ಆ್ಯಪ್ನಗರ

ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯಕ್ಕೆ ಗೃಹ ಸಚಿವ ಬೊಮ್ಮಾಯಿ ಭೇಟಿ!

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದಿದ್ದಾರೆ. ಧರ್ಮಸ್ಥಳದಲ್ಲಿ ಸರಕಾರದ ಆದೇಶ ಪಾಲನೆಯೊಂದಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

Vijaya Karnataka Web 10 Jun 2020, 4:29 pm
ಬೆಳ್ತಂಗಡಿ: ಕೊರೊನಾ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ದೇವರ ದರ್ಶನ ಪಡೆಯಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸರಕಾರದ ಆದೇಶ ಪಾಲನೆಯೊಂದಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮಾದರಿಯಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
Vijaya Karnataka Web dharmastala temple
ಸಾಂದರ್ಭಿಕ ಚಿತ್ರ


ಉಡುಪಿಯಿಂದ ಬೆಂಗಳೂರಿಗೆ ತೆರಳುವ ಸಂದರ್ಭ ಮಂಗಳವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದ ಬಳಿಕ ಮಾಧ್ಯಮದವರ ಜತೆ ಮಾತನಾಡಿದರು.

ಇಡೀ ವಿಶ್ವವೇ ಕೋವಿಡ್‌-19ನಿಂದ ಮುಕ್ತಿ ಹೊಂದಲಿ. ಎಲ್ಲರೂ ಆರೋಗ್ಯದೊಂದಿಗೆ ಶಾಂತಿ ಸುಭಿಕ್ಷೆಯಿಂದ ಜೀವನ ನಡೆಸುವಂತಾಗಲಿ ಎಂದು ಶ್ರೀ ಮಂಜುನಾಥಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

ಕೊರೊನಾಗೆ ತತ್ತರಿಸಿದ ‘ಕಲ್ಯಾಣ’; ಬಸವಣ್ಣ ನಾಡು ಸೋಂಕಿನಿಂದ ತಲ್ಲಣ

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ ಜತೆಯಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. ಕ್ಷೇತ್ರದ ವತಿಯಿಂದ ಹೆಗ್ಗಡೆಯವರ ಆಪ್ತ ಕಾರ‍್ಯದರ್ಶಿ ಎ.ವಿ. ಶೆಟ್ಟಿ, ದೇವಳ ಕಚೇರಿ ಪ್ರಬಂಧಕ ಪಾಶ್ರ್ವನಾಥ್‌ ಜೈನ್‌, ಪಾರುಪತ್ಯಗಾರ ಲಕ್ಷಿತ್ರ್ಮೕನಾರಾಯಣ ರಾವ್‌ ಸ್ವಾಗತಿಸಿದರು.

ದಕ್ಷಿಣ ಒಳನಾಡಿಗೆ ಆವರಿಸಿದ ಮಾನ್ಸೂನ್: ಇನ್ನೆರಡು ದಿನದಲ್ಲಿ ರಾಜ್ಯವ್ಯಾಪಿ ಮುಂಗಾರು!

ಈ ಸಂದರ್ಭ ಶಾಸಕ ಹರೀಶ್‌ ಪೂಂಜ, ಬಿಜೆಪಿ ಮಂಡಲ ಕಾರ‍್ಯದರ್ಶಿ ಗಳಾದ ಸುಬ್ರಹ್ಮಣ್ಯ ಗೌಡ ಕೈಕುರೆ, ಶ್ರೀನಿವಾಸ ರಾವ್‌, ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್‌, ಡಿವೈಎಸ್‌ಪಿ ವೆಲಂಟೆನ್‌ ಡಿಸೋಜಾ, ತಹಸೀಲ್ದಾರ್‌ ಗಣಪತಿ ಶಾಸ್ತ್ರಿ, ಪಿಡಬ್ಲೂತ್ರ್ಯಡಿ ಎಇಇ ಶಿವಪ್ರಸಾದ್‌ ಅಜಿಲ, ಪ್ರಮುಖರಾದ ರಕ್ಷಿತ್‌ ಶೆಟ್ಟಿ, ಯಶವಂತ್‌ ಬೆಳಾಲು ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ