ಆ್ಯಪ್ನಗರ

ಗ್ರಾಮದ ಆಡಳಿತ ಗ್ರಾಮದಲ್ಲಿಯೇ ಇರಬೇಕು, ಆದರ್ಶ ಪಂಚಾಯಿತಿ ವ್ಯವಸ್ಥೆ ಮಾಡಬೇಕು: ಅಶ್ವತ್ಥನಾರಾಯಣ

ಕೇವಲ ಒಂದೂವರೆ ವರ್ಷದಿಂದ ಸರಕಾರವು ಗ್ರಾಮೀಣಾಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಜನಪರವಾದ ಅನೇಕ ಯೋಜನೆಗಳು ಜಾರಿ ಆಗಿವೆ. ಇವೆಲ್ಲವನ್ನು ಗ್ರಾಮಗಳಿಗೆ ಮುಟ್ಟಿಸಬೇಕಾದ ಕೆಲಸ ನಡೆಯಬೇಕಾಗಿದೆ ಎಂದರು.

Vijaya Karnataka Web 28 Nov 2020, 4:19 pm
ಬಂಟ್ವಾಳ: ನಗರ, ಪಟ್ಟಣಗಳಂತೆಯೇ ಗ್ರಾಮಗಳೂ ಅಭಿವೃದ್ಧಿ ಹೊಂದಬೇಕು. ಗ್ರಾಮದ ಆಡಳಿತ ಆ ಗ್ರಾಮದಲ್ಲಿಯೇ ಇರಬೇಕು. ಅಂತಹ ಆದರ್ಶ ಪಂಚಾಯತಿ ವ್ಯವಸ್ಥೆಯನ್ನು ಮರುಸ್ಥಾಪನೆ ಮಾಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಹೇಳಿದರು.
Vijaya Karnataka Web ಅಶ್ವತ್ಥನಾರಾಯಣ
ಅಶ್ವತ್ಥನಾರಾಯಣ


ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಿಜೆಪಿ ಜಿಲ್ಲಾ ಘಟಕ ಏರ್ಪಡಿಸಿದ್ದ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಉತ್ತಮ ಆಡಳಿತ ವ್ಯವಸ್ಥೆಯನ್ನು ಗ್ರಾಮ ಮಟ್ಟದಲ್ಲಿಯೇ ರೂಪಿಸಬೇಕು. ಉತ್ತಮ ಜನಪ್ರತಿನಿಧಿಗಳು ಉತ್ತಮ ಪಕ್ಷದಿಂದ ಮಾತ್ರ ಬರಲು . ಸಾಧ್ಯ. ಅಂತಹ ಉತ್ತಮ ಪಕ್ಷ ಬಿಜೆಪಿ ಎಂದರು.

ಕೇವಲ ಒಂದೂವರೆ ವರ್ಷದಿಂದ ಸರಕಾರವು ಗ್ರಾಮೀಣಾಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಜನಪರವಾದ ಅನೇಕ ಯೋಜನೆಗಳು ಜಾರಿ ಆಗಿವೆ. ಇವೆಲ್ಲವನ್ನು ಗ್ರಾಮಗಳಿಗೆ ಮುಟ್ಟಿಸಬೇಕಾದ ಕೆಲಸ ನಡೆಯಬೇಕಾಗಿದೆ ಎಂದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಳೆದ ಆರೂವರೆ ವರ್ಷಗಳಿಂದ ಜಾರಿ ಮಾಡಿರುವ ಕಾರ್ಯಕ್ರಮಗಳು ಗ್ರಾಮೀಣ ಭಾರತಕ್ಕೆ ವರದಾನವಾಗಿವೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ತಾಂತ್ರಿಕ ಬೆಸುಗೆ

ಕೋವಿಡ್‌ ಬಂದ ಮೇಲೆ ತಂತ್ರಜ್ಞಾನದಿಂದಲೇ ಎಲ್ಲವನ್ನೂ ಸಂಪರ್ಕಿಸುವ ಕೆಲಸ ನಡೆಯುತ್ತಿದೆ. ವೃತ್ತಿ, ಸೇವೆ, ಶಿಕ್ಷಣ ಸೇರಿದಂತೆ ಎಲ್ಲವನ್ನು ತಂತ್ರಜ್ಞಾನವೇ ಬೆಸೆಯುತ್ತಿದೆ. ಹೀಗಾಗಿ ಗ್ರಾಮಗಳ್ಲಲೂ ಈಗ ತಂತ್ರಜ್ಞಾನವೇ ಎಲ್ಲವನ್ನೂ ನಿರ್ಧರಿಸುತ್ತಿದೆ. ಹೀಗಾಗಿ, ಗ್ರಾಮೀಣ ಮಟ್ಟದಲ್ಲಿ ಕನೆಕ್ಟಿವಿಟಿ ಮುಖ್ಯವಾಗುತ್ತದೆ. ಹೀಗಾಗಿ ಹಳ್ಳಿಗಳಿಗೆ ಉತ್ತಮ ಸಂಪರ್ಕ ಸೇತುವೆಯನ್ನು ಕಲ್ಪಸಬೇಕು ಎಂದು ಡಿಸಿಎಂ ಅಶ್ವತ್ಥನಾರಾಯಣ ಪ್ರತಿಪಾದಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಶಾಸಕರಾದ ರಾಜೇಶ್‌ ನಾಯಕ್, ಉಮಾನಾಥ ಕೋಟ್ಯಾನ್‌‌, ಡಾ.ಭರತ್‌ ಶೆಟ್ಟಿ, ಕೋಲಾರದ ಸಂಸದ ಮುನಿಸ್ವಾಮಿ, ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮುಂತಾದವರು ಮಾತನಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ