ಆ್ಯಪ್ನಗರ

ಮಂಗಳೂರಿಗೆ ಬಂದ ದಲಾಯಿ ಲಾಮಾ

ಮೂರು ದಿನಗಲ ಕಾಲ ಮಂಗಳೂರಿನಲ್ಲಿ ತಂಗುವ ಅವರು ಭಾನುವಾರ ಇಲ್ಲಿಂದ ನಿರ್ಗಮಿಸಲಿದ್ದಾರೆ.

Vijaya Karnataka Web 29 Aug 2019, 1:47 pm
ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಗುರುವಾರ ಮಂಗಳೂರಿಗೆ ಆಗಮಿಸಿದರು.
Vijaya Karnataka Web Dalai Lama


ಗುರುವಾರ ಮಧ್ಯಾಹ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ,ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.

ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕವೂ ಅವರನ್ನು ಸ್ವಾಗತಿಸಲಾಯಿತು‌.

ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆ ಯಲ್ಲಿ ಝೀರೋ ಟ್ರಾಫಿಕ್ ನಲ್ಲಿ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು‌.

ಮೂರು ದಿನಗಳ ಕಾಲ ಮಂಗಳೂರು ನಗರದಲ್ಲಿ ತಂಗಲಿರುವ ದಲಾಯಿಲಾಮ ಅವರು ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವರು. ಆ.31 ರಂದು ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ