ಆ್ಯಪ್ನಗರ

ಪೌರತ್ವ ಪ್ರತಿಭಟನೆ: ಮಂಗಳೂರಲ್ಲಿ ಗೋಲಿಬಾರ್‌ಗೆ ಇಬ್ಬರು ಬಲಿ

ಸಾವಿಗೀಡಾದವರನ್ನು ಕಂದಕ್‌ ನಿವಾಸಿ ಜಲೀಲ್‌ (49) ಮತ್ತು ಬೇಂಗ್ರೆ ನಿವಾಸಿ ನೌಶೀರ್‌ (23) ಎಂದು ಗುರುತಿಸಲಾಗಿದೆ. ಕದ್ರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಗುಂಡಿಗೆ ಇವರಿಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Vijaya Karnataka 19 Dec 2019, 9:17 pm

ಮಂಗಳೂರು: ಮಂಗಳೂರು ನಗರದಲ್ಲಿ ಗುರುವಾರ ಮಧ್ಯಾಹ್ನ ನಡೆದ ಪ್ರತಿಭಟನೆ ಹಿಂಸಾರೂಪ ತಾಳಿದ ಹಿನ್ನೆಲೆಯಲ್ಲಿ ಉದ್ರಿಕ್ತರನ್ನು ಚದುರಿಸಲು ಪೊಲೀಸರು ಹಾರಿಸಿದ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ.
Vijaya Karnataka Web Mangalore


ಸಾವಿಗೀಡಾದವರನ್ನು ಕಂದಕ್‌ ನಿವಾಸಿ ಜಲೀಲ್‌ (49) ಮತ್ತು ಬೇಂಗ್ರೆ ನಿವಾಸಿ ನೌಶೀರ್‌ (23) ಎಂದು ಗುರುತಿಸಲಾಗಿದೆ. ಕದ್ರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಗುಂಡಿಗೆ ಇವರಿಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಒಬ್ಬರ ಕಣ್ಣಿಗೆ ಗುಂಡೇಟು ಬಿದ್ದಿದ್ದರೆ, ಮತ್ತೊಬ್ಬರ ಬೆನ್ನಿಗೆ ಗುಂಡು ಬಿದ್ದಿದೆ. ಗುಂಡೇಟು ಬಿದ್ದ ತಕ್ಷಣ ಇಬ್ಬರನ್ನೂ ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಇಬ್ಬರೂ ಮೃತಪಟ್ಟಿರುವುದು ಖಚಿತಪಟ್ಟಿದೆ. ಈ ವಿಷಯವನ್ನು ಮುಸ್ಲಿಂ ಕಮಿಟಿ ಮತ್ತು ಪೊಲೀಸ್‌ ಕಮಿಷನರ್‌ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಖಚಿತಪಡಿಸಿದ್ದಾರೆ.

ಮಂಗಳೂರು ನಗರ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಗುಂಡೇಟಿನಿಂದ ಸಾವಿಗೀಡಾದವರಿಗೆ ಪರಿಹಾರ ನೀಡುವಂತೆ ಮುಸ್ಲಿಂ ಸೆಂಟ್ರಲ್‌ ಕಮಿಟಿ ಅಧ್ಯಕ್ಷ ಮಸೂದ್‌ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ