ಆ್ಯಪ್ನಗರ

ಹಾಡಹಗಲೇ ಪ್ರತ್ಯಕ್ಷವಾಗುತ್ತೆ ಈ ಪ್ರೇತ; ಪುತ್ತೂರು ಪೇಟೆಯಲ್ಲಿ ಗಮನ ಸೆಳೆದ ದಿವಾಕರ್!

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಾಯಿ ನಿವಾಸಿ ದಿವಾಕರ್ ದೇವಾಡಿಗ ತನ್ನ ವಿಶೇಷ ಪ್ರೇತದ ಮೂಲಕ ಗಮನಸೆಳೆದವರು. ಅಟೋ ಚಾಲಕನಾಗಿ ದುಡಿಯುತ್ತಿರುವ ದಿವಾಕರ್ ನವರಾತ್ರಿ ಬಂತೆಂದರೆ ಪ್ರೇತವಾಗಿ ಬಿಡುತ್ತಾರೆ. ಹೌದು ನವರಾತ್ರಿಯ ಒಂಬತ್ತು ದಿನಗಳಲ್ಲಿ ಪ್ರೇತದ ವೇಷಧಾರಿಯಾಗುವ ದಿವಾಕರ್, ಪ್ರೇತದಂತೆ ಅರಚಾಡುತ್ತಾ ಮನೆ ಮನೆಗೆ, ಅಂಗಡಿ, ಅಂಗಡಿಗೆ ಅರಚಾಡುತ್ತಿರುತ್ತಾರೆ.

Lipi 15 Oct 2021, 1:47 pm
ಮಂಗಳೂರು: ನವರಾತ್ರಿ ಬಂತೆಂದರೆ ಸಾಕು ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ದೇವಿ ಆರಾಧನೆಗಳು ನಡೆದರೆ, ಇನ್ನೊಂಡೆ ವಿವಿಧ ವೇಷಧಾರಿಗಳು ಮನೆ ಮನೆಗೆ ಆಗಮಿಸುವ ಮೂಲಕ ಜನರ ಮನತಣಿಸುತ್ತಾರೆ. ಹುಲಿವೇಷ, ಪುರುಷವೇಷ, ಸ್ತ್ರೀವೇಷ ಹೀಗೆ ಹಲವು ತರಹದ ವೇಷಗಳನ್ನು ನವರಾತ್ರಿಯ ಒಂಬತ್ತು ದಿನಗಳಲ್ಲಿ ನೋಡಬಹುದು.
Vijaya Karnataka Web ಪುತ್ತೂರಿನ ದಿವಾಕರ್


ಇಂಥಹುದೇ ಒಂದು ವೇಷದ ಮೂಲಕ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವ್ಯಕ್ತಿಯೊಬ್ಬರು ಕಳೆದ ಹದಿಮೂರು ವರ್ಷಗಳಿಂದ ಗಮನಸೆಳೆಯುತ್ತಿದ್ದಾರೆ. ವಿಶೇಷವಾದ ಪ್ರೇತದ ವೇಷದ ಮೂಲಕ ತನ್ನ ಹರಕೆಯನ್ನು ತೀರಿಸುತ್ತಿರುವ ಈ ವ್ಯಕ್ತಿಯು ಹಣಕ್ಕಾಗಿ ವೇಷ ಹಾಕುವುದಿಲ್ಲ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಾಯಿ ನಿವಾಸಿ ದಿವಾಕರ್ ದೇವಾಡಿಗ. ಪುತ್ತೂರಿನಲ್ಲಿ ಅಟೋ ಚಾಲಕನಾಗಿ ದುಡಿಯುತ್ತಿರುವ ದಿವಾಕರ್ ನವರಾತ್ರಿ ಬಂತೆಂದರೆ ಪ್ರೇತವಾಗಿ ಬಿಡುತ್ತಾರೆ.

ಹೌದು ನವರಾತ್ರಿಯ ಒಂಬತ್ತು ದಿನಗಳಲ್ಲಿ ಪ್ರೇತದ ವೇಷಧಾರಿಯಾಗುವ ದಿವಾಕರ್, ಪ್ರೇತದಂತೆ ಅರಚಾಡುತ್ತಾ ಮನೆ ಮನೆಗೆ, ಅಂಗಡಿ, ಅಂಗಡಿಗೆ ಅರಚಾಡುತ್ತಿರುತ್ತಾರೆ. ನವರಾತ್ರಿಯಲ್ಲಿ ಹುಲಿವೇಷ, ಪುರುಷವೇಷ, ಸ್ತ್ರೀವೇಷ ಹೀಗೆ ಹಲವು ವೇಷಗಳು ಸಾಮಾನ್ಯವಾಗಿದ್ದರೆ, ಪುತ್ತೂರಿನಲ್ಲಿ ದಿವಾಕರ್ ಹಾಕುವ ಪ್ರೇತದ ವೇಷ ತುಂಬಾನೆ ವಿಶೇಷವಾದುದು.

ಹಲವು ವರ್ಷಗಳಿಂದ ನವರಾತ್ರಿಯಲ್ಲಿ ವೇಷ ಹಾಕುವುದನ್ನು ಕರಗತ ಮಾಡಿಕೊಂಡಿರುವ ದಿವಾಕರ್ ಹಿಂದೆ ರಾಘವೇಂದ್ರ ಸ್ವಾಮಿ ವೇಷ, ಈಶ್ವರನ ವೇಷ, ಕೃಷ್ಣನ ವೇಷ ಹೀಗೆ ದೇವರ ವೇಷಗಳನ್ನು ಹಾಕುತ್ತಿದ್ದರು. ಆದರೆ ಧಾರ್ಮಿಕ ವೇಷಗಳನ್ನು ಹಾಕಲು ನಿಶೇಧವೇರಿದ ಹಿನ್ನಲೆಯಲ್ಲಿ ವೇಷ ಹಾಕುವುದನ್ನೇ ಬಿಟ್ಟಿದ್ದ ದಿವಾಕರ್ ಗೆ ಕೈಕಾಲುಗಳು ಅಲುಗಾಡದಂತಹ ಸ್ಥಿತಿ ನಿರ್ಮಾಣವಾಗಿತ್ತು. ಆ ಬಳಿಕ ನವರಾತ್ರಿಗೆ ಯಾವುದಾದರೂ ವೇಷ ಹಾಕಬೇಕೆಂದು ತೀರ್ಮಾನಿಸಿದ ಅವರು ಪ್ರೇತದ ವೇಷವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಕಳೆದ ಹದಿಮೂರು ವರ್ಷಗಳಿಂದ ಪ್ರೇತದ ವೇಷವನ್ನು ಹಾಕಿಕೊಂಡು ಜನರನ್ನು ಮನರಂಜಿಸುತ್ತಿರುವ ದಿವಾಕರ್ ಗೆ ಇದರಿಂದ ಹಣ ಮಾಡುವ ಉದ್ದೇಶವಿಲ್ಲ. ಹರಕೆಗಾಗಿ ಈ ವೇಷವನ್ನು ಹಾಕುತ್ತಿದ್ದು, ಜೀವನಕ್ಕಾಗಿ ಸ್ವಂತ ಆಟೋವನ್ನು ಅವಲಂಭಿಸಿದ್ದಾರೆ. ಪ್ರೇತದ ವೇಷಕ್ಕಾಗಿ ಪೋಲೀಸರ ಅನುಮತಿಯನ್ನೂ ಪಡೆದಿರುವ ಇವರು ಸಾಯಂಕಾಲ 6 ರ ಬಳಿಕ ತನ್ನ ವೇಷವನ್ನು ಕಳಚುತ್ತಾರೆ. ರಾತ್ರಿಯ ಸಮಯದಲ್ಲಿ ಈ ವೇಷವನ್ನು ಹಾಕಿಕೊಂಡು ತಿರುಗಿದಲ್ಲಿ ಜನ ಬೆಚ್ಚಿಬೀಳುವ ಸಾಧ್ಯತೆಯೂ ಇರುವ ಕಾರಣಕ್ಕಾಗಿ ಈ ರೀತಿಯ ವೇಳಾಪಟ್ಟಿಯನ್ನೂ ಅವರು ತಮ್ಮ ವೇಷದಲ್ಲಿ ಸೇರಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ