ಆ್ಯಪ್ನಗರ

ಜನಿಸಿದ್ದು ಹೆಣ್ಣು ಮಗು, ಕೊಟ್ಟಿದ್ದು ಗಂಡು ಮಗು!; ಪೋಷಕರ ಆರೋಪಕ್ಕೆ ಲೇಡಿಗೋಶನ್‌ ಆಸ್ಪತ್ರೆ ಸ್ಪಷ್ಟನೆ

ಹೆರಿಗೆಯ ಸಂದರ್ಭ ಮಹಿಳೆಗೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಸಿಸೇರಿಯನ್‌ ಮಾಡಲಾಗಿತ್ತು. ಆ ಸಂದರ್ಭ ದಾಖಲೆಗಳಲ್ಲಿ ಹೆಣ್ಣು ಮಗು ಎಂದು ನಮೂದಿಸಲಾಗಿತ್ತು. ಇದಾಗಿ ಮಗುವಿನ ಆರೋಗ್ಯದಲ್ಲಿ ಏರು ಪೇರಾದ ಕಾರಣ 18 ದಿನಗಳ ಕಾಲ ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅ.14ರಂದು ಪೋಷಕರು ಆಸ್ಪತ್ರೆಯಿಂದ ಮಗುವನ್ನು ಡಿಸ್ಚಾರ್ಜ್‌ ಮಾಡಿಸಿ ಹೆಚ್ಚಿನ ಚಿಕಿತ್ಸೆಗೆ ಬ್ರಹ್ಮಾವರದ ಆಸ್ಪತ್ರೆಗೆ ದಾಖಲಿಸಿದ್ದರು.

Vijaya Karnataka 16 Oct 2021, 6:52 am
ಮಂಗಳೂರು: ನಗರದ ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಹೆರಿಗೆಯ ಸಂದರ್ಭ ಹೆಣ್ಣು ಮಗು ಎಂದು ದಾಖಲೆಯಲ್ಲಿ ನಮೂದಿಸಿ ನಂತರ ಪೋಷಕರಿಗೆ ಗಂಡು ಮಗುವನ್ನು ನೀಡಿದ್ದು, ಇದರಿಂದ ಅನುಮಾನಗೊಂಡ ಪೋಷಕರು ನಗರದ ಬಂದರು ಪೊಲೀಸ್‌ ಠಾಣೆಗೆ ದೂರು ನೀಡಿ ನ್ಯಾಯ ಕೊಡಿಸುವಂತೆ ತಿಳಿಸಿದ್ದಾರೆ.
Vijaya Karnataka Web Lady Goschen Hospital


ಕುಂದಾಪುರದ ಮಹಿಳೆಯೊಬ್ಬರು ಸೆ.27ರಂದು ಇಲ್ಲಿನ ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿದ್ದರು. ಹೆರಿಗೆಯ ಸಂದರ್ಭ ಮಹಿಳೆಗೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಸಿಸೇರಿಯನ್‌ ಮಾಡಲಾಗಿತ್ತು. ಆ ಸಂದರ್ಭ ದಾಖಲೆಗಳಲ್ಲಿ ಹೆಣ್ಣು ಮಗು ಎಂದು ನಮೂದಿಸಲಾಗಿತ್ತು. ಇದಾಗಿ ಮಗುವಿನ ಆರೋಗ್ಯದಲ್ಲಿ ಏರು ಪೇರಾದ ಕಾರಣ 18 ದಿನಗಳ ಕಾಲ ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅ.14ರಂದು ಪೋಷಕರು ಆಸ್ಪತ್ರೆಯಿಂದ ಮಗುವನ್ನು ಡಿಸ್ಚಾರ್ಜ್‌ ಮಾಡಿಸಿ ಹೆಚ್ಚಿನ ಚಿಕಿತ್ಸೆಗೆ ಬ್ರಹ್ಮಾವರದ ಆಸ್ಪತ್ರೆಗೆ ದಾಖಲಿಸಿದ್ದರು.
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 12 ವರ್ಷ ಕಠಿಣ ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್
ಆದರೆ ಅಲ್ಲಿಗೆ ಹೋಗಿ ದಾಖಲು ಮಾಡಿದಾಗ ಗಂಡು ಮಗುವನ್ನು ಕೊಟ್ಟಿರುವುದು ಪೋಷಕರ ಗಮನಕ್ಕೆ ಬಂದಿದೆ. ನಂತರ ಪೋಷಕರು ಮರಳಿ ಮಗುವನ್ನು ಲೇಡಿಗೋಶನ್‌ ಆಸ್ಪತ್ರೆಗೆ ಕರೆತಂದು, ವೈದ್ಯಾಧಿಕಾರಿ ಬಳಿ ಈ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಅವರು, ಈ ಮಗು ನಿಮ್ಮದೇ, ದಾಖಲೆಯಲ್ಲಿ ನಮೂದಿಸುವ ವೇಳೆ ತಪ್ಪಾಗಿದೆ ಎಂದು ಹೇಳಿದ್ದಾರೆ. ಆದರೆ ಇದರಿಂದ ಅನುಮಾನಗೊಂಡಿರುವ ಮಗುವಿನ ತಂದೆ ಮುಸ್ತಫಾ ಸೂಕ್ತ ತನಿಖೆ ನಡೆಸುವಂತೆ ಕೋರಿ ಬಂದರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್‌ ಎಂ.ಆರ್‌. ಸ್ಪಷ್ಟನೆ ನೀಡಿದ್ದು, ಆಸ್ಪತ್ರೆಯಲ್ಲಿ ಮಗುವನ್ನು ಅದಲು ಬದಲು ಮಾಡಿಲ್ಲ. ದಾಖಲೆಯಲ್ಲಿ ನಮೂದಿಸುವ ವೇಳೆ ತಪ್ಪಾಗಿದೆ. ಹೆಣ್ಣು ಮಗು ಎಂದು ವೈದ್ಯರು ತಪ್ಪಾಗಿ ಉಲ್ಲೇಖಿಸಿದ್ದಾರೆ. ಆದರೆ ಜನಿಸಿದ್ದು ಗಂಡು ಮಗು. ಅದೇ ಮಗುವನ್ನು ಪೋಷಕರಿಗೆ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಂಟ್ವಾಳದಲ್ಲಿ ಪರಿಚಿತರಿಂದ ಅಪ್ರಾಪ್ತೆಯ ಗ್ಯಾಂಗ್‌ರೇಪ್‌; ಇಬ್ಬರನ್ನು ಬಂಧಿಸಿದ ಪೊಲೀಸರು
ದೂರಿನ ಬಗ್ಗೆ ಮಾತನಾಡಿದ ಮಂಗಳೂರು ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌, ಕುಂದಾಪುರದ ಕೋಟೇಶ್ವರ ನಿವಾಸಿ ಮುಸ್ತಫ ಎಂಬವರು ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಮಗು ಅದಲು ಬದಲಾಗಿದೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಆಸ್ಪತ್ರೆಯ ವೈದ್ಯಾಧಿಕಾರಿ ಬಳಿ ಸ್ಪಷ್ಟನೆ ಕೇಳಿದ್ದೇವೆ. ದಾಖಲೆಯಲ್ಲಿ ನಮೂದಿಸುವ ಸಂದರ್ಭ ತಪ್ಪಾಗಿದೆ ಎಂಬ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಕರಣ ದಾಖಲಿಸಿಲ್ಲ. ಈ ಬಗ್ಗೆ ಇನ್ನಷ್ಟು ತನಿಖೆ ಕೈಗೊಳ್ಳಲಿದ್ದೇವೆ. ಒಂದು ವೇಳೆ ಪೋಷಕರ ಆರೋಪ ನಿಜವಾದರೆ ದೂರು ದಾಖಲಿಸಿಕೊಳ್ಳಲು ಅವಕಾಶ ಇದೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ