ಆ್ಯಪ್ನಗರ

ಪಾಲಿಕೆಯಲ್ಲಿಭ್ರಷ್ಟಾಚಾರ ಮುಕ್ತ ಆಡಳಿತ ಬಿಜೆಪಿ ಗುರಿ: ಶಾಸಕ ಕಾಮತ್‌

ಮಂಗಳೂರು ಮಹಾನಗರ ಪಾಲಿಕೆಯ ಸಮಗ್ರ ಅಭಿವೃದ್ಧಿ ಜತೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದು ಬಿಜೆಪಿಯ ಸಂಕಲ್ಪವಾಗಿದೆ. ಈ ನಿಟ್ಟಿನಲ್ಲಿಇ-ಆಡಳಿತಕ್ಕೆ ಆದ್ಯತೆ ನೀಡಿ ಕೇಂದ್ರೀಕೃತ ಆಡಳಿತ ವ್ಯವಸ್ಥೆಯ ವಿಕೇಂದ್ರೀಕರಣಕ್ಕೆ ಪ್ರಯತ್ನಿಸಲಾಗುವುದು. ಆನ್‌ಲೈನ್‌ ಮೂಲಕ ಬಿಲ್‌ ಪಾವತಿ, ಆನ್‌ಲೈನ್‌ ಮೂಲಕ ಸರ್ಟಿಫಿಕೇಶನ್‌ ಭ್ರಷ್ಟಾಚಾರ ತಡೆಯಲು ಪೂರಕವಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್‌ ತಿಳಿಸಿದ್ದಾರೆ.

Vijaya Karnataka 8 Nov 2019, 5:00 am
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸಮಗ್ರ ಅಭಿವೃದ್ಧಿ ಜತೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದು ಬಿಜೆಪಿಯ ಸಂಕಲ್ಪವಾಗಿದೆ. ಈ ನಿಟ್ಟಿನಲ್ಲಿಇ-ಆಡಳಿತಕ್ಕೆ ಆದ್ಯತೆ ನೀಡಿ ಕೇಂದ್ರೀಕೃತ ಆಡಳಿತ ವ್ಯವಸ್ಥೆಯ ವಿಕೇಂದ್ರೀಕರಣಕ್ಕೆ ಪ್ರಯತ್ನಿಸಲಾಗುವುದು. ಆನ್‌ಲೈನ್‌ ಮೂಲಕ ಬಿಲ್‌ ಪಾವತಿ, ಆನ್‌ಲೈನ್‌ ಮೂಲಕ ಸರ್ಟಿಫಿಕೇಶನ್‌ ಭ್ರಷ್ಟಾಚಾರ ತಡೆಯಲು ಪೂರಕವಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್‌ ತಿಳಿಸಿದ್ದಾರೆ.
Vijaya Karnataka Web corruption free government bjp target says vedavyas kamath
ಪಾಲಿಕೆಯಲ್ಲಿಭ್ರಷ್ಟಾಚಾರ ಮುಕ್ತ ಆಡಳಿತ ಬಿಜೆಪಿ ಗುರಿ: ಶಾಸಕ ಕಾಮತ್‌


ಮಹಾನಗರಪಾಲಿಕೆ ಈಗ ಭ್ರಷ್ಟಾಚಾರದ ಆಗರ ಎನ್ನುವ ಆರೋಪ ಸಾರ್ವತ್ರಿಕವಾಗಿದೆ. ಆಡಳಿತಾತ್ಮಕ ಸುಧಾರಣೆಯಿಂದ ಮಾತ್ರ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯ. ಏಕ ಗವಾಕ್ಷಿ ಯೋಜನೆ ಮತ್ತು ವಾರ್ಡ್‌ ಸಮಿತಿ ರಚನೆಯನ್ನು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿಘೋಷಿಸಿದ್ದು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದೇ ಬಿಜೆಪಿಯ ಮುಖ್ಯ ಉದ್ದೇಶ ಎಂದು ತಿಳಿಸಿದ್ದಾರೆ.

ಪಾಲಿಕೆಯಲ್ಲಿಈ ಹಿಂದೆ ಬಿಜೆಪಿ ಆಡಳಿತ ಇದ್ದ ಸಂದರ್ಭ ರಾಜ್ಯದಲ್ಲಿಬಿಜೆಪಿ ಸರಕಾರ ಇತ್ತು. ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ಕ್ಷೇತ್ರದಲ್ಲಿಬಿಜೆಪಿ ಶಾಸಕರಿದ್ದರು. ಹಾಗಾಗಿ ನಗರದಲ್ಲಿಅಭೂತಪೂರ್ವ ಅಭಿವೃದ್ದಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗಿತ್ತು. ಬಳಿಕ ಆಡಳಿತಕ್ಕೆ ಬಂದ ಕಾಂಗ್ರೆಸ್‌ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಿದ ಕಾರಣ ಪಾಲಿಕೆ ಭ್ರಷ್ಟಾಚಾರದ ಕೂಪವಾಯಿತು ಎಂದು ತಿಳಿಸಿದ್ದಾರೆ.

ವಿಶೇಷ ಅನುದಾನ: ಶಾಸಕನಾಗಿ ಆಯ್ಕೆಯಾದ ಸಂದರ್ಭ ಕರ್ನಾಟಕ ರಾಜ್ಯದಲ್ಲಿಮತ್ತು ಮಂಗಳೂರು ಮಹಾ ನಗರ ಪಾಲಿಕೆಯಲ್ಲಿಬಿಜೆಪಿ ಆಡಳಿತ ಇಲ್ಲದ ಕಾರಣ ನಿರೀಕ್ಷಿತ ಅಭಿವೃದ್ದಿ ಸಾಧ್ಯವಾಗಿರಲಿಲ್ಲ. ರಾಜ್ಯದಲ್ಲಿಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯ ಸರಕಾರ ಹಾಗೂ ವಿವಿಧ ಇಲಾಖೆಗಳ ಅನುದಾನ ತರಿಸುವಲ್ಲಿಯಶಸ್ವಿಯಾಗಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಜೆಪಿ ಸರಕಾರ ರಚನೆಯಾದ ಈ ನಾಲ್ಕು ತಿಂಗಳಲ್ಲಿ100 ಕೋಟಿ ರೂ. ಅನುದಾನವನ್ನು ವಿವಿಧ ಕಾಮಗಾರಿಗಳಿಗೆ ಒದಗಿಸಿದ್ದಾರೆ ಎಂದು ಅವರು ತಿಳಿಸಿದ್ದಾರæ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ