ಆ್ಯಪ್ನಗರ

ಬಂಟ್ವಾಳದಲ್ಲಿ ಕೊರೊನಾಗೆ ಮಹಿಳೆ ಬಲಿ: ಇಬ್ಬರ ಮೇಲೆ ಪೊಲೀಸರ ಕೇಸ್‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಮೃತಪಟ್ಟ ಮಹಿಳೆಯ ಗುರುತು ಪತ್ತೆ ಹಚ್ಚಿದ ಆರೋಪದಡಿ ಫೇಸ್‌ಬುಕ್‌ ಬಳಕೆದಾರರೊಬ್ಬರ ಮೇಲೆ ದೂರು ನೀಡಲಾಗಿದೆ. ಇನ್ನು, ಮಹಿಳೆ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಿದ ಆರೋಪದಡಿ ಖಾಸಗಿ ವೈದ್ಯರೊಬ್ಬರ ಮೇಲೆ ದೂರು ದಾಕಲಾಗಿದೆ.

TNN 20 Apr 2020, 10:36 pm
ಮಂಗಳೂರು: ಕೊರೊನಾ ವೈರಸ್‌ ಸೋಂಕಿನಿಂದ ಬಂಟ್ವಾಳದ ಮಹಿಳೆಯೊಬ್ಬರು ಭಾನುವಾರ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ ಖಾಸಗಿ ವೈದ್ಯರೊಬ್ಬರ ಮೇಲೆ ಹಾಗೂ ಮಹಿಳೆಯ ಭಾವಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ನೆಟ್ಟಿಗರೊಬ್ಬರ ಮೇಲೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
Vijaya Karnataka Web wenlock hospital toi


ವೈದ್ಯರ ವಿರುದ್ಧ ಐಪಿಸಿ ಸೆಕ್ಷನ್‌ 269 ಹಾಗೂ 270ರಡಿ ಕೇಸ್‌ ದಾಖಲಿಸಿದ್ದು, ಇನ್ನು, ಮಹಿಳೆಯ ಗುರುತು ಬಹಿರಂಗಪಡಿಸಿದ ನೆಟ್ಟಿಗರೊಬ್ಬರ ವಿರುದ್ಧವೂ ದೂರು ಇದ್ದು, ಕೇಸ್‌ ದಾಖಲಿಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್‌ ವಿಜಯ ಕರ್ನಾಟಕ ಸೋದರ ಪತ್ರಿಕೆ ಟೈಮ್ಸ್ ಆಫ್‌ ಇಂಡಿಯಾಗೆ ತಿಳಿಸಿದ್ದಾರೆ.

ಮೃತಪಟ್ಟ ಮಹಿಳೆಗೆ ಕೋವಿಡ್‌ - 19ನ ಲಕ್ಷಣಗಳು ಕಾಣಿಸಿಕೊಂಡಿದ್ದರೂ ಖಾಸಗಿ ವೈದ್ಯ ಆಕೆಗೆ ಕಳೆದ 4 - 5 ದಿನಗಳಿಂದ ತಾನೇ ಚಿಕಿತ್ಸೆ ನೀಡುತ್ತಿದ್ದರು. ಈ ಬಗ್ಗೆ ಸರಕಾರಿ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿಯನ್ನೇ ನೀಡಿಲ್ಲ. ಶನಿವಾರ ಮಹಿಳೆ ಗಂಭೀರವಾದ ಬಳಿಕ ಆಕೆಯನ್ನು ಸರಕಾರಿ ಆಸ್ಪತ್ರೆಯಾದ ವೆನ್ಲಾಕ್‌ಗೆ ಕರೆತರಲಾಗಿದ್ದು, ಭಾನುವಾರ ಕೊರೊನಾ ಸೋಂಕಿತೆ ಮೃತಪಟ್ಟಿದ್ದರು. ನಂತರ ಕೊರೊನಾ ಸೋಂಕು ಧೃಡಪಟ್ಟಿತ್ತು. ಈ ಹಿನ್ನೆಲೆ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿಯ ದೂರಿನ ಮೇರೆಗೆ ಕೇಸ್‌ ದಾಖಲಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ತಿಳಿಸಿದರು.

ಕೊರೊನಾಗೆ ಕರಾವಳಿಯಲ್ಲಿ ಮೊದಲ ಬಲಿ: ವರದಿ ಬರುವ ಮುನ್ನವೇ ಮಹಿಳೆ ಸಾವು

ಇನ್ನೊಂದೆಡೆ, ವಿಲಿಯಮ್‌ ಪಿಂಟೋ ಎಂಬಾತ ಫೇಸ್‌ಬುಕ್‌ನಲ್ಲಿ ಮೃತ ಮಹಿಳೆಯ ಗುರುತು ಬಹಿರಂಗಪಡಿಸಿದ ಆರೋಪದಡಿ ಅವರ ವಿರುದ್ದ ಪುತ್ರ ದೂರು ನೀಡಿದ್ದು, ಕೇಸ್‌ ದಾಖಲಿಸಿಕೊಳ್ಳಲಾಗುತ್ತಿದೆ ಎಂದೂ ದಕ್ಷಿಣ ಕನ್ನಡ ಎಸ್‌ಪಿ ಮಾಹಿತಿ ನೀಡಿದ್ದಾರೆ.

ಲಾಕ್‌ಡೌನ್‌ ಮಧ್ಯೆಯೂ ಕುವೈಟ್‌ನಿಂದ ಹುಟ್ಟೂರಿಗೆ ರವಾನೆಯಾದ ಮೃತದೇಹ

ಕೊರೊನಾ ವೈರಸ್‌ ಸೋಂಕಿನಿಂದ ಬಂಟ್ವಾಳದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಈ ಮಹಿಳೆಯ ಭಾವಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹರಿಯಬಿಡುತ್ತಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್‌ ಭಾನುವಾರವೇ ಎಚ್ಚರಿಕೆ ನೀಡಿದ್ದರು.

ಗುಜರಾತ್‌-ಮಹಾರಾಷ್ಟ್ರ ಗಡಿಯಲ್ಲಿ ಪುತ್ತೂರು ಯುವಕರು ಲಾಕ್‌, 21 ದಿನಗಳಿಂದ ಕಾರಲ್ಲೇ ವಾಸ!

ಈ ರೀತಿ ಭಾವಚಿತ್ರವನ್ನು ಜಾಲತಾಣಗಳಲ್ಲಿ ಹರಿಯಬಿಡುವುದು ಕಾನೂನಿನಡಿ ಅಪರಾಧ. ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ. ಈಗಾಗಲೇ ಇಲಾಖೆಯು ಮಹಿಳೆಯ ಭಾವಚಿತ್ರ ಹರಿಯ ಬಿಡುತ್ತಿರುವವರ ಮಾಹಿತಿ ಕಲೆ ಹಾಕುತ್ತಿದ್ದು, ಸದ್ಯ ಅಂಥವರನ್ನು ಕಾನೂನಿನಡಿ ಒಳಪಡಿಸುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಆದ್ದರಿಂದ ಕೂಡಲೇ ಮಹಿಳೆಯ ಭಾವಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡುವುದನ್ನು ನಿಲ್ಲಿಸಿ. ಇಲ್ಲವಾದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಹೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ