ಆ್ಯಪ್ನಗರ

ದಾರಿಯೇ ಇಲ್ಲದ ಊರು ದಕ್ಷಿಣ ಕನ್ನಡದ ಅರಿಯಡ್ಕ ಗ್ರಾಮ!

ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದಿದ್ರೂ ಹಲವು ಗ್ರಾಮಗಳು ಅಭಿವೃದ್ಧಿಯನ್ನೇ ಕಂಡಿಲ್ಲ. ಕನಿಷ್ಠ ಮೂಲಭೂತ ಸೌಲಭ್ಯವನ್ನೂ ಸಹ ಹಲವು ಗ್ರಾಮಗಳು ಹೊಂದಿರುವುದಿಲ್ಲ. ಇದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಈ ಗ್ರಾಮಕ್ಕೆ ದಾರಿಯೇ ಇಲ್ಲ!

Vijaya Karnataka 16 Sep 2019, 2:50 pm
ಕುಂಬ್ರ(ದ.ಕ): ಈ ಊರಿನಲ್ಲಿ ಅನಾರೋಗ್ಯಕ್ಕೀಡಾದರೆ ಅವರನ್ನು ಹೊತ್ತುಕೊಂಡೇ ಸಾಗಬೇಕು. ಏಕೆಂದರೆ ಇಲ್ಲಿರುವುದು ಕಾಲುದಾರಿ ಮಾತ್ರ. ಅದರಲ್ಲೂ ಸಾಗುವುದು ಅಪಾಯಕ್ಕೆ ಆಹ್ವಾನ ಕೊಟ್ಟಂತೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಶೇಕಮಲೆ ಸ್ಥಿತಿ.
Vijaya Karnataka Web roadless village in dakshina kannada


ಈ ಗ್ರಾಮದಲ್ಲಿ 20ಕ್ಕೂ ಹೆಚ್ಚು ದಲಿತ ಕುಟುಂಬಗಳು ವಾಸಿಸುತ್ತಿವೆ. ಭಾನುವಾರ ಬಿರ್ಕು ಎಂಬ ಮಹಿಳೆ ಅನಾರೋಗ್ಯಕ್ಕೀಡಾದಾಗ ಅವರನ್ನು ಅವರ ಅಳಿಯ ಸುಮಾರು ಅರ್ಧ ಕಿ.ಮೀ. ದೂರ ಹೊತ್ತುಕೊಂಡೇ ರಸ್ತೆ ಬದಿಯವರೆಗೂ ಬಂದು, ಅಲ್ಲಿಂದ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರು.

ಬೇಡಿಕೆ ಈಡೇರಲೇ ಇಲ್ಲ: ರಸ್ತೆ ನಿರ್ಮಿಸಿ ಎಂದು ಸ್ಥಳೀಯರು ಹಲವು ವರ್ಷಗಳಿಂದ ಜನಪ್ರತಿನಿಧಿಗಳನ್ನು ಅಂಗಲಾಚುತ್ತಲೇ ಇದ್ದಾರೆ. ಆದರೆ ಇಲ್ಲಿಯ ತನಕ ಅದು ಈಡೇರಿಲ್ಲ. ಇರುವ ಏಕೈಕ ಕಾಲು ದಾರಿ ಮಳೆಗೆ ಕುಸಿದಿದ್ದು, ಅದನ್ನು ತಾತ್ಕಾಲಿಕವಾಗಿ ಅಡಕೆ ಮರದ ತುಂಡಿನಿಂದ ದುರಸ್ತಿ ಮಾಡಲಾಗಿದೆ. ಕಾಲೊನಿಯ ಮಕ್ಕಳು ಹೊಳೆಯ ಬದಿಯ ಕಾಲು ದಾರಿಯಲ್ಲಿ ಅಪಾಯಕಾರಿ ನಡಿಗೆಯೊಂದಿಗೆ ಶಾಲೆಗೆ ತೆರಳುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ