ಆ್ಯಪ್ನಗರ

ಬಂಟ್ವಾಳ ಮಿನಿ ವಿಧಾನಸೌಧ ದೋಷ ಪರಿಹಾರಕ್ಕೆ ಮಹಾ ಮೃತ್ಯುಂಜಯ ಹೋಮ

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ವಾಸ್ತುದೋಷ ಪರಿಹಾರರ್ಥ ಹಾಗೂ ಲೋಕಕಲ್ಯಾಣಾರ್ಥ ಜಿಪಂ ಸದಸ್ಯ ತುಂಗಪ್ಪ ಬಂಗೇರ ನೇತೃತ್ವದಲ್ಲಿ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಯಿತು

Vijaya Karnataka Web 20 Oct 2020, 6:40 am
ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ದೋಷ ಪರಿಹಾರಕ್ಕಾಗಿ ಜಿಲ್ಲಾಪಂಚಾಯಿತಿ ಸದಸ್ಯ ತುಂಗಪ್ಪ ಬಂಗೇರ ನೇತೃತ್ವದಲ್ಲಿ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ ಸೋಮವಾರ ನಡೆಯಿತು.
Vijaya Karnataka Web ಸಾಂದರ್ಭಿಕ ಚಿತ್ರ


ಮಿನಿವಿಧಾನಸೌಧದಲ್ಲಿ ಕಾರ್ಯಾಚರಿಸುತ್ತಿರುವ ಕಂದಾಯ ಇಲಾಖೆಯ ಇಬ್ಬರು ಉಪತಹಶೀಲ್ದಾರರು ಬೆರಳೆಣಿಕೆಯ ದಿನಗಳ ಮಧ್ಯದಲ್ಲಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಈ ಹೋಮ ಮಾಡಲಾಗಿದೆ. ಮಿನಿವಿಧಾನಸೌಧಕ್ಕೆ ವಾಸ್ತುದೋಷ ಮತ್ತು ಈ ಪ್ರದೇಶದಲ್ಲಿ ನಾಗನಡೆ ಇರುವ ವಿಚಾರ ಪ್ರಶ್ನಾಚಿಂತನೆಯಲ್ಲಿ ಕಂಡುಬಂದಿದೆ.

ಕಳೆದ ಸೆಪ್ಟಂಬರ್‌ ತಿಂಗಳಲ್ಲಿ ಉಪತಹಶೀಲ್ದಾರ್‌ಗಳಿಬ್ಬರು ನಿಧನ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರಿಂಜ ಕಳ್ಳಿಮಾರು ಜ್ಯೋತಿಷಿ ವೆಂಕಟರಮಣ ಮುಚ್ಚಿನ್ನಾಯರಲ್ಲಿ ಪ್ರಶ್ನಾ ಚಿಂತನೆ ನಡೆಸಿದ್ದು, ಅದರಲ್ಲಿ ಕಂಡು ಬಂದಂತೆ ಇದೀಗ ದೋಷ ನಿವಾರಣೆ ಮತ್ತು ಫಲ ಪ್ರಾಪ್ತಿಗಾಗಿ ಮೃತ್ಯುಂಜಯ ಹೋಮ ನಡೆಸಲಾಗಿದೆ ಎಂದು ತುಂಗಪ್ಪ ಬಂಗೇರ ಹೇಳಿದರು.
2020 ನವರಾತ್ರಿ : ಮನೆಯಲ್ಲೇ ಚಂಡಿ ಹೋಮ ಮಾಡುವುದು ಹೇಗೆ..? ವಿಧಿ - ವಿಧಾನಗಳಿವು.!

ಉಡುಪಿ ಚಂದ್ರ ಮೌಳೀಶ್ವರ ದೇವಸ್ಥಾನದ ಅರ್ಚಕರಾದ ಮನೋಹರ ತಂತ್ರಿಯವರ ನೇತೃತ್ವದಲ್ಲಿ ಮತ್ತು ಬಿ.ಸಿ.ರೋಡ್‌ ರಕ್ತೇಶ್ವರಿ ದೇವಿ ದೇವಸ್ಥಾನದ ಅರ್ಚಕರಾದ ರಘುಪತಿ ಭಟ್‌ ಪೌರೋಹಿತ್ಯದಲ್ಲಿ ಮೃತ್ಯಂಜಯ ಹೋಮ ಮತ್ತು ವೈದಿಕ ವಿಧಿ ವಿಧಾನಗಳು ಬಿ.ಸಿ.ರೋಡು ರಕ್ತೇಶ್ವರಿ ದೇವಸ್ಥಾನದಲ್ಲಿ ನಡೆಯಿತು.

ಹೋಮ ಆಯೋಜಿಸಿದ ಜಿಪಂ ಸದಸ್ಯ ತುಂಗಪ್ಪ ಬಂಗೇರ ಜತೆಗೆ ಪೂರ್ಣಾಹುತಿ ವೇಳೆ ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್ ಉಳಿಪ್ಪಾಡಿ, ಜಿಪಂ ಸದಸ್ಯರಾದ ರವಿಂದ್ರ ಕಂಬಳಿ, ಕಮಲಾಕ್ಷಿ ಪೂಜಾರಿ, ಶಂಕರ್‌ ಬೆದ್ರಮಾರ್‌ ಪ್ರಮುಖರಾದ ದೇವಪ್ಪ ಪೂಜಾರಿ, ಡೊಂಬಯ್ಯ ಅರಳ, ಸಂತೋಷ್‌, ಪ್ರಭಾಕರ ಪಿ.ಎಂ. ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ