ಆ್ಯಪ್ನಗರ

ಸುಳ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ನಾಳೆವರೆಗೆ ಕಾಯುವಂತೆ ಅತೃಪ್ತ ಗುಂಪಿಗೆ ನಳಿನ್ ಸೂಚನೆ

ಸುಳ್ಯ ಮಂಡಲ ಬಿಜೆಪಿಯಲ್ಲಿ ಭಿನ್ನಮತ ಮತ್ತು ಗುಂಪುಗಾರಿಕೆ ತೀವ್ರಗೊಂಡಿದ್ದು ಸಮಾವೇಶ ನಡೆಸಿ ಶಕ್ತಿಪ್ರದರ್ಶನಕ್ಕೆ ಅತೃಪ್ತರ ಗುಂಪು ನಿರ್ಧರಿಸಿದೆ. ಜಿಲ್ಲೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು ನ.7ರವರೆಗೆ ಯಾವುದೇ ಚಟುವಟಿಕೆ ನಡೆಸದಂತೆ ಮತ್ತು ಆ ಬಳಿಕ ಚರ್ಚೆಗೆ ಕರೆಯುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅತೃಪ್ತ ಗುಂಪಿಗೆ ಸೂಚನೆ ನೀಡಿದ್ದಾರೆ.

Vijaya Karnataka Web 6 Nov 2020, 8:06 am
ಸುಳ್ಯ: ಸುಳ್ಯ ಬಿಜೆಪಿಯಲ್ಲಿ ಸ್ಪಷ್ಟವಾಗಿ ಎರಡು ಬಣ ಉಂಟಾಗಿದ್ದು, ಪಕ್ಷದ ಚಟುವಟಿಕೆಗಳಿಗೆ ಕರೆಯದೆ ತಮ್ಮನ್ನು ಕಡೆಗಣಿಸುತ್ತಿರುವುದಾಗಿ ಎಸ್‌.ಎನ್‌.ಮನ್ಮಥ, ಎನ್‌.ಎ.ರಾಮಚಂದ್ರ ಮತ್ತಿತರ ನೇತೃತ್ವದಲ್ಲಿ ಬಿಜೆಪಿಯ 25ಕ್ಕೂ ಹೆಚ್ಚು ಮಂದಿ ಹಿರಿಯ ನಾಯಕರು ಸಭೆ ನಡೆಸಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಅವರಿಗೆ ದೂರು ನೀಡಿದ್ದರು. ಬಳಿಕ ಅವರನ್ನು ಕರೆಸಿ ಜಿಲ್ಲಾಧ್ಯಕ್ಷರು ಚರ್ಚೆ ನಡೆಸಿದ್ದರು. ಆದರೆ ಭೇಟಿ ಫಲಪ್ರದವಾಗದ ಹಿನ್ನೆಲೆಯಲ್ಲಿ ಅತೃಪ್ತರು ಸುದ್ದಿಗೋಷ್ಠಿ ನಡೆಸಿ ಅಸಮಾಧಾನವನ್ನು ಸಾರ್ವಜನಿಕವಾಗಿ ತೋರ್ಪಡಿಸಲು ಮತ್ತು ಸಮಾವೇಶ ನಡೆಸಿ ಶಕ್ತಿ ಪ್ರದರ್ಶನ ನಡೆಸಲು ನಿರ್ಧರಿಸಿದ್ದರು. ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನ.7ರ ಬಳಿಕ ಅವರ ಜತೆ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Vijaya Karnataka Web bjp


ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜಿನಾಮೆಗೆ ಪಟ್ಟು
ಸುಳ್ಯ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್‌ ಶೆಟ್ಟಿ ಮೇನಾಲ ಕೂಡಲೇ ರಾಜಿನಾಮೆ ನೀಡಬೇಕು ಅಥವಾ ಅವರನ್ನು ಬದಲಾವಣೆ ಮಾಡಬೇಕು. ಎನ್‌.ಎ.ರಾಮಚಂದ್ರ, ಎಸ್‌.ಎನ್‌.ಮನ್ಮಥ ಅವರನ್ನು ಬಿಜೆಪಿ ಕೋರ್‌ ಕಮಿಟಿಗೆ ಸೇರಿಸಬೇಕು ಎಂಬುದು ಅತೃಪ್ತರ ಗುಂಪಿನ ಪ್ರಮುಖ ಬೇಡಿಕೆ.
ಮಾದರಿಯಾದ ಮಂಗಳೂರು ಕಾರ್ಯಕಾರಿಣಿ

ಮಂಡಲ ಕೋರ್‌ ಕಮಿಟಿಯಲ್ಲಿ ಕೆಲವೇ ಕೆಲವು ಮಂದಿ ಇದ್ದು ಅಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಎಲ್ಲರ ಮೇಲೆ ಹೇರಲಾಗುತ್ತಿದೆ. ಸುಳ್ಯ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಏಕಪಕ್ಷೀಯ ತೀರ್ಮಾನ ಕೈಗೊಂಡು ಪ್ರಮುಖ ನೇತಾರರನ್ನು ಮತ್ತು ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ ಎಂಬುದು ಅತೃಪ್ತರ ಗುಂಪು ಜಿಲ್ಲಾ ಪ್ರಮುಖರ ಮುಂದೆ ಇರಿಸಿದ ಪ್ರಮುಖ ಆರೋಪ. ಆದರೆ ಈ ಬೇಡಿಕೆ ಹಾಗೂ ಆರೋಪಗಳಿಗೆ ಜಿಲ್ಲಾ ನೇತೃತ್ವ ಸೂಕ್ತವಾದ ಉತ್ತರ ನೀಡದ ಕಾರಣ ಚರ್ಚೆ ಮುರಿದು ಬಿದ್ದಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಬಂಡಾಯವಾಗಿ ಸ್ಪರ್ಧಿಸಿ ಗೆದ್ದ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನ ತ್ಯಜಿಸುವಂತೆ ಜಿಲ್ಲಾ ಪ್ರಮುಖರು ಮುಂದಿಸಿದ ಸಲಹೆಯನ್ನು ಅತೃಪ್ತರ ಗುಂಪು ನಿರಾಕರಿಸಿದೆ.
ರಾಜ್ಯದಲ್ಲಿ ಮಿಷನ್ 150! ಕಾರ್ಯಕಾರಿಣಿ ಸಭೆಯಲ್ಲಿ ನಳಿನ್ ಟಾರ್ಗೆಟ್‌

10 ಗ್ರಾಮಗಳಲ್ಲಿ
ಬಲ ಪ್ರದರ್ಶನಕ್ಕೆ ನಿರ್ಧಾರ
ತಮ್ಮ ಬೇಡಿಕೆಗಳಿಗೆ ಪಕ್ಷದ ಜಿಲ್ಲಾ ನೇತೃತ್ವ ಸ್ಪಷ್ಟವಾದ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 8-10 ಗ್ರಾಮಗಳಲ್ಲಿ ಬಂಡಾಯ ಸ್ಪರ್ಧೆ ನೀಡಿ ಬಲ ಪ್ರದರ್ಶನಕ್ಕೆ ಅತೃಪ್ತರ ಗುಂಪು ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆಅಧಿಕಾರಕ್ಕೆ, ಕಾರ್ಯಕಾರಿಣಿ ಸಭೆಯಲ್ಲಿ ಬಿಎಸ್‌ವೈ ವಿಶ್ವಾಸ

ಕಳೆದ ವರ್ಷ ಎಸ್‌ಸಿಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಏಳು ಮಂದಿ ಅಡ್ಡ ಮತದಾನ ಮಾಡಿದ ಕಾರಣ ಸಹಕಾರ ಭಾರತಿ ಅಭ್ಯರ್ಥಿಯ ಸೋಲಿಗೆ ಕಾರಣವಾಗಿತ್ತು. ಇದರಿಂದ ಸುಳ್ಯ ಬಿಜೆಪಿಯಲ್ಲಿ ದೊಡ್ಡ ಬಿರುಗಾಳಿಯೇ ಎದ್ದಿತ್ತು. ಯಾರು ಅಡ್ಡಮತದಾನ ಮಾಡಿದ್ದಾರೆ ಎಂದು ಪತ್ತೆ ಹಚ್ಚಲು ವಿಫಲವಾದ ಪಕ್ಷ ಚುನಾವಣೆಯಲ್ಲಿ ಪ್ರತಿನಿಧಿಗಳಾಗಿದ್ದ 17 ಮಂದಿಯ ಮೇಲೆ ಕ್ರಮಕ್ಕೆ ಮುಂದಾಗಿ ಅವರ ರಾಜೀನಾಮೆ ಕೇಳಿತ್ತು. ಆದರೆ ಹಲವು ಮಂದಿ ರಾಜಿನಾಮೆ ನೀಡಲಿಲ್ಲ. ಬಳಿಕ ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಹಲವು ಕಡೆಗಳಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಸ್ಪರ್ಧೆ ನಡೆಸಿತ್ತು. ಅರಂತೋಡು, ಐವರ್ನಾಡು ಮತ್ತಿತರ ಕಡೆಗಳಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳಿಗೆ ಹೀನಾಯ ಸೋಲಾಗಿತ್ತು. ತಮ್ಮ ಬೇಡಿಕೆಗಳು ಈಡೇರದೆ ಇದ್ದರೆ ಇದೇ ಮಾದರಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಬಂಡಾಯ ಸ್ಪರ್ಧೆಗೆ ಅತೃಪ್ತರ ಗುಂಪು ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ