ಆ್ಯಪ್ನಗರ

ಕಾಲ್ಬೆರಳಲ್ಲಿ ಪರೀಕ್ಷೆ ಬರೆದು ಶಿಕ್ಷಣ ಸಚಿವರ ಮನಗೆದ್ದಿದ್ದ ವಿದ್ಯಾರ್ಥಿ ಫಸ್ಟ್‌ ಕ್ಲಾಸ್‌ನಲ್ಲಿ ಪಾಸ್

ಇತ್ತೀಚೆಗೆ ಬಂಟ್ವಾಳದ ಪೊಳಲಿ ರಾಜರಾಜೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕೌಶಿಕ್‌ನನ್ನು ಭೇಟಿಯಾಗಿದ್ದರು. ಈ ವೇಳೆ ಆತನ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ ಹುರಿದುಂಬಿಸಿದ್ದರು. ನಂತರ ಕೌಶಿಕ್‌ನ ಬಗ್ಗೆ ಸಚಿವರು ಫೇಸ್‌ಬುಕ್‌ ವಾಲ್‌ನಲ್ಲಿ ಬರೆದುಕೊಂಡಿದ್ದರು.

Vijaya Karnataka Web 10 Aug 2020, 7:07 pm
ಮಂಗಳೂರು: ಈ ಬಾರಿಯ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಕಾಲ್ಬೆರಳಲ್ಲಿ ಪರೀಕ್ಷೆ ಬರೆಯುವ ಮೂಲಕ ಸುದ್ದಿಯಾಗಿದ್ದ ಮಂಗಳೂರಿನ ಬಂಟ್ವಾಳ ತಾಲೂಕಿನ ವಿದ್ಯಾರ್ಥಿ ಕೌಶಿಕ್ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾನೆ.
Vijaya Karnataka Web Kaushik


ಸೋಮವಾರ ಎಸ್ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶ ಬಂದಿದ್ದು, ಫಲಿತಾಂಶದಲ್ಲಿ ಕಾಲ್ಬೆರಳಲ್ಲೇ ಪರೀಕ್ಷೆ ಬರೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದ ಕೌಶಿಕ್ 424 ಅಂಕ ಪಡೆಯುವ ಮೂಲಕ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಬಂಟ್ವಾಳದ ಎಸ್‌ವಿಸ್ ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದ ಈತ ಯಾರ ಸಹಾಯವೂ ಇಲ್ಲದೆ ಪರೀಕ್ಷೆ ಬರೆದು ಸ್ಪೂರ್ತಿಯಾಗಿದ್ದ. ಮಗ ಎಸ್ಎಸ್ಎಲ್‌ಸಿಯಲ್ಲಿ ಪಾಸ್ ಆಗಿರುವುದರಿಂದ ಕೌಶಿಕ್‌ನ ತಂದೆ ತಾಯಿ ಸಂತಸಗೊಂಡಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ.

ಎಸ್ಸೆಸ್ಸೆಲ್ಸಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ

ಇತ್ತೀಚೆಗೆ ಬಂಟ್ವಾಳದ ಪೊಳಲಿ ರಾಜರಾಜೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕೌಶಿಕ್‌ನನ್ನು ಭೇಟಿಯಾಗಿದ್ದರು. ಈ ವೇಳೆ ಆತನ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ ಹುರಿದುಂಬಿಸಿದ್ದರು. ನಂತರ ಕೌಶಿಕ್‌ನ ಬಗ್ಗೆ ಸಚಿವರು ಫೇಸ್‌ಬುಕ್‌ ವಾಲ್‌ನಲ್ಲಿ ಬರೆದುಕೊಂಡಿದ್ದರು.

SSLC ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ, ಪೋಷಕರು ಆತ್ಮವಿಶ್ವಾಸ ತುಂಬಿ; ಸುರೇಶ್‌ಕುಮಾರ್

ಬಂಟ್ವಾಳದ ಕಂಚಿಕಾರಪೇಟೆಯ ನಿವಾಸಿಯಾಗಿರೋ ಕೌಶಿಕ್ ಅವರ ತಂದೆ ಮರಗೆಲಸ ಮಾಡುತ್ತಿದ್ದಾರೆ. ಬಡತನದ ಹಿನ್ನೆಲೆಯಿಂದ ಬಂದಿರೋ ಕಾರಣ ಕೌಶಿಕ್‌ನನ್ನು ಓದಿಸಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸುವ ಕನಸನ್ನು ಆತನ ತಂದೆ ರಾಜೇಶ್ ಆಚಾರ್ಯ ಅವರು ಹೊಂದಿದ್ದಾರೆ. ಚಿತ್ರಕಲೆ, ಕ್ರಾಫ್ಟ್, ಸಂಗೀತದಲ್ಲೂ ತನ್ನ ಪ್ರತಿಭೆಯನ್ನು ತೋರಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಕೌಶಿಕ್‌ನನ್ನು ಮುಂದೆ ವಾಣಿಜ್ಯ ವಿಭಾಗದಲ್ಲಿ ಓದಿಸುವ ಇಚ್ಛೆ ಇದೆ ಎಂದು ಆತನ ತಾಯಿ ತಿಳಿಸಿದ್ದಾರೆ. ಅಲ್ಲದೇ ಆತನ ಮುಂದಿನ ವಿದ್ಯಾಭ್ಯಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ನೆರವು ನೀಡುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ: ರಾಜ್ಯಕ್ಕೆ ಸನ್ನಿಧಿ ಹೆಗಡೆ ಟಾಪರ್‌, ಅತಿ ದೊಡ್ಡ ಸರಕಾರಿ ಶಾಲೆಯ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ