ಆ್ಯಪ್ನಗರ

ಪರಿಹಾರಕ್ಕಾಗಿ ಕೇಂದ್ರಕ್ಕೆ ಸಮಗ್ರ ಪ್ರಸ್ತಾವನೆ: ಸಿಎಂ

ಪ್ರವಾಹಕ್ಕೆ ಸಂಬಂಧಿಸಿದಂತೆ ಪರಿಹಾರ ಪಡೆದುಕೊಳ್ಳಲು ಕೇಂದ್ರಕ್ಕೆ ವಿವರ ಪ್ರಸ್ತಾವನೆ ಸಲ್ಲಿಸುವ ಮಾತುಗಳನ್ನಾಡಿದ್ದಾರೆ ಸಿಎಂ.

Vijaya Karnataka Web 12 Aug 2019, 1:26 pm
ಮಂಗಳೂರು: ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಅಂದಾಜು 40ಸಾವಿರ ಕೋಟಿ ನಷ್ಟವಾಗಿದ್ದು, ಕೇಂದ್ರದಿಂದ ಹೆಚ್ಚಿನ ಪರಿಹಾರ ಪಡೆದುಕೊಳ್ಳುವ ನಿಟ್ಟಿನಲ್ಲಿ ವಿವರ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
Vijaya Karnataka Web BSY New


ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಹಿನ್ನೆಲೆಯಲ್ಲಿ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭ ಮಾಧ್ಯಮ ಜತೆ ಮಾತನಾಡಿ ಈ ವಿಷಯ ತಿಳಿಸಿದರು.
ರಾಜ್ಯ ಈತನಕ ಕಂಡರಿಯದ ಪ್ರವಾಹಕ್ಕೆ ತುತ್ತಾಗಿದ್ದು, ಸುಮಾರು 30ರಿಂದ 40ಸಾವಿರ ಕೋಟಿ ರೂ. ನಷ್ಟವುಂಟಾಗಿದೆ. ಮೊದಲ ಹಂತದಲ್ಲಿ 3ಸಾವಿರ ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಹೆಚ್ಚಿನ ಪರಿಹಾರಕ್ಕೆ ಪ್ರವಾಹದಿಂದಾದ ನಷ್ಟದ ಸಮಗ್ರ ಪ್ರಸ್ತಾವನೆ ಕಳುಹಿಸಲಾಗುವುದು ಎಂದರು.

ಮಹಾಮಳೆ, ನೆರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 432 ಮನೆಗಳು ಹಾನಿಯಾದ ಬಗ್ಗೆ ಮಾಹಿತಿ ಸಿಕ್ಕಿದೆ. 5 ಕಾಳಜಿ ಕೇಂದ್ರದಲ್ಲಿ 370ಮಂದಿ ವಾಸಿಸುತ್ತಿದ್ದು ಅವರ ಪರಿಹಾರ ಸಾಮಗ್ರಿ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೆಲಸ ಮಾಡುತ್ತಿದೆ. ಜಿಲ್ಲಾ ಪ್ರವಾಸದಲ್ಲಿ ಬಂಟ್ವಾಳ, ಬೆಳ್ತಂಗಡಿ, ಧರ್ಮಸ್ಥಳಕ್ಕೆ ತೆರಳಿ ಪ್ರವಾಹ ಪೀಡಿತ ಸ್ಥಳಗಳ ವೀಕ್ಷಣೆ ಮಾಡಲಿದ್ದೇನೆ ಎಂದರು.
ಆ.16ರ ಬಳಿಕ ದಿಲ್ಲಿಗೆ: ಸಚಿವ ಸಂಪುಟ ವಿಚಾರದಲ್ಲಿ ಆ.16ರ ಬಳಿಕ ದಿಲ್ಲಿಗೆ ತೆರಳಿ ಮಾತುಕತೆ ಹಿರಿಯರ ಜತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ಮುಖ್ಯಮಂತ್ರಿಗಳ ಜತೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಸಂಜೀವ ಮಠಂದೂರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ