ಆ್ಯಪ್ನಗರ

ದರೋಡೆ ಪ್ರಕರಣದಲ್ಲಿ ಲಂಚ ಪಡೆದ ಆರೋಪ: ದ.ಕ. ಮೂಲದ ಇನ್‌ಸ್ಪೆಕ್ಟರ್‌ ಅಮಾನತು!

ದರೋಡೆಕೋರರಿಂದ ಆರು ಲಕ್ಷ ಲಂಚ ಪಡೆದ ಆರೋಪದ ಹಿನ್ನಲೆಯಲ್ಲಿ ಈ ಹಿಂದೆ ದ.ಕ. ಜಿಲ್ಲೆ ಭ್ರಷ್ಟಚಾರ ನಿಗ್ರಹ ದಳದ ಇನ್ಸ್ ಪೆಕ್ಟರ್ ಆಗಿದ್ದ ಯೋಗಿಶ್ ಕುಮಾರ್ ಅವರನ್ನು ಬೆಂಗಳೂರು ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಅಮಾನತುಗೊಳಿಸಿ ಆದೇಶ ಮಾಡಿದ್ದಾರೆ.

Vijaya Karnataka Web 14 Sep 2020, 8:20 am
ಮಂಗಳೂರು: ಲಂಚ ಆರೋಪದಡಿ ಬೆಂಗಳೂರಿನ ಎಸ್‌.ಜೆ. ಪಾರ್ಕ್ ಪೊಲೀಸ್‌ ಠಾಣೆಯ ವೃತ್ತ ನಿರೀಕ್ಷಕ, ದ.ಕ. ಮೂಲದ ಯೋಗೀಶ್‌ ಕುಮಾರ್‌ ಎಂಬವರನ್ನು ಬೆಂಗಳೂರು ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಅಮಾನತುಗೊಳಿಸಿ ಆದೇಶ ಮಾಡಿದ್ದಾರೆ.
Vijaya Karnataka Web corruption.
ಸಾಂದರ್ಭಿಕ ಚಿತ್ರ


ಭ್ರಷ್ಟಾಚಾರ ನಿಗ್ರಹ ದಳದ ಮಂಗಳೂರು ಘಟಕದಲ್ಲಿ ಹಲವು ವರ್ಷ ಇನ್‌ಸ್ಪೆಕ್ಟರ್‌ ಆಗಿದ್ದ ಯೋಗೀಶ್‌ ಕುಮಾರ್‌, ಅಡಕೆ ಉದ್ಯಮಿಯೊಬ್ಬರ ದರೋಡೆ ಪ್ರಕರಣದಲ್ಲಿ 6 ಲಕ್ಷ ರೂ. ಲಂಚ ಪಡೆದ ಆರೋಪ ಎದುರಿಸುತ್ತಿದ್ದರು. ಈ ಪ್ರಕರಣದ ಆರೋಪದಡಿ ಬೆಂಗಳೂರು ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಅಮಾನತು ಮಾಡಿ ಆದೇಶಿಸಿದ್ದಾರೆ.

ಲಂಚ ಆರೋಪ ಬಹಿರಂಗವಾಗುತ್ತಿದ್ದಂತೆ ಇನ್‌ಸ್ಪೆಕ್ಟರ್‌ ಯೋಗೀಶ್‌ ಕುಮಾರ್‌ ನಾಪತ್ತೆಯಾಗಿದ್ದು, ಯಾರ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಮೂಲತಃ ಮಡಿಕೇರಿಯವರಾದ ಯೋಗೀಶ್‌ ಕುಮಾರ್‌ ದಕ್ಷಿಣ ಕನ್ನಡ ಜಿಲ್ಲೆಯ ಬಂದರು, ಬೆಳ್ತಂಗಡಿ ಸೇರಿದಂತೆ ನಾನಾ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ