ಆ್ಯಪ್ನಗರ

ನಿವಾರ್ ಚಂಡಮಾರುತ: ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯ ನೈಋುತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ನಿವಾರ್‌ ಚಂಡಮಾರುತವಾಗಿ ಪರಿವರ್ತನೆಗೊಂಡ ಹಿನ್ನೆಲೆಯಲ್ಲಿ ನ.25ರಿಂದ ಎರಡು ದಿನಗಳ ಕಾಲ ರಾಜ್ಯ ಸೇರಿದಂತೆ ಕರಾವಳಿಯ ಹಲವೆಡೆ ಭಾರೀ ಮಳೆಯಾಗಲಿದೆ.

Vijaya Karnataka Web 24 Nov 2020, 8:05 pm
ಮಂಗಳೂರು: ಬಂಗಾಳ ಕೊಲ್ಲಿಯ ನೈಋುತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ನಿವಾರ್‌ ಚಂಡಮಾರುತವಾಗಿ ಪರಿವರ್ತನೆಗೊಂಡ ಹಿನ್ನೆಲೆಯಲ್ಲಿ ನ.25ರಿಂದ ಎರಡು ದಿನಗಳ ಕಾಲ ರಾಜ್ಯ ಸೇರಿದಂತೆ ಕರಾವಳಿಯ ಹಲವೆಡೆ ಭಾರೀ ಮಳೆಯಾಗಲಿದೆ.
Vijaya Karnataka Web nivar


ತಮಿಳುನಾಡಿನಲ್ಲಿ ಉಂಟಾಗುವ ಚಂಡ ಮಾರುತದ ಪ್ರಭಾವ ಕರ್ನಾಟಕಕ್ಕೂ ತಟ್ಟಲಿದ್ದು, ಬೆಂಗಳೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿವಾರ್‌ ಚಂಡಮಾರುತ: ದಕ್ಷಿಣ ಭಾರತದಲ್ಲಿ ಅಬ್ಬರ, ಹಲವೆಡೆ ಭಾರಿ ಮಳೆ, ರೈಲು ರದ್ದು, ನಿಷೇಧಾಜ್ಞೆ ಜಾರಿ

ಚಂಡಮಾರುತ ಗಂಟೆಗೆ 150 ಕಿಲೋ ಮೀಟರ್‌ ವೇಗದಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಚಿತ್ರದಲ್ಲಿ ಸಂಪೂರ್ಣ ದಕ್ಷಿಣ ಭಾರತದ ಮೇಲೆ ಚಂಡುಮಾರುತದ ಪ್ರಭಾವ ಇರುವುದು ಕಂಡುಬಂದಿದೆ.

ನಿವಾರ್‌ ಚಂಡಮಾರುತ: ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ!

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗುತ್ತಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ