ಆ್ಯಪ್ನಗರ

ಉಪ್ಪಿನಂಗಡಿ: ನೇತ್ರಾವತಿ, ಕುಮಾರಧಾರಾ ಸಂಗಮಕ್ಕೆ ಕ್ಷಣಗಣನೆ

ನೇತ್ರಾವತಿ- ಕುಮಾರಧಾರ ಪವಿತ್ರ ಸಂಗಮವನ್ನು ಕಣ್ತುಂಬಿಸಿಕೊಳ್ಳಲು ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.

Vijaya Karnataka Web 9 Aug 2019, 11:57 am
ಉಪ್ಪಿನಂಗಡಿ: ಕುಮಾರಧಾರ ನೇತ್ರಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ನದಿ ಪಾತ್ರದ ಹಲವು ಪ್ರದೇಶಗಳು ಜಲಾವೃತಗೊಂಡಿದೆ.
Vijaya Karnataka Web Sangama.


ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ಬಳಿ ನೇತ್ರಾವತಿ ನದಿಯು ಶ್ರೀ ಮಹಾಕಾಳಿ ದೇವಾಲಯವನ್ನು ದಾಟಿ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗದ ಆವರಣದತ್ತ ಬಂದಿದ್ದು ದೇವಾಲಯದ ಇನ್ನೊಂದು ಬದಿಯಿಂದ ಕುಮಾರಧಾರ ನದಿಯ ನೀರು ಬಂದರೆ ಎರಡು ನದಿಗಳು ದೇವಾಲಯದ ಮುಂಭಾಗ ಸಂಗಮವಾಗಲಿದೆ. ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ.

ಈ ಸಂಗಮದ ಈತಿಹಾಸಿಕ ಕ್ಷಣವನ್ನು ವೀಕ್ಷಿಸಲು ಜನರು ತಂಡೋಪತಂಡವಾಗಿ ದೇವಾಲಯದತ್ತ ಆಗಮಿಸುತ್ತಿದ್ದಾರೆ.

ನೆರೆಯ ಹಿನ್ನೆಲೆಯಲ್ಲಿ ಆಡಳಿತ ವರ್ಗ ಕಟ್ಟೆಚ್ಚರ ವಹಿಸಿದ್ದು ತಕ್ಷಣದ ರಕ್ಷಣಾ ಕಾರ್ಯಾಚರಣೆಗೆ ಸಿದ್ಧಗೊಂಡು ನಿಂತಿದೆ. ಬಜತ್ತೂರು ಗ್ರಾಮದ ವಳಾಲು ಸಮೀಪ ರಾಷ್ಟ್ರೀಯ ಹೆದ್ದಾರಿಗೆ ಬಂದ ನೇತ್ರಾವತಿ ನದಿ ನೀರಿನಿಂದ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ