ಆ್ಯಪ್ನಗರ

ಕಾಫಿ ಡೇ ಸಿದ್ದಾರ್ಥ ಸಾವು: ತನಿಖೆ ಮುಂದುವರಿಕೆ

ಸಿದ್ದಾರ್ಥ ಅವರದ್ದು ಆತ್ಮಹತ್ಯೆ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಹೇಳಿದೆ.

Vijaya Karnataka 27 Aug 2019, 11:31 am
ಮಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಸಾವಿನ ಕುರಿತಂತೆ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್‌ಎಸ್‌ಎಲ್‌) ವರದಿಯಲ್ಲಿ ಆತ್ಮಹತ್ಯೆ ಎಂದು ಉಲ್ಲೇಖಿಸಲಾಗಿದ್ದು ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
Vijaya Karnataka Web Siddartha


ಸಿದ್ದಾಥ್‌ರ್‍ ಪತ್ರಕ್ಕೆ ಹಾಕಿದ ಸಹಿಯ ಬಗ್ಗೆ ಕೆಲವೊಂದು ಗೊಂದಲವಿದ್ದು, ಈ ಬಗ್ಗೆ ಪರೀಕ್ಷಾ ವರದಿ ಕೂಡ ತನಿಖಾಧಿಕಾರಿಗಳ ಕೈಸೇರಿದೆ. ಇದರಿಂದಾಗಿ ಈಗ ಸಿದ್ಧಾರ್ಥ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿದ್ಧಾರ್ಥನಿಗೆ ಅವರ ಕುಟುಂಬದ ಒಡನಾಟ, ಸಿದ್ಧಾಥ್‌ರ್‍ನ ವಹಿವಾಟಿನ ವಿವರವನ್ನು ತನಿಖಾ ತಂಡ ಸಂಗ್ರಹಿಸಲಿದೆ. ಸಿದ್ಧಾರ್ಥ ಹೊಂದಿದ್ದ ಸಾಲ, ಶೇರುಗಳ ವಹಿವಾಟು, ಬ್ಯಾಂಕ್‌ ಖಾತೆಗಳ ವಿವರ, ಆರ್ಥಿಕ ಸಲಹೆಗಾರರ ಸಲಹೆ, ಅಲ್ಲದೆ ಇತರೆ ವ್ಯವಹಾರಗಳ ಬಗ್ಗೆ ವಿಸ್ತೃತ ತನಿಖೆ ನಡೆಸಲಿದೆ ಎಂದು ತಿಳಿದುಬಂದಿದೆ.

ಕಾಫಿ ಡೇ ಸಿದ್ಧಾರ್ಥ ಸಾವಿನ ಗೊಂದಲಕ್ಕೆ ಕೊನೆಗೂ ತೆರೆ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ