ಆ್ಯಪ್ನಗರ

ನೌಷಾದ್‌ ಕೊಲೆ ಪ್ರಕರಣದಲ್ಲಿ ರವಿ ಪೂಜಾರಿ ಕೈವಾಡ ಶಂಕೆ: ಪ್ರಕರಣ ಸಿಸಿಬಿಗೆ ಹಸ್ತಾಂತರ

16 ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದ ವಕೀಲ ನೌಷಾದ್‌ ಕಾಶಿಂಜಿ ಕೊಲೆ ಪ್ರಕರಣದ ಹೆಚ್ಚಿನ ತನಿಖೆಯನ್ನು ಸಿಸಿಬಿಗೆ ಹಸ್ತಾಂತರಿಸಲಾಗಿದ್ದು, ಈ ತಂಡ ಮಂಗಳೂರಿಗೆ ಆಗಮಿಸಿ ತನಿಖೆ ಆರಂಭಿಸಿದೆ.

Vijaya Karnataka Web 13 Jun 2020, 9:06 am
ಮಂಗಳೂರು: ಮಂಗಳೂರಿನಲ್ಲಿ 16 ವರ್ಷ ಹಿಂದೆ ನಡೆದ ವಕೀಲ ನೌಷಾದ್‌ ಕಾಶಿಂಜಿ ಕೊಲೆ ಪ್ರಕರಣದ ಹೆಚ್ಚಿನ ತನಿಖೆಯನ್ನು ಬೆಂಗಳೂರು ನಗರ ಅಪರಾಧ ಪತ್ತೆದಳ(ಸಿಸಿಬಿ)ಕ್ಕೆ ಹಸ್ತಾಂತರಿಸಲಾಗಿದ್ದು, ಈ ತಂಡ ಮಂಗಳೂರಿಗೆ ಆಗಮಿಸಿ ತನಿಖೆ ಆರಂಭಿಸಿದೆ.
Vijaya Karnataka Web Ravi Pujari


2004ರ ಏ.9ರಂದು ಪಳ್ನೀರ್‌ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿಯೇ ನೌಷಾದ್‌ನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಭೂಗತ ದೊರೆ ದಾವೂದ್‌ ಇಬ್ರಾಹಿಂ ಸಹಚರ ರಶೀದ್‌ ಮಲಬಾರಿ ಪರವಾಗಿ ನೌಷಾದ್‌ ನ್ಯಾಯಾಲಯದಲ್ಲಿ ಹಾಜರಾಗಿ ವಾದ ಮಂಡಿಸಿದ್ದರು. ಇದು ಮಾತ್ರವಲ್ಲದೆ ನೌಷಾದ್‌ ಕೆಲವು ಸಂಘಟನೆಗಳ ಜತೆ ನಂಟು ಹೊಂದಿದ್ದ ಕಾರಣಕ್ಕೆ ಭೂಗತ ಪಾತಕಿ ರವಿ ಪೂಜಾರಿ ಈತನ ಮೇಲೆ ಕಣ್ಣಿಟ್ಟಿದ್ದ. ಈ ಕಾರಣದಿಂದ ನೌಷಾದ್‌ ಕೊಲೆಯ ಹಿಂದೆ ರವಿ ಪೂಜಾರಿ ಕೈವಾಡ ಕೇಳಿಬರುತ್ತಿತ್ತು.

ಕೊಲೆ ಬೆದರಿಕೆ ಹಾಕಿದ್ದ: ನೌಷಾದ್‌ ಕಾಶಿಂಜಿ ಕೊಲೆಯಾಗುವ ಮುನ್ನ ಭೂಗತ ಪಾತಕಿ ರವಿ ಪೂಜಾರಿ ಆತನಿಗೆ ಕೊಲೆ ಬೆದರಿಕೆ ಹಾಕಿದ್ದ ಬಗ್ಗೆ ಕೊಲೆ ತನಿಖೆಯಲ್ಲಿಬಹಿರಂಗವಾಗಿತ್ತು. ಇದೀಗ ಭೂಗತ ಪಾತಕಿ ರವಿ ಪೂಜಾರಿ ಬೆಂಗಳೂರು ಪೊಲೀಸರ ವಶದಲ್ಲಿದ್ದು, ನೌಷಾದ್‌ ಕೊಲೆ ಸಮಗ್ರ ತನಿಖೆಗಾಗಿ ಪ್ರಕರಣವನ್ನು ಬೆಂಗಳೂರು ಸಿಸಿಬಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಹಿರಿಯ ಅಧಿಕಾರಿಗಳ ಸೂಚನೆಯಂತೆ ಸಿಸಿಬಿ ತಂಡ ಮಂಗಳೂರಿಗೆ ಆಗಮಿಸಿ ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ