷೇತ್ರದ ಕಾರಣಿಕ ಮನದಟ್ಟಾಗಲಿದೆ ಎಂದು ಅರ್ಚಕರು ನಂಬಿಕೆ ವ್ಯಕ್ತಪಡಿಸಿದ್ದು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ