ಆ್ಯಪ್ನಗರ

ಮಂಜನಾಡಿ: ಬಿಜೆಪಿ ವಿಜಯೋತ್ಸವಕ್ಕೆ ಚಾಲನೆ

ಉಳ್ಳಾಲ: ಮಂಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಅಭೂತಪವೂರ್ವ ಗೆಲುವಿಗೆ ಅಹೋರಾತ್ರಿ ಶ್ರಮಿಸಿದ ಪಕ್ಷ ದ ಕಾರ್ಯಕರ್ತರ ಉತ್ಸಾಹಕ್ಕೆ ತಣ್ಣೀರು ಎರಚಬಾರದು ಎನ್ನುವ ನೆಲೆಯಲ್ಲಿ ವಿಜಯೋತ್ಸವ ನಡೆಸಲಾಗುತ್ತಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

Vijaya Karnataka 4 Jun 2019, 5:00 am
ಉಳ್ಳಾಲ: ಮಂಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಅಭೂತಪವೂರ್ವ ಗೆಲುವಿಗೆ ಅಹೋರಾತ್ರಿ ಶ್ರಮಿಸಿದ ಪಕ್ಷ ದ ಕಾರ್ಯಕರ್ತರ ಉತ್ಸಾಹಕ್ಕೆ ತಣ್ಣೀರು ಎರಚಬಾರದು ಎನ್ನುವ ನೆಲೆಯಲ್ಲಿ ವಿಜಯೋತ್ಸವ ನಡೆಸಲಾಗುತ್ತಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.
Vijaya Karnataka Web bjp vijayotasava
ಮಂಜನಾಡಿ: ಬಿಜೆಪಿ ವಿಜಯೋತ್ಸವಕ್ಕೆ ಚಾಲನೆ


ಮಂಗಳೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಹಿನ್ನೆಲೆಯಲ್ಲಿ ಸೋಮವಾರ ಉಳ್ಳಾಲದ ವಿವಿಧ ಭಾಗಗಳಲ್ಲಿ ಅಯೋಜಿಸಲಾದ ವಿಜಯೋತ್ಸವ ಪ್ರಯುಕ್ತ ಮಂಜನಾಡಿ ಶ್ರೀ ವಿಷ್ಣುಮೂರ್ತಿ ಜನಾರ್ದನ ದೇವಸ್ಥಾನದಲ್ಲಿ ವಿಜಯೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ನರೇಂದ್ರ ಮೋದಿ ಎರಡನೇ ಬಾರಿ ಪ್ರಧಾನಿಯಾಗಬೇಕು, ಭಾರತ ವಿಶ್ವದ ಎತ್ತರಕ್ಕೆ ಏರಬೇಕು ಎಂಬ ಜನರ ಆಸೆ ಈಡೇರಿದೆ. ಮಂಗಳೂರು ಕ್ಷೇತ್ರದ ಮತದಾರರು ಮತ್ತೊಮ್ಮೆ ಬಿಜೆಪಿಗೆ ಆಶೀರ್ವಾದ ಮಾಡಿದ್ದು, ಜಿಲ್ಲೆಯ ಜನರಿಗೆ ಗೌರವ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ನುಡಿದರು.

ವಿಜಯೋತ್ಸವದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷ ಸಂತೋಷ್‌ ಕುಮಾರ್‌ ರೈ ಬೋಳಿಯಾರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್‌ ಉಳ್ಳಾಲ್‌, ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ, ಜಿಲ್ಲಾ ಮುಖಂಡ ಚಮದ್ರಶೇಖರ ಉಚ್ಚಿಲ್‌, ಜಿಲ್ಲಾ ಕಾರ್ಯದರ್ಶಿ ಸತೀಶ್‌ ಕುಂಪಲ, ಶ್ರೀ ಕ್ಷೇತ್ರದ ಡಾ. ಕೃಷ್ಣ ಭಟ್‌ ಗಂಗರಮಜಲು, ಚಂದ್ರಹಾಸ್‌ ಪಂಡಿತ್‌ ಹೌಸ್‌, ರಾಮಕೃಷ್ಣ ಪಟ್ಟೋರಿ, ಪ್ರಭಾಕರ ರೈ ನಿತ್ತಿಲಕೋಡಿ, ಸಂಜೀವ ಶೆಟ್ಟಿ ಅಂಬ್ಲಮೊಗರು ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಮುಖಂಡರು, ಕಾರ್ಯಕರ್ತರು, ಮೋದಿ ಹಾಗೂ ನಳಿನ್‌ ಕುಮಾರ್‌ ಕಟೀಲ್‌ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ