ಆ್ಯಪ್ನಗರ

ಅಯೋಧ್ಯೆ ತೀರ್ಪು: ಶನಿವಾರ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜಾ ಘೋಷಣೆ

ಶನಿವಾರ ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಕೋಮು ಸೂಕ್ಷ್ಮ ಪ್ರದೇಶ ಮಂಗಳೂರಿನಲ್ಲೂ ವ್ಯಾಪಕ ಭದ್ರತೆಯನ್ನು ಕೈಗೊಳ್ಳಲಾಗಿದ್ದು ಶಾಲಾ ಕಾಲೇಜುಗಳಿಗೆ ರಜಾ ಘೊಷಣೆ ಮಾಡಲಾಗಿದೆ.

Vijaya Karnataka Web 8 Nov 2019, 10:50 pm
ಬೆಂಗಳೂರು : ಶನಿವಾರ ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜಾ ಘೋಷಣೆ ಮಾಡಲಾಗಿದೆ. ತೀರ್ಪು ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಈ ಕುರಿತಾಗಿ ಶಿಕ್ಷಣ ಸಚಿವ ಸುರೇಶ್ ಕಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
Vijaya Karnataka Web ayodhya land dispute case judgment police protection in mangalore
ಅಯೋಧ್ಯೆ ತೀರ್ಪು: ಶನಿವಾರ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜಾ ಘೋಷಣೆ



ರಾಜ್ಯಾದ್ಯಂತ ಎಲ್ಲಾ ಕೋಮು ಸೂಕ್ಷ್ಮ ಜಿಲ್ಲೆಗಳಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ಥ್ ಕೈಗೊಳ್ಳಲಾಗಿದೆ. ಮಂಗಳೂರಿನಲ್ಲೂ ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಾದ್ಯಂತ 5 ಕೆಎಸ್ ಆರ್ ಪಿ ತುಕಡಿ, ಐದು ಡಿಎಆರ್ ಪಡೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಜಿಲ್ಲೆಯ ಎಲ್ಲಾ ಗಡಿ ಪ್ರದೇಶಗಳಲ್ಲಿ ಚಕ್ ಪೋಸ್ಟ್‌ ಸ್ಥಾಪಿಸಲಾಗಿದ್ದು ಒಟ್ಟು 15 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು ಇಡೀ ಜಿಲ್ಲಾದ್ಯಂತ ಎಲ್ಲಾ ಪೊಲೀಸರು ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ತಿಳಿಸಿದ್ದಾರೆ. ಏನೇ ಅಹಿತಕರ ಘಟನೆ ನಡೆದ್ರು 10 ನಿಮಿಷದಲ್ಲಿ ಸ್ಥಳಕ್ಕೆ ತಲುಪಲು ಪೊಲೀಸ್ ಪಡೆ ಸಜ್ಜಾಗಿದೆ.

ತೀರ್ಪು ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಲ್ಲೂ ಹೆಚ್ಚಿನ ಪೊಲೀಸ್ ಬಂದೋಬಸ್ಥ್ ಕೈಗೊಳ್ಳಲಾಗಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಜಿ ಹಿರೇಮಠ್ ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲೂ ಶನಿವಾರ ಹೈ ಅಲಟ್ ೯ ಘೋಷಿಸಲಾಗಿದೆ. ತೀರ್ಪಿನ ನಂತರ ಪ್ರತಿಕೂಲ ವಾತಾವರಣ ಸೃಷ್ಟಿಯಾಗುವ ಸಾಧ್ಯತೆಯಿರುವುದರಿಂದ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಇರಲಿದೆ.

ಜಿಲ್ಲೆಯ ಎಲ್ಲ ಪಟ್ಟಣ, ಗ್ರಾಮಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಭದ್ರತೆಗಾಗಿ 1,200 ಪೊಲೀಸರು ಹಾಗೂ ಹೋಂ ಗಾಡ್೯ಗಳು ಭದ್ರತೆ ಕೈಗೊಳ್ಳಲಿದ್ದಾರೆ. ಕೆಎಸ್ ಆರ್ ಪಿ ಹಾಗೂ ರಿಸವ್ ೯ ಪ್ಲಟೂನ್ ನ 350 ಪೊಲೀಸರು ಆಯಕಟ್ಟಿನ ಸ್ಥಳಗಳಲ್ಲಿ ನಿಗಾ ವಹಿಸಲಿದ್ದಾರೆ.

ಈ ಭದ್ರತೆಯೊಂದಿಗೆ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಸಾರ್ವಜನಿಕರ ಚಲನವಲನಗಳ ಬಗ್ಗೆ ಗಮನಿಸಲಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾಗುವ ಮಾಹಿತಿ, ವದಂತಿಗಳ ಬಗ್ಗೆಯೂ ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ.

'ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಭದ್ರತೆ ತೀವ್ರಗೊಳಿಸಲಾಗುತ್ತದೆ' ಎಂದು ಎಸ್ ಪಿ ಲೋಕೆಶ್ ಜಗಲಾಸರ್ ವಿಜಯ ಕರ್ನಾಟಕಕ್ಕೆ ತಿಳಿದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ