ಆ್ಯಪ್ನಗರ

ಧರ್ಮಸ್ಥಳದ ಮರಿಯಾನೆಗೆ ಶಿವಾನಿ ಎಂದು ನಾಮಕರಣ

ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಆನೆ ಮರಿಗೆ ದೇವರ ಪ್ರಸಾದ ನೀಡಿ, ಗಂಟೆ ಕಟ್ಟುವ ಮೂಲಕ ನಾಮಕರಣ ನೆರವೇರಿಸಲಾಯಿತು. ಆನೆಯ ಮಾವುತ ಕೃಷ್ಣ ಅವರಿಗೆ ಸನ್ಮಾನ ಮಾಡಲಾಯಿತು.

Vijaya Karnataka Web 31 Aug 2020, 5:06 pm
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿದ್ದ ಲಕ್ಷ್ಮಿ ಎಂಬ ಆನೆಗೆ ಜನಿಸಿದ ಮರಿಯಾನೆಗೆ ಶಿವಾನಿ ಎಂದು ನಾಮಕರಣ ಮಾಡಲಾಗಿದೆ.
Vijaya Karnataka Web dharmasthala baby elephant named as shivani
ಧರ್ಮಸ್ಥಳದ ಮರಿಯಾನೆಗೆ ಶಿವಾನಿ ಎಂದು ನಾಮಕರಣ


ಕಳೆದ ಜುಲೈ 1 ರಂದು ದೇಗುಲದ ಆನೆ ಲಕ್ಷ್ಮಿ ಹೆಣ್ಣುಮರಿಗೆ ಜನ್ಮ ನೀಡಿತು. ಆ ಆನೆ ಮರಿಯ ನಾಮಕರಣ ಸೋಮವಾರ (ಆಗಸ್ಟ್‌ 31) ನಡೆಯಿತು.

ಧರ್ಮಸ್ಥಳದ ದೇಗುಲದಲ್ಲಿ ಈ ಮರಿಯಾನೆಗೆ ವಿಶೇಷ ಸೌಲಭ್ಯ ವ್ಯವಸ್ಥೆ ಮಾಡಲಾಗಿತ್ತು.


ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಆನೆ ಮರಿಗೆ ದೇವರ ಪ್ರಸಾದ ನೀಡಿ, ಗಂಟೆ ಕಟ್ಟುವ ಮೂಲಕ ನಾಮಕರಣ ನೆರವೇರಿಸಲಾಯಿತು.

ಇದೇ ಸಂದರ್ಭದಲ್ಲಿ ಆನೆಯ ಮಾವುತ ಕೃಷ್ಣ ಅವರಿಗೆ ಸನ್ಮಾನ ಮಾಡಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ