ಆ್ಯಪ್ನಗರ

ಜುಲೈ 25ಕ್ಕೆ ನಾಗರ ಪಂಚಮಿ: ಕುಡುಪು ಅನಂತ ಪದ್ಮನಾಭ ದೇವಾಲಯ ಪ್ರವೇಶ ನಿರ್ಬಂಧ!

ನಾಡಿಗೆ ದೊಡ್ಡ ಹಬ್ಬವೆಂದೇ ಖ್ಯಾತಿ ಪಡೆದ ನಾಗರ ಪಂಚಮಿ ಜು.25ರಂದು ನಡೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಜು.25ರಂದು ಭಕ್ತಾದಿಗಳ ಭೇಟಿಯನ್ನು ನಿರ್ಬಂಧಿಸಲಾಗಿದೆ.

Vijaya Karnataka Web 21 Jul 2020, 6:10 pm
ಮಂಗಳೂರು: ನಾಡಿಗೆ ದೊಡ್ಡ ಹಬ್ಬವೆಂದೇ ಖ್ಯಾತಿ ಪಡೆದ ನಾಗರ ಪಂಚಮಿ ಜು.25ರಂದು ನಡೆಯಲಿದ್ದು, ಕೊರೊನಾ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಜು.25ರಂದು ನಡೆಯಲಿರುವ ನಾಗರಪಂಚಮಿ ದಿನದಂದು ಭಕ್ತಾದಿಗಳಿಗೆ ಶ್ರೀಕ್ಷೇತ್ರಕ್ಕೆ ಭೇಟಿಯನ್ನು ನಿರ್ಬಂಧಿಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
Vijaya Karnataka Web kudupu anantha padmanabha temple


ಜಿಲ್ಲಾಡಳಿತ ಈ ಬಾರಿ ಸಾರ್ವಜನಿಕವಾಗಿ ನಾಗರಪಂಚಮಿ ಆಚರಿಸುವಂತಿಲ್ಲಎಂದು ಪ್ರಕಟಣೆ ಹೊರಡಿಸಿದ್ದು, ದೇವಳದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದು ಕಷ್ಟವಾಗುವುದರಿಂದ ನಿರ್ಬಂಧ ವಿಧಿಸಲಾಗಿದೆ. ಈ ಸಂದರ್ಭ ದೇವರ ದರ್ಶನಕ್ಕೆ ಅವಕಾಶವಿಲ್ಲ, ಯಾವುದೇ ಸೇವೆಗಳು, ಸೇವಾಪ್ರಸಾದ ವಿತರಣೆ, ತೀರ್ಥ ಪ್ರಸಾದ ಮತ್ತು ಅನ್ನ ಸಂತರ್ಪಣೆಗಳು ಇರುವುದಿಲ್ಲ. ಹರಕೆ ಒಪ್ಪಿಸುವುದು, ಹಣ್ಣು ಕಾಯಿ, ಹಿಂಗಾರ, ಕೇದಗೆ ಪುಷ್ಪ ಸಮರ್ಪಣೆ, ಹಾಲು, ಸೀಯಾಳ, ಅಭಿಷೇಕದ ಪರಿಕರಗಳ ಸಮರ್ಪಣೆ ಇತ್ಯಾದಿಗಳಿಗೆ ಅವಕಾಶವಿಲ್ಲ. ನಾಗ ತಂಬಿಲ, ಪಂಚಾಮೃತ, ಆಶ್ಲೇಷ ಬಲಿ ಮೊದಲಾದ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಮಹತೋಭಾರ ಮಂಗಳಾದೇವಿ ದೇವಸ್ಥಾನ
ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಭಕ್ತರ ಪರವಾಗಿ ಜು.25ರಂದು ನಾಗರಪಂಚಮಿ ಮತ್ತು ಜು.31ರಂದು ವರಮಹಾಲಕ್ಷ್ಮೀ ಪೂಜೆ ನಡೆಯಲಿದೆ. ಆದರೆ ಕೋವಿಡ್‌ 19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇವಸ್ಥಾನದಲ್ಲಿ ಮುಂಜಾಗ್ರತೆ ಕ್ರಮವಾಗಿ ಆ ದಿನಗಳಲ್ಲಿ ಸರಕಾರದ ಆದೇಶದಂತೆ ಯಾವುದೇ ಸೇವೆಗಳು, ಸೇವಾ ಪ್ರಸಾದ ವಿತರಣೆ, ತೀರ್ಥಪ್ರಸಾದ, ಅನ್ನಸಂತರ್ಪಣೆ ಇರುವುದಿಲ್ಲ. ಇದು ಮಾತ್ರವಲ್ಲ ಹಾಲು, ಸೀಯಾಳ, ಹಣ್ಣುಕಾಯಿ ಮತ್ತಿತರ ಯಾವುದೇ ಪೂಜಾ ಸಾಮಗ್ರಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಯಾದಗಿರಿಯಲ್ಲಿ ಶೇ.90 ಸೋಂಕಿತರು ಗುಣ: ಇತರೆ ಜಿಲ್ಲೆಗಳ ಸಾಧನೆಯ ನೋಟ ಇಲ್ಲಿದೆ!

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ
ಜು.25ರಂದು ನಾಗರ ಪಂಚಮಿ ಹಾಗೂ ಜು.31ರಂದು ನಡೆಯುವ ವರಮಹಾಲಕ್ಷ್ಮೀ ವ್ರತ ಪೂಜೆಯನ್ನು ಕುದ್ರೋಳಿ ಕ್ಷೇತ್ರದಲ್ಲಿ ಭಕ್ತರ ಪರವಾಗಿ ಧಾರ್ಮಿಕ ವಿಧಿವಿಧಾನ ಪ್ರಕಾರ ಆಚರಿಸಲಾಗುವುದು. ಆದರೆ ಕೋವಿಡ್‌ ಕಾರಣದಿಮದಾಗಿ ಸರಕಾರದ ಆದೇಶ ಮೇರೆಗೆ ಸಾರ್ವಜನಿಕರಿಗೆ ಈ ಪೂಜೆಯಲ್ಲಿ ಭಾಗವಹಿಸಲು ನಿರ್ಬಂಧಿಸಲಾಗಿದೆ ಎಂದು ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್‌.ಎಸ್‌. ಸಾಯಿರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ

ಶ್ರೀಮದ್‌ ಅನಂತೇಶ್ವರ ದೇವಸ್ಥಾನ
ಮಂಜೇಶ್ವರ ಶ್ರೀಮದ್‌ ಅನಂತೇಶ್ವರ ದೇವಸ್ಥಾನದಲ್ಲಿ ಜು.25ರಂದು ನಾಗರ ಪಂಚಮಿ ನಡೆಯಲಿದ್ದು, ಕೋವಿಡ್‌ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಭಕ್ತಾದಿಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ದಿನದಂದು ಯಾವುದೇ ಭಕ್ತಾಭಿಮಾನಿಗಳು ದೇವಾಲಯಕ್ಕೆ ಭೇಟಿ ನೀಡದೆ ಸಹಕರಿಸಬೇಕಾಗಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

ನಾಗರಪಂಚಮಿಯಂದು ದೇವಾಲಯದಲ್ಲಿ ಯಾವುದೇ ಸೇವೆಗಳು, ಸೇವಾ ಪ್ರಸಾದ ವಿತರಣೆ, ತೀರ್ಥಪ್ರಸಾದ ಮತ್ತು ಅನ್ನಸಂತರ್ಪಣೆಗಳು ಇರುವುದಿಲ್ಲ. ದೇವರಿಗೆ ಹಾಲು, ಸೀಯಾಳ, ಹಣ್ಣುಕಾಯಿ ಮತ್ತಿತರ ಯಾವುದೇ ಪೂಜಾ ಸಾಮಗ್ರಿಗಳನ್ನು ಸ್ವೀಕರಿಸಲಾಗುವುದಿಲ್ಲ. ಮುಂದಿನ ದಿನಗಳಲ್ಲಿ ಅನುಕೂಲಕರ ಪರಿಸ್ಥಿತಿ ಉಂಟಾದಾಗ ಭಕ್ತಾದಿಗಳಿಗೆ ಸೇವೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ