ಆ್ಯಪ್ನಗರ

ಶಾಸಕ ಎಸ್ ಅಂಗಾರಗೆ ಮಂತ್ರಿಗಿರಿ: ಯಾವುದೇ ಖಾತೆ ಕೊಟ್ರು ನಿಭಾಯಿಸ್ತೀನಿ ಅಂದ್ರು ಸುಳ್ಯದ ಬಂಗಾರ!

ಸುಳ್ಯ ಕ್ಷೇತ್ರದಿಂದ ಸತತ 6 ಬಾರಿ ಗೆದ್ದು ಶಾಸಕರಾಗಿ ಆಯ್ಕೆಯಾದ ಎಸ್. ಅಂಗಾರರವರಿಗೆ ಇದೀಗ ಮಂತ್ರಿ ಭಾಗ್ಯ ಒಲಿದು ಬಂದಿದೆ. ಸ್ವತ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರವರು ಕರೆ ಮಾಡಿ ಬೆಂಗಳೂರಿಗೆ ಬರುವಂತೆ ಹೇಳಿದ್ದಾರೆ. ಇಂದು ರಾಜಭವನದಲ್ಲಿ ಮೂರು ಗಂಟೆಗೆ ಎಸ್ ಅಂಗಾರರವರು ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ ಆಗಿದೆ.

Vijaya Karnataka Web 13 Jan 2021, 12:23 pm
ಮಂಗಳೂರು: ಆರು ಬಾರಿ ಗೆದ್ದು ಸುಳ್ಯ ಕ್ಷೇತ್ರದ ಶಾಸಕರಾದ ಎಸ್ ಅಂಗಾರರವರು ಈ ಬಾರಿ ಮಂತ್ರಿಯಾಗೋದು ಖಚಿತವಾಗಿದೆ.
Vijaya Karnataka Web ಅಂಗಾರ


ಬುಧವಾರ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು, ಸುಳ್ಯದ ಶಾಸಕರಾದ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ಖಾತ್ರಿಯಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮೊದಲನೆಯದಾಗಿ ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಪಕ್ಷ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದೆ. ಸ್ವತ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರವರು ಕರೆ ಮಾಡಿ ಬೆಂಗಳೂರಿಗೆ ಬರುವಂತೆ ಹೇಳಿದ್ದಾರೆ ಎಂದರು.

ಇಂದು ರಾಜಭವನದಲ್ಲಿ ಮೂರು ಗಂಟೆಗೆ ಸುಳ್ಯ ಕ್ಷೇತ್ರದ ಶಾಸಕ ಎಸ್ ಅಂಗಾರರವರು ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ ಆಗಿದ್ದು, ಯಾವುದೇ ಸಚಿವ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ. ಇಂತಹದೇ ಬೇಕು ಎಂದು ಕೇಳುವುದಿಲ್ಲ ಎಂದು ಅಂಗಾರರವರು ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿಯ ಶಕ್ತಿಕೇಂದ್ರ ಎಂದೇ ಜನಜನಿತವಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಶಾಸಕ ಎಸ್‌. ಅಂಗಾರ ರಾಜ್ಯ ರಾಜಕಾರಣದಲ್ಲಿ ಸೋಲಿಲ್ಲದ ಸರದಾರ. ಬಿಜೆಪಿಯ ಶಕ್ತಿ ಕೇಂದ್ರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2013ರ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾದಾಗಲೂ ಅಂಗಾರ ಮಾತ್ರ ಗೆದ್ದು ಏಕೈಕ ಬಿಜೆಪಿ ಶಾಸಕರೆನಿಸಿಕೊಂಡವರು. ಅದುದರಿಂದ ಅವರನ್ನು ಸಚಿವ ಸಂಪುಟಕ್ಕೆ ಪರಿಗಣಿಸಬೇಕೆಂಬ ಆಗ್ರಹವೂ ಈ ಮೊದಲೇ ಕೇಳಿಬಂದಿತ್ತು.. ಚರ್ಚೆಯೂ ನಡೆದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ