ಆ್ಯಪ್ನಗರ

ಮತ್ತೊಂದು ವಾಯುಭಾರ ಕುಸಿತ: ಕರಾವಳಿ, ಕೊಡಗಿನಲ್ಲಿ ಮತ್ತೆ ಮಳೆ ಸಾಧ್ಯತೆ

ಕರಾವಳಿ ಮತ್ತು ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆ.25 ರಿಂದ ಆ.28ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹವಾಮಾನ ಇಲಾಖೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

Vijaya Karnataka Web 25 Aug 2018, 7:30 am
ಬೆಂಗಳೂರು: ಕರಾವಳಿ ಮತ್ತು ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆ.25 ರಿಂದ ಆ.28ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹವಾಮಾನ ಇಲಾಖೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಕೊಡಗು ಮತ್ತು ದಕ್ಷಿಣ ಕನ್ನಡದ ಹಲವೆಡೆ ಇತ್ತೀಚೆಗೆ ಭಾರಿ ಹಾನಿಯಾಗಿರುವುದರಿಂದ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
Vijaya Karnataka Web ವಾಯುಭಾರ ಕುಸಿತ
ವಾಯುಭಾರ ಕುಸಿತ


ದಕ್ಷಿಣ ಒಳನಾಡಿನಲ್ಲಿ ನೈಋುತ್ಯ ಮುಂಗಾರು ಇನ್ನೂ ಪ್ರಬಲವಾಗಿದ್ದು, ಆ.28 ರವರೆಗೂ ಅಲ್ಲಲ್ಲಿ ಭಾರಿ ಮಳೆ ಸುರಿಯಲಿದೆ. ಆಗಸ್ಟ್‌ ಮೊದಲ ವಾರಕ್ಕೆ ಹೋಲಿಸಿದರೆ ಈಗ ದಕ್ಷಿಣ ಒಳನಾಡಿನಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಮಳೆ ಸಂಪೂರ್ಣವಾಗಿ ನಿಂತಿಲ್ಲ.

ಮುಂಗಾರು ಇನ್ನೂ ಪ್ರಬಲವಾಗಿದ್ದು, ಅಲ್ಲಲ್ಲಿ ಮಳೆ ಸುರಿಯುತ್ತಿದೆ. ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇನ್ನೂ ಮಳೆಯಾಗುತ್ತಿದೆ. ಬೆಂಗಳೂರು, ಚಾಮರಾಜನಗರ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆ ಅಲ್ಲಲ್ಲಿ ಮಳೆ ಸುರಿದಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಸುರಿದಿದೆ.

ಶುಕ್ರವಾರದ ಮಳೆ

ಕ್ಯಾಸಲ್‌ ರಾಕ್‌ 90 ಮಿ.ಮೀ.

ಸುಬ್ರಹ್ಮಣ್ಯ 70 ಮಿ.ಮೀ.

ಕೋಟ 40 ಮಿ.ಮೀ.

ಮಾಣಿ, ಬೆಳ್ತಂಗಡಿ, ಕೊಲ್ಲೂರು, ಕುಂದಾಪುರ 30 ಮಿ.ಮೀ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ