ಆ್ಯಪ್ನಗರ

ಮೋದಿ ಆಡಳಿತದಲ್ಲಿ ಜಿಲ್ಲೆಗೆ 16,500 ಕೋಟಿ ಅನುದಾನ: ನಳಿನ್‌

ದೇಶದ ಜತೆಗೆ ಜಿಲ್ಲೆ ಅಭಿವೃದ್ಧಿಯಾಗಲು ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು. ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲಬೇಕಾಗಿದೆ ಎಂದು ದ.ಕ. ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಹೇಳಿದರು.

Vijaya Karnataka Web 11 Apr 2019, 6:04 pm
ಪುಂಜಾಲಕಟ್ಟೆ: ಅಭಿವೃದ್ಧಿ ಕಾರ‍್ಯಗಳಿಗಾಗಿ ದ.ಕ. ಜಿಲ್ಲೆಗೆ ಕಳೆದ ಐದು ವರ್ಷಗಳಲ್ಲಿ 16,500 ಕೋಟಿ.ರೂ. ಪ್ರಧಾನಿ ಮೋದಿಯವರು ನೀಡಿದ್ದರೆ, ಹಿಂದಿನ ಯುಪಿಎ ಸರಕಾರ ಕೇವಲ 3.50 ಸಾವಿರ ಕೋಟಿ ರೂ.ನ್ನು ಜಿಲ್ಲೆಗೆ ನೀಡಿದೆ. ದೇಶದ ಜತೆಗೆ ಜಿಲ್ಲೆ ಅಭಿವೃದ್ಧಿಯಾಗಲು ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು. ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲಬೇಕಾಗಿದೆ ಎಂದು ದ.ಕ. ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಹೇಳಿದರು.
Vijaya Karnataka Web Nalin


ಮಡಂತ್ಯಾರು ಪೇಟೆಯಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಬುಧವಾರ ಮಾತನಾಡಿದರು. ಜಿಲ್ಲೆಗೆ ಕೇಂದ್ರ ಸರಕಾರದ ಅನುದಾನದಿಂದ ಹಲವಾರು ಅಭಿವೃದ್ಧಿ ಕಾರ್ಯಗಳು ಆಗಿವೆ. ಬಿ.ಸಿ.ರೋಡ್‌ನಿಂದ ಪುಂಜಾಲಕಟ್ಟೆಯವರೆಗೆ ರಾಷ್ಟ್ರೀಯ ಹೆದ್ದಾರಿಯ ಕೆಲಸ ಆರಂಭವಾಗಿದ್ದು, ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಅಭಿವೃದ್ಧಿ ಕಾರ್ಯ ಮುಂದಿನ ಸೆಪ್ಟೆಂಬರ್‌ ನಲ್ಲಿ ಆರಂಭಗೊಳ್ಳಲಿದೆ ಎಂದರು. ದೇಶದ ಹಳ್ಳಿ, ಹಳ್ಳಿಗೂ ಅಡುಗೆ ಅನಿಲ, ವಿದ್ಯುತ್‌ ಸಂಪರ್ಕ, ಆಯುಷ್ಮಾನ್‌ ಭಾರತ ಆರೋಗ್ಯ ಸೌಲಭ್ಯದ ಮೂಲಕ ಜನತೆಗೆ ಸ್ವಾಭಿಮಾನದ ಬದುಕು ನೀಡಿದ್ದಾರೆ ಎಂದರು.

ಶಾಸಕ ಹರೀಶ್‌ ಪೂಂಜ ಮಾತನಾಡಿ, ಈ ಬಾರಿ ದ.ಕ. ಕ್ಷೇತ್ರದಲ್ಲಿ ನಳಿನ್‌ ಕುಮಾರ್‌ ಅವರು ಎರಡು ಲಕ್ಷ ಕ್ಕೂ ಅಧಿಕ ಮತಗಳ ಅಂತರದಿಂದ ಜಯ ಗಳಿಸಲಿದ್ದಾರೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ 50 ಸಾವಿರಕ್ಕೂ ಅಧಿಕ ಮತಗಳ ಲೀಡ್‌ ಪಡೆಯಲಿದೆ ಎಂದರು.

ವಕೀಲ ಸುಬ್ರಹ್ಮಣ್ಯ ಕುಮಾರ್‌ ಅಗರ್ತ ಮಾತನಾಡಿ, ಸುಮಾರು 60 ವರ್ಷಗಳ ಆಡಳಿತ ನಡೆಸಿದ ಒಂದು ಕುಟುಂಬವು ದೇಶವನ್ನು ಕೊಳ್ಳೆ ಹೊಡೆದಿದ್ದು, ಇದರಿಂದ ಬೇಸತ್ತ ದೇಶದ ನಾಗರಿಕರು 5 ವರ್ಷಗಳ ಹಿಂದೆ ಸಾಮಾನ್ಯ ವ್ಯಕ್ತಿ ಮೋದಿ ಅವರನ್ನು ಪ್ರಧಾನಿಯನ್ನಾಗಿಸಿದ್ದಾರೆ. ಅವರ ಸಾಧನೆಯ ಫಲವಾಗಿ ಅವರು ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ಧ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ