ಆ್ಯಪ್ನಗರ

ಪುತ್ತೂರು ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ: ಆರೋಪಿಗಳಿಗೆ ಜಾಮೀನು ತಿರಸ್ಕಾರ

ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಗಾಣದಮೂಲೆ ನಿವಾಸಿ ಗುರುನಂದನ್‌(19), ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ನಿವಾಸಿಗಳಾದ ಪ್ರಜ್ವಲ್‌ (19), ಕಿಶನ್‌(19), ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಸುನಿಲ್‌(19), ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಪ್ರಖ್ಯಾತ್‌(19) ಎಂಬ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು

Vijaya Karnataka 13 Sep 2019, 7:34 am
ಪುತ್ತೂರು: ಕಾಲೇಜು ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಾರಿನಲ್ಲಿಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣದಲ್ಲಿಬಂಧಿತರಾಗಿದ್ದ ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾನ್ಯಾಯಾಲಯ ತಿರಸ್ಕರಿಸಿದೆ.
Vijaya Karnataka Web COURT


ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಗಾಣದಮೂಲೆ ನಿವಾಸಿ ಗುರುನಂದನ್‌(19), ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ನಿವಾಸಿಗಳಾದ ಪ್ರಜ್ವಲ್‌ (19), ಕಿಶನ್‌(19), ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಸುನಿಲ್‌(19), ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಪ್ರಖ್ಯಾತ್‌(19) ಎಂಬ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಪರಿಶೀಲಿಸಿದ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.

ಜುಲೈ 3ರಂದು ಇವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದರು. ಪುತ್ತೂರಿನ ಖಾಸಗಿ ಕಾಲೇಜಿನಲ್ಲಿಕಲಿಯುತ್ತಿದ್ದ ಈ ಐವರು ಕಳೆದ ಫೆಬ್ರವರಿ ತಿಂಗಳಲ್ಲಿತಮ್ಮದೇ ಕಾಲೇಜಿನ ವಿದ್ಯಾರ್ಥಿನಿಯನ್ನು ನಗರದ ಹೊರವಲಯದ ಕಟಾರ ಎಂಬಲ್ಲಿನ ನದಿ ತಟದ ನಿರ್ಜನ ಪ್ರದೇಶಕ್ಕೆ ಕರದೊಯ್ದು ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಈ ದುಷ್ಕೃತ್ಯವನ್ನು ಮೊಬೈಲ್‌ನಲ್ಲಿಚಿತ್ರೀಕರಿಸಿಕೊಂಡಿದ್ದಲ್ಲದೆ, ಅದನ್ನು ಜುಲೈ ಆರಂಭದಲ್ಲಿಸಾಮಾಜಿಕ ಜಾಲತಾಣದಲ್ಲಿಹರಿಯ ಬಿಟ್ಟಿದ್ದರು. ಇದು ವೈರಲ್‌ ಆಗುತ್ತಲೇ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರನ್ನು ಬಂಧಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ