ಆ್ಯಪ್ನಗರ

ಶೀಘ್ರ ಚೆನ್ನೈ ತಂಡ ವರದಿ ಸಲ್ಲಿಕೆ: ಡೀಸಿ

ಮಂಗಳೂರು: ಪಚ್ಚನಾಡಿ ಘನತ್ಯಾಜ್ಯ ಕುಸಿತವಾದ ಸ್ಥಳದಿಂದ ತ್ಯಾಜ್ಯ ವಿಲೇವಾರಿ ಬಗ್ಗೆ ಅಧ್ಯಯನ ನಡೆಸಲು ಚೆನ್ನೈಯಿಂದ ತಜ್ಞರ ತಂಡ ಆಗಮಿಸಿದ್ದು, ಶೀಘ್ರದಲ್ಲೇ ವರದಿ ಸಲ್ಲಿಕೆ ಮಾಡಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ತಿಳಿಸಿದ್ದಾರೆ.

Vijaya Karnataka 17 Aug 2019, 5:00 am
ಮಂಗಳೂರು: ಪಚ್ಚನಾಡಿ ಘನತ್ಯಾಜ್ಯ ಕುಸಿತವಾದ ಸ್ಥಳದಿಂದ ತ್ಯಾಜ್ಯ ವಿಲೇವಾರಿ ಬಗ್ಗೆ ಅಧ್ಯಯನ ನಡೆಸಲು ಚೆನ್ನೈಯಿಂದ ತಜ್ಞರ ತಂಡ ಆಗಮಿಸಿದ್ದು, ಶೀಘ್ರದಲ್ಲೇ ವರದಿ ಸಲ್ಲಿಕೆ ಮಾಡಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ತಿಳಿಸಿದ್ದಾರೆ.
Vijaya Karnataka Web chennai special team report
ಶೀಘ್ರ ಚೆನ್ನೈ ತಂಡ ವರದಿ ಸಲ್ಲಿಕೆ: ಡೀಸಿ


ವಿಜಯ ಕರ್ನಾಟಕ ಜತೆ ಮಾತನಾಡಿದ ಅವರು, ತಜ್ಞರ ತಂಡ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದು, ಪರಿಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿದೆ. ಈ ವರದಿ ಆಧಾರದಲ್ಲಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು.

ಪರಿಸರ, ಎನ್‌ಐಟಿಕೆ ತಂಡ: ಜಿಲ್ಲಾಡಳಿತದ ಸೂಚನೆ ಮೇರೆಗೆ ಬೆಂಗಳೂರಿನಿಂದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ತಜ್ಞರು ಹಾಗೂ ಎನ್‌ಐಟಿಕೆಯ ತಜ್ಞರು ಭೇಟಿ ನೀಡಿ ಅಧ್ಯಯನ ನಡೆಸಿದ್ದಾರೆ. ಗುರುವಾರ ತಮಿಳುನಾಡಿನಿಂದ ತಜ್ಞರು ಆಗಮಿಸಿ ಅಧ್ಯಯನ ನಡೆಸಿದ್ದರು. ತಜ್ಞರು ನಡೆಸಿದ ಅಧ್ಯಯನ ವರದಿಯನ್ನು ಶೀಘ್ರ ಜಿಲ್ಲಾಧಿಕಾರಿಗೆ ಸಲ್ಲಿಸಲಿದ್ದಾರೆ. ಮಳೆ ಇಳಿಮುಖವಾದ ಕಾರಣ ಡಂಪಿಂಗ್‌ ಯಾರ್ಡ್‌ನಿಂದ ಹರಿದು ಬರುತ್ತಿದ್ದ ಕೊಳಚೆ ನೀರು ಶುಕ್ರವಾರ ತಗ್ಗಿದೆ. ತ್ಯಾಜ್ಯ ರಾಶಿ ಇನ್ನಷ್ಟು ಮುಂದೆ ಸರಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಗದ್ದೆಯಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಮನಪಾ ನಿರ್ಧರಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ