ಆ್ಯಪ್ನಗರ

ನ.27ರಿಂದ ರಾಜ್ಯದಲ್ಲಿ ಬಿಜೆಪಿ ಗ್ರಾಮ ಸ್ವರಾಜ್‌ ಯಾತ್ರೆ, ನಳಿನ್ ಕುಮಾರ್ ಕಟೀಲ್

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನ.27ರಿಂದ ಬಿಜೆಪಿ ಗ್ರಾಮ ಸ್ವರಾಜ್‌ ಯಾತ್ರೆ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ. ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕುಟುಂಬ ಮಿಲನ ಕಾರ್ಯಕ್ರಮ ನಡೆಯುತ್ತಿದ್ದು, ರಾಜ್ಯದ ಎಲ್ಲೆಡೆ ಶೇ.60ರಷ್ಟು ಪೂರ್ಣಗೊಂಡಿದೆ ಎಂದರು.

Vijaya Karnataka Web 22 Nov 2020, 11:44 am
ಮಂಗಳೂರು: ಮುಂಬರುವ ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ಸ್ವರಾಜ್‌ ಯಾತ್ರೆ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ.
Vijaya Karnataka Web naleen kumar Kateel


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ.27ರಿಂದ ಡಿ.3ರವರೆಗೆ ಈ ಯಾತ್ರೆ ಸಂಘಟಿಸಲಾಗಿದೆ. ಮೂರರಿಂದ ನಾಲ್ಕು ವಿಧಾನಸಭೆ ಕ್ಷೇತ್ರಗಳನ್ನು ಜತೆಯಾಗಿ ಸೇರಿಸಿ ಪ್ರತಿ ಜಿಲ್ಲೆಯ ಎರಡು ಕಡೆಗಳಲ್ಲಿ ಈ ಯಾತ್ರೆ ನಡೆಯಲಿದೆ. ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರು ಮಾತ್ರ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕುಟುಂಬ ಮಿಲನ ಕಾರ್ಯಕ್ರಮ ನಡೆಯುತ್ತಿದ್ದು, ರಾಜ್ಯದ ಎಲ್ಲೆಡೆ ಶೇ.60ರಷ್ಟು ಪೂರ್ಣಗೊಂಡಿದೆ. ಪಂಚರತ್ನ ಸದಸ್ಯರ ನೇಮಕ ಪ್ರಕ್ರಿಯೆಯೂ ಶೇ.70ರಷ್ಟು ಪೂರ್ಣಗೊಂಡಿದೆ. ಈ ತಿಂಗಳಾಂತ್ಯಕ್ಕೆ ಶೇ.10ರಷ್ಟು ಗುರಿ ಸಾಧಿಸಲಿದ್ದೇವೆ ಎಂದರು.
ಪಂಪ್‌ವೆಲ್ ಸೇತುವೆ ಸಮಯಕ್ಕೆ ಮುಗಿಸಲಾಗದ ಕಟೀಲ್‌ಗೆ ಸಿದ್ದರಾಮಯ್ಯ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ: ಕಾಂಗ್ರೆಸ್‌ ಕಿಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ.28 ಅಥವಾ 29ರಂದು ಗ್ರಾಮ ಸ್ವರಾಜ್‌ ಯಾತ್ರೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಮಂಗಳೂರು ಉತ್ತರ, ಮಂಗಳೂರು, ಮೂಲ್ಕಿ-ಮೂಡುಬಿದಿರೆ ಹಾಗೂ ಬಂಟ್ವಾಳ ವಿಧಾನಸಭೆ ಕ್ಷೇತ್ರ ಸೇರಿ ಒಂದು ಸಮಾವೇಶ ಹಾಗೂ ಸುಳ್ಯ, ಪುತ್ತೂರು, ಬೆಳ್ತಂಗಡಿ ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡ ಇನ್ನೊಂದು ಸಮಾವೇಶ ನಡೆಸಲಾಗುವುದು ಎಂದರು.
ಕರಾವಳಿ ಮಾದರಿ ಪಕ್ಷ ಸಂಘಟನೆ, ಚಾಮುಂಡೇಶ್ವರಿ ನೆಲೆಯಿಂದ ಬಿಜೆಪಿ ಸಂಕಲ್ಪ ಯಾತ್ರೆ ಆರಂಭ: ಕಟೀಲ್

ದಕ್ಷಿಣ ಕನ್ನಡ ಜಿಲ್ಲೆಯ ಎರಡು ಕಡೆಗಳಲ್ಲಿ ನಡೆಯುವ ಸಮಾವೇಶದಲ್ಲಿ ಡಿಸಿಎಂ ಅಶ್ಚತ್ಥ ನಾರಾಯಣ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ ಮತ್ತಿತರರು ಭಾಗವಹಿಸಲಿದ್ದಾರೆ. ಗ್ರಾಪಂ ಚುನಾವಣೆಗೆ ಮೀಸಲಾತಿ ಘೋಷಣೆಯಾದ ತಕ್ಷಣ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ