ಆ್ಯಪ್ನಗರ

ಮಗನ ನೋಡಲೆಂದು ಬಂದವರು ಮಸಣ ಸೇರಿದರು: ಕಾರು-ಬಸ್ ಡಿಕ್ಕಿ, ಮೂವರ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂಬೂರು ಎಂಬಲ್ಲಿ ಭಾನುವಾರ ಕಾರು-ಬಸ್‌ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ರಾಮನಗರ ಜಿಲ್ಲೆಯ ಮೂವರು ಮೃತಪಟ್ಟಿದ್ದಾರೆ. ಸುಳ್ಯದ ಚೊಕ್ಕಾಡಿ ಸತ್ಯ ಸಾಯಿ ವಿದ್ಯಾಸಂಸ್ಥೆಯಲ್ಲಿ ನಾಗೇಂದ್ರ ಅವರ ಮಗ ಪೂರ್ವಿಕ್ ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದು, ಆತನನ್ನು ಭೇಟಿ ಮಾಡಲೆಂದು ಕುಟುಂಬ ಬರುತ್ತಿತ್ತು. ಚೊಕ್ಕಾಡಿಗೆ ತಲುಪುವ ಕೇವಲ 15 ಕಿ.ಮೀ.ದೂರದಲ್ಲಿ ಈ ಅಪಘಾತ ಸಂಭವಿಸಿದೆ.

Vijaya Karnataka Web 14 Jul 2019, 3:52 pm
ಸುಳ್ಯ: ಅಟೋ ರಿಕ್ಷಾವನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್‌ಗೆ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.
Vijaya Karnataka Web Car- bus accident


ಕೊಳ್ಳೆಗಾಲ ಡಿಪೋಗೆ ಸೇರಿದ ಮಡಿಕೇರಿ-ಮೈಸೂರು- ಕೊಳ್ಳೆಗಾಲ ಕೆ.ಎಸ್.ಆರ್.ಟಿ.ಸಿ. ಬಸ್ ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ವೇಳೆ ಬೆಂಗಳೂರು ಸಮೀಪದ ರಾಮನಗರದಿಂದ ಸುಳ್ಯಕ್ಕೆ ಬರುತ್ತಿದ್ದ ರಿಟ್ಸ್ ಕಾರು ಅರಂಬೂರು ಸಮೀಪ ರಿಕ್ಷಾವೊಂದನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಬಸ್‌ಗೆ ಢಿಕ್ಕಿ ಹೊಡೆಯಿತು.

ಪರಿಣಾಮ ಕಾರಿನಲ್ಲಿದ್ದ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆ ನಿವಾಸಿ ಮಂಜುಳಾ, ಜಯಶೀಲಾ, ಸೋಮಣ್ಣ , ನಾಗೇಂದ್ರ, ಬಾಲಕಿ ತನ್ಮಯಿ ಗಾಯಗೊಂಡರು. ಗಾಯಾಳುಗಳನ್ನು ಸ್ಥಳೀಯರು ಪ್ರಯಾಸಪಟ್ಟು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು. ಮಂಜುಳಾ ಅವರು ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯುವ ಮಧ್ಯೆ ಕೊನೆಯುಸಿರೆಳೆದರು.

ಸೋಮಣ್ಣ ಮತ್ತು ನಾಗೇಂದ್ರ ಅವರ ಮುಖಕ್ಕೆ ಗಂಭೀರವಾಗಿ ಗಾಯಗಳಾಗಿದ್ದು, ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ದಾರಿ ಮಧ್ಯೆ ಇಬ್ಬರೂ ಮೃತಪಟ್ಟರು. ಮೃತದೇಹವನ್ನು ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಜಯಶೀಲ ಹಾಗೂ ತನ್ಮಯಿಯವರು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿದ್ದಾರೆ.

ಢಿಕ್ಕಿ ಹೊಡೆದ ರಭಸಕ್ಕೆ ಕಾರು ಬಸ್‌ನ ಮುಂಭಾಗ ಸಿಲುಕಿಕೊಂಡಿದ್ದು, ಬಳಿಕ ಹಗ್ಗ ಬಳಸಿ ಕಾರನ್ನು ಎಳೆದು ತೆಗೆಯಲಾಯಿತು. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಬಸ್‌ನ ಮುಂಭಾಗವೂ ಜಖಂಗೊಂಡಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಗನ ಭೇಟಿಗೆ ಸುಳ್ಯಕ್ಕೆ ಬಂದವರು:
ಸುಳ್ಯದ ಚೊಕ್ಕಾಡಿ ಸತ್ಯ ಸಾಯಿ ವಿದ್ಯಾಸಂಸ್ಥೆಯಲ್ಲಿ ನಾಗೇಂದ್ರ ಅವರ ಮಗ ಪೂರ್ವಿಕ್ ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದು, ಆತನನ್ನು ಭೇಟಿ ಮಾಡಲೆಂದು ಕುಟುಂಬ ಬರುತ್ತಿತ್ತು. ಚೊಕ್ಕಾಡಿಗೆ ತಲುಪುವ ಕೇವಲ 15 ಕಿ.ಮೀ.ದೂರದಲ್ಲಿ ಈ ಅಪಘಾತ ಸಂಭವಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ