ಆ್ಯಪ್ನಗರ

ಸುಬ್ರಹ್ಮಣ್ಯದಲ್ಲಿ ಚಲಿಸುತ್ತಿದ್ದ ಬೈಕ್‌ ಮೇಲೆ ಜಿಗಿದ ಕಡವೆ: ಸವಾರ ಸ್ಥಳದಲ್ಲೇ ಸಾವು!

ಬೈಕ್ ಮೇಲೆ ಕಡವೆಯೊಂದು ಜಿಗಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಲ್ಕುಂದ ವಿಷ್ಣುಮೂರ್ತಿ ದೈವಸ್ಥಾನದ ಸಮೀಪ ನಡೆದಿದೆ. ​​ಸಹ ಸವಾರ ಸಹೋದರ ರವಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ರಾಮಚಂದ್ರ ಅವರು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಹಲವು ವರುಷಗಳಿಂದ ಹೆಡ್ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Vijaya Karnataka Web 16 Oct 2021, 11:34 am
ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಕಡವೆಯೊಂದು ಜಿಗಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜ್ಯ ಹೆದ್ದಾರಿ ಕುಲ್ಕುಂದ ವಿಷ್ಣುಮೂರ್ತಿ ದೈವಸ್ಥಾನದ ಸಮೀಪ ಶನಿವಾರ ಮುಂಜಾನೆ ನಡೆದಿದೆ.
Vijaya Karnataka Web ರಾಮಚಂದ್ರ ಅರ್ಬಿತ್ತಾಯ


ಮೃತ ಸವಾರ ರಾಮಚಂದ್ರ ಅರ್ಬಿತ್ತಾಯ(50) ಎಂಬವರಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದ ನೂಚಿಲ ನಿವಾಸಿಯಾದ ಇವರು ಪ್ರತಿನಿತ್ಯ ಶಟಲ್ ಆಡಲು ಕುಲ್ಕುಂದ ಎಂಬಲ್ಲಿಗೆ ಹೋಗುತ್ತಿದ್ದರು. ಎಂದಿನಂತೆ ಇಂದು ಕೂಡ ತಮ್ಮ ಸಹೋದರ ರವಿ ಅವರೊಂದಿಗೆ ತೆರಳುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ.

ಸಹ ಸವಾರ ಸಹೋದರ ರವಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ರಾಮಚಂದ್ರ ಅವರು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಹಲವು ವರುಷಗಳಿಂದ ಹೆಡ್ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ರಾಮಚಂದ್ರ ಅರ್ಬಿತ್ತಾಯ ಅವರು ಬಹುಮುಖ ಪ್ರತಿಭೆಯಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುರುತಿಸಿಕೊಂಡವರು.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಬ್ರಹ್ಮಣ್ಯ ಠಾಣಾ ಎಸ್ ಐ ಹಾಗೂ ಸುಳ್ಯ ವೃತ್ತ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ