ಆ್ಯಪ್ನಗರ

ಬಿಜೆಪಿ ಕಾರ‍್ಯಕರ್ತರು ನನ್ನೊಂದಿಗಿದ್ದಾರೆ: ಮಿಥುನ್‌ ರೈ

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಹೇಳಿಕೆ

Vijaya Karnataka Web 5 Apr 2019, 5:56 pm
ಬಂಟ್ವಾಳ: ಬಿಜೆಪಿ ಪಕ್ಷ ದ ಕೆಲ ಕಾರ್ಯಕರ್ತರೂ ನಮ್ಮೊಂದಿಗೆ ಮತಯಾಚನೆ ಮಾಡುತ್ತಿದ್ದಾರೆ. ಕಲ್ಲಡ್ಕ ಸಹಿತ ಬಂಟ್ವಾಳ ವಿಧಾನಸಭೆ ಕ್ಷೇತ್ರದಲ್ಲಿ ಮತಯಾಚನೆ ಸಂದರ್ಭ ಉತ್ತಮ ಪ್ರತಿಕ್ರಿಯೆ ಲಭಿಸಿದೆ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಹೇಳಿದ್ದಾರೆ.
Vijaya Karnataka Web Mithun


ದ.ಕ. ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಲಡ್ಕದಲ್ಲಿ ಗುರುವಾರ ಮತಯಾಚನೆ ಹಿನ್ನೆಲೆಯಲ್ಲಿ ಪಾದಯಾತ್ರೆ ನಡೆಸುತ್ತಿದ್ದ ಸಂದರ್ಭ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಚಿವ ಬಿ. ರಮಾನಾಥ ರೈ, ಜಿಪಂ ಸದಸ್ಯ ಚಂದ್ರಪ್ರಕಾಶ್‌ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುದೀಪ್‌ ಕುಮಾರ್‌ ಶೆಟ್ಟಿ, ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಬಿ ಕುಂದರ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ಪ್ರಶಾಂತ್‌ ಕುಲಾಲ್‌, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಪ್ರಮುಖರಾದ ಸಂಜೀವ ಪೂಜಾರಿ, ಅಬ್ಬಾಸ್‌ ಆಲಿ ಮತ್ತಿತರರು ಮಿಥುನ್‌ ರೈ ಅವರೊಂದಿಗೆ ಹೆಜ್ಜೆ ಹಾಕಿದರು.

ಇದಕ್ಕೂ ಮುನ್ನ ಬಂಟ್ವಾಳ ಕ್ಷೇತ್ರದ ಹಲವು ದೇವಸ್ಥಾನ, ಪ್ರಾರ್ಥನಾ ಮಂದಿರಗಳಿಗೆ ಮಿಥುನ್‌ ರೈ ಭೇಟಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ