ಆ್ಯಪ್ನಗರ

ಮಂಗಳೂರಿನ ಮೂಲ್ಕಿ ಏಳಿಂಜೆ ಬಳಿ ದಂಪತಿ ಹತ್ಯೆ: ಆರೋಪಿ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ಮಾಜಿ ಯೋಧ ಹಾಗೂ ಆತನ ಪತ್ನಿಯನ್ನು ಕೊಲೆ ಮಾಡಲಾಗಿದೆ. ನೆರೆ ಮನೆಯ ವ್ಯಕ್ತಿಯೇ ಈ ಕೃತ್ಯ ನಡೆಸಿರುವುದು ತಿಳಿದುಬಂದಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Vijaya Karnataka Web 29 Apr 2020, 2:57 pm
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಏಳಿಂಜೆ ಮುತ್ತಯ್ಯ ಕೆರೆ ಬಳಿ ಬುಧವಾರ ಬೆಳಗ್ಗೆ ದಂಪತಿಯನ್ನು ಮನೆಯಲ್ಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ವಿನ್ಸೆಂಟ್ ಡಿಸೋಜ (50) ಹಾಗೂ ಅವರು ಪತ್ನಿ ಹೆಲಿನ್ ಡಿಸೋಜ (45) ಕೊಲೆಯಾದವರು ಎಂದು ಪೊಲೀಸರು ತಿಳಿಸಿದ್ದಾರೆ.
Vijaya Karnataka Web 22


ಇನ್ನು, ಪ್ರಕರಣಕ್ಕೆ ಸಂಬಂಧಪಟ್ಟಂತೆ ನೆರೆಮನೆಯ ವ್ಯಕ್ತಿ ಈ ಕೃತ್ಯ ನಡೆಸಿರುವುದುನ್ನು ಪೊಲೀಸರು ಪತ್ತೆಹಚ್ಚಿದ್ದು, ಆರೋಪಿ ಅಲ್ಫಾನ್ಸೋ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿನ್ಸೆಂಟ್ ಡಿಸೋಜ ನಿವೃತ್ತ ಯೋಧನಾಗಿದ್ದು, ಪೂರ್ವ ದ್ವೇಷದಿಂದ ಈ ಕೊಲೆ ನಡೆಸಲಾಗಿದೆ ಎಂದು ಮಂಗಳೂರು ಕಮಿಷನರ್ ಡಾ. ಪಿ.ಎಸ್.ಹರ್ಷ ತಿಳಿಸಿದ್ದಾರೆ.

ಆರೋಪಿ ಹಾರೆ ಹಾಗೂ ಪಿಕಾಸಿ ಬಳಸಿ ಈ ಕೃತ್ಯ ಮಾಡಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಇವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲೆ ಪ್ರಕರಣ ಹಿನ್ನೆಲೆ ಮೂಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಮಂಗಳೂರು ಪೊಲೀಸ್ ಕಮಿಷನರ್ ಡಾ. ಪಿ.ಎಸ್.ಹರ್ಷ, ಎಸಿಪಿ ಬೆಳ್ಳಿಯಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನಲ್ಲೊಂದು ಅಮಾನವೀಯ ಘಟನೆ,ಕೊರೊನಾದಿಂದ ಮೃತಪಟ್ಟ ಮಹಿಳೆಯ ಶವ ಸಂಸ್ಕಾರಕ್ಕೆ ಅಡ್ಡಿ!

ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು


ಮಾತೃ ಸಂಸ್ಕೃತಿ ಕರಾವಳಿಯಲ್ಲಿ ಇಬ್ಬರು ತಾಯಂದಿರಿಗೆ ಗೌರವಯುತ ಅಂತಿಮ ಸಂಸ್ಕಾರವಿಲ್ಲದಂತಾಯ್ತು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ