ಉಪ್ಪಿನಂಗಡಿ: ಸಿಮೆಂಟ್ ಮಿಕ್ಸಿಂಗ್ ಸಾಗಾಟದ ಟ್ಯಾಂಕರೊಂದು ಮಗುಚಿ ಬಿದ್ದ ಪರಿಣಾಮ ಟ್ಯಾಂಕರ್ ಚಾಲಕ ಗಣೇಶ್ (42) ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಕೊರೊನಾ ಭೀತಿ; ಮಾಜಿ ಸಚಿವ ರಮಾನಾಥ ರೈ ಹೋಂ ಕ್ವಾರೆಂಟೈನ್..!
ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಹೆ 75ರ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತಕ್ಕೀಡಾದ ಟ್ಯಾಂಕರ್ ಹೆದ್ದಾರಿ ಬದಿಯ ಚರಂಡಿಗೆ ಬಿದ್ದು ಹೂತು ಹೋಗಿದೆ. ಸ್ಥಳೀಯರು ಟ್ಯಾಂಕರನ್ನು ತೆರವುಗೊಳಿಸಲು ಯತ್ನಿಸಿದಾಗ ಚಾಲಕ ಕಾಣಿಸಿಕೊಳ್ಳಲಿಲ್ಲ. ಬಳಿಕ ಪರಿಶೀಲನೆ ನಡೆಸಿದಾಗ ಚರಂಡಿಯ ಕೆಸರಿನಲ್ಲಿ ಕಾಲುಗಳು ಕಾಣಿಸಿಕೊಂಡು ಶೋಧ ಕಾರ್ಯಾಚರಣೆ ನಡೆಸಿ ಮಣ್ಣಲ್ಲಿ ಹೂತು ಹೋಗಿದ್ದ ಚಾಲಕನನ್ನು ಮೇಲಕ್ಕೆತ್ತಲಾಯಿತು.
ಪಚ್ಚನಾಡಿಯಲ್ಲಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಜಾಗದಲ್ಲಿರುವ ಅಕ್ರಮ
ಕೂಡಲೇ ಆತನನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ರಕ್ಷಣಾ ಕಾರ್ಯಾಚರಣೆಯಲ್ಲಿ ಸ್ಥಳೀಯರಾದ ಮನ್ಸೂರ್, ಮುಸ್ತಾಫ್ ಮತ್ತಿತರರು ಪೊಲೀಸರೊಂದಿಗೆ ಸಹಕರಿಸಿದರು.
ಅಂಗಾರರಿಗೆ ಮಂತ್ರಿ ಸ್ಥಾನ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು - ನಳಿನ್ ಕುಮಾರ್
ಘಟನೆ ಸಂಬಂಧ ಉಪ್ಪಿನಂಗಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊರೊನಾ ಭೀತಿ; ಮಾಜಿ ಸಚಿವ ರಮಾನಾಥ ರೈ ಹೋಂ ಕ್ವಾರೆಂಟೈನ್..!
ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಹೆ 75ರ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತಕ್ಕೀಡಾದ ಟ್ಯಾಂಕರ್ ಹೆದ್ದಾರಿ ಬದಿಯ ಚರಂಡಿಗೆ ಬಿದ್ದು ಹೂತು ಹೋಗಿದೆ. ಸ್ಥಳೀಯರು ಟ್ಯಾಂಕರನ್ನು ತೆರವುಗೊಳಿಸಲು ಯತ್ನಿಸಿದಾಗ ಚಾಲಕ ಕಾಣಿಸಿಕೊಳ್ಳಲಿಲ್ಲ. ಬಳಿಕ ಪರಿಶೀಲನೆ ನಡೆಸಿದಾಗ ಚರಂಡಿಯ ಕೆಸರಿನಲ್ಲಿ ಕಾಲುಗಳು ಕಾಣಿಸಿಕೊಂಡು ಶೋಧ ಕಾರ್ಯಾಚರಣೆ ನಡೆಸಿ ಮಣ್ಣಲ್ಲಿ ಹೂತು ಹೋಗಿದ್ದ ಚಾಲಕನನ್ನು ಮೇಲಕ್ಕೆತ್ತಲಾಯಿತು.
ಪಚ್ಚನಾಡಿಯಲ್ಲಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಜಾಗದಲ್ಲಿರುವ ಅಕ್ರಮ
ಕೂಡಲೇ ಆತನನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ರಕ್ಷಣಾ ಕಾರ್ಯಾಚರಣೆಯಲ್ಲಿ ಸ್ಥಳೀಯರಾದ ಮನ್ಸೂರ್, ಮುಸ್ತಾಫ್ ಮತ್ತಿತರರು ಪೊಲೀಸರೊಂದಿಗೆ ಸಹಕರಿಸಿದರು.
ಅಂಗಾರರಿಗೆ ಮಂತ್ರಿ ಸ್ಥಾನ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು - ನಳಿನ್ ಕುಮಾರ್
ಘಟನೆ ಸಂಬಂಧ ಉಪ್ಪಿನಂಗಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.