ಆ್ಯಪ್ನಗರ

ಕದ್ರಿ ಕ್ಷೇತ್ರದಲ್ಲಿ ಸಂಭ್ರಮದ ರಥೋತ್ಸವ

ಕದ್ರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ಸಂಭ್ರಮದ ರಥೋತ್ಸವ ಮಂಗಳವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನಡೆಯಿತು.

Vijaya Karnataka 23 Jan 2019, 4:59 pm
ಮಂಗಳೂರು: ಕದ್ರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ಸಂಭ್ರಮದ ರಥೋತ್ಸವ ಮಂಗಳವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನಡೆಯಿತು.
Vijaya Karnataka Web 22my ratha (1)


ಬೆಳಗ್ಗಿನಿಂದಲೇ ದೇವಳದಲ್ಲಿ ಭಕ್ತರ ದಂಡು ಹೆಚ್ಚಾಗಿದ್ದು, ದೇವರ ದರ್ಶನ ಪಡೆದು ಕೃತಾರ್ಥರಾದರು. ಮಧ್ಯಾಹ್ನ 12ಗಂಟೆಗೆ ಮಹಾಪೂಜೆ ನಡೆದು, ಮಧ್ಯಾಹ್ನ 1.30ಕ್ಕೆ ದೇವರ ಉತ್ಸವಮೂರ್ತಿ ರಥಾರೋಹಣವಾಯಿತು.

ಸಂಜೆ 6.30ಕ್ಕೆ ಮನ್ಮಹಾರಥೋತ್ಸವ, ಬೆಳ್ಳಿ ರಥೋತ್ಸವ ವೈಭವದಿಂದ ನಡೆಯಿತು. ಇದಾದ ಬಳಿಕ ಚಂದ್ರಮಂಡಲ ಉತ್ಸವ, ಮಹಾಪೂಜೆ, ಭೂತಬಲಿ ಮತ್ತು ಕವಾಟ ಬಂಧನ ನಡೆಯಿತು. ಈ ಅಪೂರ್ವ ಕ್ಷಣಕ್ಕೆ ಲಕ್ಷಾಂತರ ಭಕ್ತಾದಿಗಳು ಸಾಕ್ಷಿಯಾದರು.

ಇಂದು ಅವಭೃತಸ್ನಾನ: ದೇವಳದಲ್ಲಿ ಜ.23ರಂದು ಅವಭೃತಸ್ನಾನ ನಡೆಯಲಿದೆ. ಬೆಳಗ್ಗೆ 7ಕ್ಕೆ ಮಂಜುನಾಥ ದೇವರ ಕವಾಟೋದ್ಘಾಟನೆ ಮತ್ತು ಮಹಾಪೂಜೆ, ತುಲಾಭಾರ ಸೇವೆ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ತ್ರಿಶೂಲ ಸ್ನಾನ ನಡೆಯಲಿದೆ. ರಾತ್ರಿ 7.30ಕ್ಕೆ ಉತ್ಸವ ಬಲಿ, ಚಂದ್ರಮಂಡಲ ಉತ್ಸವ, ರಾತ್ರಿ 10.30ಕ್ಕೆ ಅವಭೃತ ಸ್ನಾನ, ಧ್ವಜಾವರೋಹಣ ನಡೆಯಲಿದೆ.

ತಾ.25ರಂದು ಬೆಳಗ್ಗೆ 10ಗಂಟೆಗೆ ದೇಳವದಿಂದ ಮಲರಾಯ ದೈವದ ಭಂಡಾರ ಹೊರಡುವುದು, ಮಧ್ಯಾಹ್ನ 12ಕ್ಕೆ ಸಂಪ್ರೋಕ್ಷಣೆ, ಶ್ರೀ ಅಣ್ಣಪ್ಪ ದೈವಕ್ಕೆ ವಾರ್ಷಿಕ ಪರ್ವ, 9ಕ್ಕೆ ಮಲರಾಯ ಹಾಗೂ ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ ಎಂದು ದೇವಳದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ