ಆ್ಯಪ್ನಗರ

ಕುಕ್ಕೆ ಚಂಪಾ ಷಷ್ಠಿ ಜಾತ್ರೋತ್ಸವ: ವಾರಾಂತ್ಯಕ್ಕೆ ಪೂರ್ವಭಾವಿ ಸಭೆ, ಸಚಿವ ಕೋಟ

ಕುಕ್ಕೆ ಚಂಪಾ ಷಷ್ಠಿ ಜಾತ್ರೋತ್ಸವದ ಪ್ರಯುಕ್ತ ವಾರಾಂತ್ಯಕ್ಕೆ ಪೂರ್ವಭಾವಿ ಸಭೆ ನಡೆಸಲಾಗುವುದು. ಎಲ್ಲ ಸಾಧಕ, ಬಾಧಕಗಳನ್ನು ಗಮನದಲ್ಲಿಟ್ಟುಕೊಂಡು ಚಂಪಾ ಷಷ್ಠಿ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Vijaya Karnataka Web 9 Nov 2020, 8:44 am
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಈ ಬಾರಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ನಡೆಸುವ ಬಗ್ಗೆ ಚರ್ಚಿಸಲು ಶೀಘ್ರವೇ ಜಿಲ್ಲಾಮಟ್ಟದ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ಜಾತ್ರೋತ್ಸವ ನಡೆಸುವ ಕುರಿತು ಸಮಗ್ರ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದರು.
Vijaya Karnataka Web kukke subramanya


ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್‌-19 ಗಮನದಲ್ಲಿಟ್ಟುಕೊಂಡು, ಅದರ ಮುಂಜಾಗ್ರತಾ ನಿಯಮ ಪಾಲಿಸಿಕೊಂಡು ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ನಡೆಸುವ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ, ಸಂಬಂಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಾರಾಂತ್ಯ ಸಭೆ ನಡೆಯಲಿದೆ. ಎಲ್ಲ ಸಾಧಕ, ಬಾಧಕಗಳನ್ನು ಗಮನದಲ್ಲಿಟ್ಟುಕೊಂಡು ಚಂಪಾ ಷಷ್ಠಿ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕುಕ್ಕೆ ಕ್ಷೇತ್ರಕ್ಕೆ ಅಭಿವೃದ್ಧಿ ಸಮಿತಿಯೋ? ಅಥವಾ ಪ್ರಾಧಿಕಾರ ರಚನೆಯೋ?!

ಶಾಸಕ ಎಸ್‌. ಅಂಗಾರ ನೇತೃತ್ವದ ಅಭಿವೃದ್ಧಿ ಸಮಿತಿ ರಚನೆಗೊಂಡಿದ್ದು, ಮುಂದೆ ದೇವಸ್ಥಾನದ ಅಭಿವೃದ್ಧಿ ಕೆಲಸಗಳಿಗೆ ಅವರ ನೇತೃತ್ವದಲ್ಲಿ ಹಾಗೂ ಆಡಳಿತ ವಿಚಾರದಲ್ಲಿ ಮುಂದುವರಿಯಲು ಸಮಿತಿಗೆ ಅಧಿಕಾರ ನೀಡಲಾಗಿದೆ. ಆಡಳಿತಾಧಿಕಾರಿ ಹಾಗೂ ಕಾರ್ಯನಿರ್ವಹಣಾಧಿಕಾರಿಗಳು ಎಂದಿನಂತೆ ತಮ್ಮ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ ಎಂದರು.
ನೂರು ಕೋಟಿ ರೂ. ಸಮೀಪಿಸಿದ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವಾರ್ಷಿಕ ಆದಾಯ

ಕಸ್ತೂರಿರಂಗನ್‌ ವರದಿಯ ಸಾಧಕ, ಬಾಧಕಗಳ ಚರ್ಚೆ ನಡೆಯುತ್ತಿದೆ. ಈ ಭಾಗದ ಜನತೆಗೆ ಕಸ್ತೂರಿರಂಗನ್‌ ವರದಿಯಿಂದ ತೊಂದರೆಯಾಗದಂತೆ ಸರಕಾರ ನೋಡಿಕೊಳ್ಳುತ್ತದೆ ಎಂದು ಸಚಿವರು ತಿಳಿಸಿದರು.
ಕರಾವಳಿ ಟೆಂಪಲ್‌ ಟೂರಿಸಂಗೆ ಉತ್ತೇಜನ; ಸೋಷಿಯಲ್ ಮೀಡಿಯಾ ಮೂಲಕ ದೇಶ, ವಿದೇಶಗಳಿಗೆ ಮಾಹಿತಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ